ಅಂಬೇಡ್ಕರ್ ಪ್ರತಿಮೆ 
ದೇಶ

ಬಿಜೆಪಿ ನಾಯಕರು ಪುಷ್ಪ ನಮನ ಸಲ್ಲಿಸಿದ ಬಳಿಕ ಅಂಬೇಡ್ಕರ್ ಪ್ರತಿಮೆ ಸ್ವಚ್ಛಗೊಳಿಸಿದ ದಲಿತರು

ಕೇಂದ್ರ ಸಚಿವೆ ಮನೆಕಾ ಗಾಂಧಿ ಮತ್ತು ಇತರೆ ಬಿಜೆಪಿ ನಾಯಕರು ವಡೊದರಲ್ಲಿರುವ ಡಾ.ಬಿಆರ್ ಅಂಬೇಡ್ಕರ್....

ವಡೊದರ: ಕೇಂದ್ರ ಸಚಿವೆ ಮನೆಕಾ ಗಾಂಧಿ ಮತ್ತು ಇತರೆ ಬಿಜೆಪಿ ನಾಯಕರು ವಡೊದರಲ್ಲಿರುವ ಡಾ.ಬಿಆರ್ ಅಂಬೇಡ್ಕರ್ ಅವರ 127ನೇ ಜಯಂತಿ ಪ್ರಯುಕ್ತ ಸಂವಿಧಾನ ಶಿಲ್ಪಿಗೆ ಪುಷ್ಪ ನಮನ ಸಲ್ಲಿಸಿದ ಬಳಿಕ ದಲಿತ ಸಮುದಾಯದ ಸದಸ್ಯರು ಪ್ರತಿಮೆ ಸ್ವಚ್ಛಗೊಳಿಸಿದ ಘಟನೆ ಶನಿವಾರ ನಡೆದಿದೆ.
ಬಿಜೆಪಿ ನಾಯಕರು ಬರುವ ಮುನ್ನವೇ ಪ್ರತಿಮೆ ಬಳಿ ಉಪಸ್ಥಿತರಿದ್ದು ಗೌರವ ಸಲ್ಲಿಸಿದ ಬರೋಡಾ ಮಹಾರಾಜ ಸಯಾಜಿರಾವ್ ವಿಶ್ವವಿದ್ಯಾಲಯ ಎಸ್ಸಿ, ಎಸ್ಟಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಥಾಕೋರ್ ಸೊಲಂಕಿ ಅವರು, ಬಿಜೆಪಿ ನಾಯಕರಿಂದ ಇಲ್ಲಿನ ಪರಿಸರ ಮಲಿನವಾಗಿದೆ ಎಂದು ದಲಿತ ನಾಯಕರೊಬ್ಬರು ಆರೋಪಿಸಿದ್ದಾರೆ.
ಸೊಲಂಕಿ ನೇತೃತ್ವದಲ್ಲಿ ದಲಿತ ಸಮುದಾಯದ ಸದಸ್ಯರು, ಕೇಂದ್ರ ಸಚಿವೆ ಹಾಗೂ ಅವರೊಂದಿಗೆ ಆಗಮಿಸಿದ್ದ ಬಿಜೆಪಿ ನಾಯಕರ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಇಬ್ಬರ ನಡುವೆ ಕೆಲಕಾಲ ವಾಗ್ವಾದ ಸಹ ನಡೆಯಿತು. ಆದರೆ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.
ಬಿಜೆಪಿ ನಾಯಕರು ಅಂಬೇಡ್ಕರ್ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಸ್ಥಳದಿಂದ ತೆರಳಿದ ಬಳಿಕ ದಲಿತ ಸಮುದಾಯದ ಸದಸ್ಯರು, ಪ್ರತಿಮೆಯನ್ನು ಹಾಲು ಮತ್ತು ನೀರಿನಿಂದ ಸ್ವಚ್ಛಗೊಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT