'ಕ್ಯಾಂಡಲ್ ಲೈಟ್ ಮಾರ್ಚ್' ವೇಳೆ ನೂಕುನುಗ್ಗಲು: ಜನಜಂಗುಳಿಯ ದುರ್ವರ್ತನೆಗೆ ಸಿಟ್ಟಿಗೆದ್ದ ಪ್ರಿಯಾಂಕಾ ವಾದ್ರಾ 
ದೇಶ

'ಕ್ಯಾಂಡಲ್ ಲೈಟ್ ಮಾರ್ಚ್' ವೇಳೆ ನೂಕುನುಗ್ಗಲು: ಜನಜಂಗುಳಿಯ ದುರ್ವರ್ತನೆಗೆ ಪ್ರಿಯಾಂಕಾ ವಾದ್ರಾ ಸಿಟ್ಟು

ಕತುವಾ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳ ವಿರುದ್ದ ಪ್ರತಿಭಟನೆ ನಡೆಸುವ ಸಲುವಾಗಿ ಗುರುವಾರ ಮಧ್ಯರಾತ್ರಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದಿದ್ದ ಕ್ಯಾಂಡಲ್ ಲೈಟ್ ಮಾರ್ಚ್' ವೇಳೆ ನೂಕುನುಗ್ಗಲು ಏರ್ಪಟ್ಟಿದ್ದು, ಇದಕ್ಕೆ ಪ್ರಿಯಾಂಕಾ ಅವರು...

ನವದೆಹಲಿ: ಕತುವಾ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳ ವಿರುದ್ದ ಪ್ರತಿಭಟನೆ ನಡೆಸುವ ಸಲುವಾಗಿ ಗುರುವಾರ ಮಧ್ಯರಾತ್ರಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದಿದ್ದ ಕ್ಯಾಂಡಲ್ ಲೈಟ್ ಮಾರ್ಚ್' ವೇಳೆ ನೂಕುನುಗ್ಗಲು ಏರ್ಪಟ್ಟಿದ್ದು, ಇದಕ್ಕೆ ಪ್ರಿಯಾಂಕಾ ಅವರು ತೀವ್ರವಾಗಿ ಕೆಂಡಾಮಂಡಲಗೊಂಡಿದ್ದರು ಎಂದು ವರದಿಗಳು ತಿಳಿಸಿವೆ. 
ಪ್ರತಿಭಟನೆ ವೇಳೆ ಜನರು ರಾಹುಲ್ ಅವರ ಸಹೋದರಿ ಪ್ರಿಯಾಂಕಾ ಅವರನ್ನೂ ತಳ್ಳಿದ್ದು, ಜನಜಂಗುಳಿಯ ಈ ದುರ್ವರ್ತನೆಗೆ ಪ್ರಿಯಾಂಕಾ ಅವರು ತೀವ್ರವಾಗಿ ಸಿಟ್ಟಿಗೆದ್ದಿದ್ದಾರೆ. ನಾವು ಯಾವ ಕಾರಣಕ್ಕಾಗಿ ಇಲ್ಲಿ ಸೇರಿದ್ದೇವೆಂಬುದನ್ನು ನೆನಪಿಟ್ಟುಕೊಂಡು ಸಂಯದಿಂದ ವರ್ತಿಸಿ ಎಂದು ಏರು ಧ್ವನಿಯಲ್ಲಿ ಹೇಳಿದ್ದಾರೆ. 
ತಳ್ಳಾಟ ನಡೆಸುತ್ತಿರುವವರು ತಮ್ಮ ಮನೆಗಳಿಗೆ ಹೋಗಬೇಕು. ಜನರು ಸ್ವಲ್ಪ ಸಂಯಮದಿಂದ ನಡೆದುಕೊಳ್ಳಿ, ಮೌನವಾಗಿ ಸಾಗಿ ಎಂದು ಸಿಟ್ಟಿನಿಂದ ಗುಡುಗಿದ್ದಾರೆಂದು ತಿಳಿದುಬಂದಿದೆ. 
ಜಮ್ಮುವಿನ ಕತುವಾದಲ್ಲಿ ನಡೆದಿದ್ದ ಬಾಲಕಿಯ ಮೇಲಿನ ಸಾಮೂಹಿಕ ಅತ್ಯಾಚಾರ, ಕೊಲೆ ಹಾಗೂ ಉತ್ತರಪ್ರದೇಶದ ಉನ್ನಾವೋದಲ್ಲಿ ಯುವತಿ ಮೇಲೆ ನಡೆದ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ರಾಜಧಾನಿ ದೆಹಲಿಯ ಇಂಡಿಯಾ ಗೇಟ್ ಬಳಿ ತಡರಾತ್ರಿ ರಾಹುಲ್ ಗಾಂಧಿ ಸೇರಿ ಇನ್ನಿತರೆ ನಾಯಕರು ಕ್ಯಾಂಡಲ್ ಲೈಟ್ ಮಾರ್ಚ್ ನಡೆಸಿದರು. ಈ ಪ್ರತಿಭಟನೆಯಲ್ಲಿ ಸಾಕಷ್ಟು ಜನರು ಭಾಗಿಯಾಗಿದ್ದರು. 
ಈ ಜಾಥಾದಲ್ಲಿ ರಾಹುಲ್ ಆವರದೊಂದಿಗೆ ಪ್ರಿಯಾಂಕಾ ಹಾಗೂ ಅವರ ಪತಿ ರಾಬರ್ಟ್ ವಾದ್ರಾ ಅವರೂ ಕೂಡ ಸಾಥ್ ನೀಡಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ, ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ: 27 ಕೋಟಿ ರೂ. ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!