ಸಾಂದರ್ಭಿಕ ಚಿತ್ರ 
ದೇಶ

ಒಡಿಶಾ: ಮಾಟ, ಮಂತ್ರದ ಹೆಸರಿನಲ್ಲಿ ತ್ರಿವಳಿ ಹತ್ಯೆ, 9 ಮಂದಿಗೆ ಗಲ್ಲು ಶಿಕ್ಷೆ

ಮಾಟ, ಮಂತ್ರದ ಹೆಸರಿನಲ್ಲಿ ಒಂದೇ ಕುಟುಂಬದ ಮೂವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ....

ರಾಯಗಢ: ಮಾಟ, ಮಂತ್ರದ ಹೆಸರಿನಲ್ಲಿ ಒಂದೇ ಕುಟುಂಬದ ಮೂವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಡಿಶಾ ಕೋರ್ಟ್ 9 ಅಪರಾಧಿಗಳಿಗೆ ಶುಕ್ರವಾರ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
18 ತಿಂಗಳ ಹಿಂದೆ ಒಡಿಶಾದ ರಾಯಗಢ ಜಿಲ್ಲೆಯಲ್ಲಿ ನಡೆದ ತ್ರಿವಳಿ ಕೊಲೆ ಪ್ರಕರಣದ ವಿಚಾರಣೆ ನಡೆಸಿದ ಗುನುಪುರ್ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಸುಭೆಂದು ಕುಮಾರ್ ಪಟಿ ಅವರು, ಇದೊಂದು ಅತ್ಯಂತ ಅಪರೂಪ ಪ್ರಕರಣ ಎಂದು ಪರಿಗಣಿಸಿ 9 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ್ದಾರೆ.
ಮಾಟ, ಮಂತ್ರ ಮಾಡಿಸುತ್ತಿದ್ದ 9 ಮಂದಿ, ಸೆಪ್ಟೆಂಬರ್ 9, 2016ರಂದು ಅಸಿನ್ ಸಬರಾ ಆತನ ಪತ್ನಿ ಅಂಬಾಯಿ ಸಬರಾ ಮತ್ತು ಹಿರಿಯ ಪುತ್ರಿ ಆಸಿಮಾನಿ ಸಬರಾಳನ್ನು ನಿಗೂಢ ಸ್ಥಳಕ್ಕೆ ಕರೆದೊಯ್ದು ಅವರ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿದ್ದರು. ಹಲ್ಲೆಯಿಂದ ಪ್ರಜ್ಞೆ ತಪ್ಪಿದ ನಂತರ ಅವರ ಖಾಸಗಿ ಭಾಗಕ್ಕೆ ಮತ್ತು ಕಣ್ಣಿನಂತಹ ಸೂಕ್ಷ ಜಾಗಕ್ಕೆ ಕೀಟನಾಶಕ ಇಂಜೆಕ್ಷನ್ ಮಾಡಿ, ಬಳಿಕ ಜೀವಂತವಾಗಿ ಸುಟ್ಟು ಹಾಕಿದ್ದರು.
ಅಸಿನ್ ಸಬರಾ ಅವರ ಮತ್ತೊಬ್ಬ ಪತ್ರಿ ಮಿಲಿತಾ ಸಬರಾ ಎದುರೇ ದುಷ್ಕರ್ಮಿಗಳು ಈ ಅಮಾನವೀಯ ಕೃತ್ಯ ಎಸಗಿದ್ದು, ವಿಷಯ ಬಾಯಿ ಬಿಟ್ಟರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು ಎಂದು ಹೆಚ್ಚುವರಿ ಸರ್ಕಾರಿ ಅಭಿಯೋಜಕ ಕೃಷ್ಣಚಂದ್ರ ಸೇನಾಪತಿ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT