ಕಥುವಾ ಅತ್ಯಾಚಾರ ಪ್ರಕರಣ ವಿರೋಧಿಸಿ ಪ್ರತಿಭಟನೆಯ ಚಿತ್ರ 
ದೇಶ

ಕಥುವಾ ವಕೀಲರನ್ನು ಸಂಪರ್ಕಿಸಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳುವಂತೆ ಸಿಜೆಐಗೆ ವಕೀಲರ ಮನವಿ

ಕಥುವಾ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲಿನ ವಕೀಲರನ್ನು ಸಂಪರ್ಕಿಸಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳುವಂತೆ...

ನವದೆಹಲಿ :  ಕಥುವಾ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲಿನ ವಕೀಲರನ್ನು ಸಂಪರ್ಕಿಸಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳುವಂತೆ ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಾಧೀಶ ದೀಪಕ್ ಮಿಶ್ರಾ ಬಳಿ ಸುಪ್ರೀಂಕೋರ್ಟ್ ನ ವಕೀಲರ ತಂಡವೊಂದು ಮನವಿ ಸಲ್ಲಿಸಿದೆ.

ಕುಥುವಾ ಅತ್ಯಾಚಾರ ಪ್ರಕರಣದಿಂದ ಉಂಟಾಗಿರುವ  ಕಾನೂನು ಸುವ್ಯವಸ್ಥೆ ಸಂಬಂಧ ಜಮ್ಮು ವಕೀಲರಿಂದ  ಮಾಹಿತಿ ಪಡೆಯಬಹುದು ಎಂದು ವಕೀಲ ಪಿ. ವಿ. ದಿನೇಶ್ ಸುಪ್ರೀಂಕೋರ್ಟ್ ಗೆ ತಿಳಿಸಿದ್ದು, ಈ ಸಂಬಂಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳುವಂತೆ ಮುಖ್ಯ ನ್ಯಾಯಾಧೀಶರ ಬಳಿ ಮನವಿ ಮಾಡಿಕೊಂಡಿದ್ದಾರೆ.

ಈ ಪ್ರಕರಣದ ವಿಚಾರಣೆ ನಡೆಸುವುದಾಗಿ ಮುಖ್ಯ ನ್ಯಾಯಾಧೀಶರ ನೇತೃತ್ವದ ವಿಭಾಗೀಯ ಪೀಠ ತಿಳಿಸಿದೆ.

 ಘಟನೆ ಸಂಬಂಧ ತನಿಖೆಗಾಗಿ ವಿಶೇಷ ತಂಡವೊಂದು ರಚಿಸಲಾಗಿದ್ದು, 8 ಜನರನ್ನು ಬಂಧಿಸಲಾಗಿದೆ. ಸಾಕ್ಷ್ಯನಾಶ ಸಂಬಂಧ ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳು ಹಾಗೂ  ಹೆಡ್ ಕಾನ್ಸ್ ಟೇಬಲ್ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ.

ಮುಸ್ಲಿಂ ಸಮುದಾಯದ ಬಾಲಕಿ ಜನವರಿ 10 ರಂದು ಮನೆಯಿಂದ ನಾಪತ್ತೆಯಾಗಿದ್ದಳು, ವಾರದ ಬಳಿಕ ಆದೇ ಸ್ಥಳದಲ್ಲಿ ಆಕೆಯ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರ ಮೌನವನ್ನು ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮಾರ್ ಅಬ್ದುಲ್ಲಾ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT