ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ 
ದೇಶ

ಕತುವಾ, ಉನ್ನಾವೋ ಅತ್ಯಾಚಾರ ಪ್ರಕರಣಗಳಿಗೆ ವಿಪಕ್ಷಗಳು ಜಾತಿಯ ಬಣ್ಣ ನೀಡುತ್ತಿವೆ: ಬಿಜೆಪಿ

ಕತುವಾ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಿಗೆ ವಿರೋಧ ಪಕ್ಷಗಳು ಜಾತಿಯ ಬಣ್ಣ ನೀಡುತ್ತಿವೆ ಎಂದು ಬಿಜೆಪಿ...

ನವದೆಹಲಿ: ಕತುವಾ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಿಗೆ ವಿರೋಧ ಪಕ್ಷಗಳು  ಜಾತಿಯ ಬಣ್ಣ ನೀಡುತ್ತಿವೆ ಎಂದು ಬಿಜೆಪಿ ಶುಕ್ರವಾರ ಹೇಳಿದೆ. 
ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿಯವರು ಮಾತನಾಡಿ, ಪ್ರಕರಣಗಳ ಸಂಬಂಧ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸಬಾರದಿದತ್ತು. ಅಧಿಕಾರಿಗಳು ಪ್ರಕರಣದ ತನಿಖೆ ನಡೆಸುತ್ತಿದ್ದು, ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಬಾರದಿತ್ತು ಎಂದು ಹೇಳಿದ್ದಾರೆ. 
ಬಳಿಕ ಮಧ್ಯರಾತ್ರಿ ಕಾಂಗ್ರೆಸ್ ನಡೆಸಿದ್ದ ಕ್ಯಾಂಡಲ್ ಲೈಟ್ ಮಾರ್ಚ್ ಕುರಿತಂತೆ ಮಾತನಾಡಿದ ಅವರು, 1984 ಗಲಭೆ ಸಂದರ್ಭದಲ್ಲಿಯೂ ಮಹಿಳೆಯರ ಮೇಲೆ ದೌರ್ಜನ್ಯ ಎಸಲಾಗಿತ್ತು. ಆದರೆ, ಅಂದು ಏಕೆ ಕಾಂಗ್ರೆಸ್ ಪ್ರತಿಭಟನೆ ನಡೆಸಲಿಲ್ಲ. ಪಿಕ್ ಆ್ಯಂಡ್ ಚೂಸ್ ನೀತಿಯನ್ನು ಕಾಂಗ್ರೆಸ್ ಮೊದಲು ನಿಲ್ಲಿಸಬೇಕು. ಕಾಂಗ್ರೆಸ್ ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ. 
ಅವರ ತಂತ್ರ ಹಾಗೂ ಯೋಜನೆಗಳನ್ನು ನೀವು ನೋಡಬಹುದು. ಮೊದಲು ಅಲ್ಪಸಂಖ್ಯಾತರು ಅಲ್ಪಸಂಖ್ಯಾತರು ಎಂದು ಹೇಳುತ್ತಿದ್ದರು. ನಂತರ ದಲಿತರು ದಲಿತರು ಎಂದು ಹೇಳಲು ಆರಂಭಿಸಿದ್ದರು. ಇದೀಗ ಮಹಿಳೆ ಮಹಿಳೆ ಎಂದು ಹೇಳುತ್ತಿದ್ದಾರೆ. ರಾಜ್ಯದ ವಿಚಾರಗಳಿಗೆ ಕೇಂದ್ರವನ್ನು ದೂಷಿಸುತ್ತಾರೆ. ರಾಜ್ಯ ಸರ್ಕಾರಗಳು ಕ್ರಮ ಕೈಗೊಳ್ಳದೇ ಇರುವುದರಿಂದ ಈ ರೀತಿಯ ಘಟನೆಗಳು ಸಂಭವಿಸುತ್ತಿವೆ ಎಂದು ತಿಳಿಸಿದ್ದಾರೆ. 
ಉನ್ನಾವೋ ಘಟನೆ ನಡೆದಿರುವುದು 10 ತಿಂಗಳ ಹಿಂದೆ. ಘಟನೆ ಕುರಿತಂತೆ ಪೊಲೀಸರು ಹೇಳಿಕೆ ನೀಡಿದ್ದರು. ಆದರೆ, ಬಿಜೆಪಿ ನಾಯಕನ ಹೆಸರನ್ನು ಬಹಿರಂಗ ಪಡಿಸಿರಲಿಲ್ಲ. ಅತ್ಯಾಚಾರ ಸಂತ್ರಸ್ತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದರು. ಪತ್ರದಲ್ಲಿ ಬಿಜೆಪಿ ನಾಯಕನ ಹೆಸರನ್ನು ಹೇಳಿದ್ದರು. ಬಳಿಕ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT