ಸಿಖ್ ಪ್ರತಿಭಟನೆ 
ದೇಶ

ದಲಿತ, ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳ ವಿರುದ್ಧ ಸಿಖ್ ಪ್ರತಿಭಟನೆ

ಭಾರತದಲ್ಲಿ ನಡೆಯುತ್ತಿರುವ ದಲಿತ, ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳ ವಿರುದ್ಧ ಸಿಖ್ ಸಮುದಾಯದವರು ಪ್ರತಿಭಟನೆ ನಡೆಸಿದ್ದಾರೆ.

ವಿಶ್ವಸಂಸ್ಥೆ: ಭಾರತದಲ್ಲಿ ನಡೆಯುತ್ತಿರುವ ದಲಿತ, ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳ ವಿರುದ್ಧ ಸಿಖ್ ಸಮುದಾಯದವರು ಪ್ರತಿಭಟನೆ ನಡೆಸಿದ್ದಾರೆ. 
ವಿಶ್ವಸಂಸ್ಥೆಯ ಕಚೇರಿಯ ಬಳಿ ಸಿಖ್ ಸಮುದಾಯದವರು ಪ್ರತಿಭಟನೆ ನಡೆಸಿದ್ದು, ಕಪ್ಪು ಬ್ಯಾಂಡ್, ಕಪ್ಪು ಟರ್ಬನ್ ಗಳನ್ನು ಧರಿಸಿ ಸಿಖ್ ಸಮುದಾಯದವರು ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.  ಒಂದೆಡೆ ಸಿಖ್ ಸಮುದಾಯ, ಮುಸ್ಲಿಮರು, ಕ್ರೈಸ್ತರು, ದಲಿತರ ವಿರುದ್ಧ ದೌರ್ಜನ್ಯ ನಡೆಯುತ್ತಿದ್ದು ಅಂಬೇಡ್ಕರ್ ಅವರ ಆದರ್ಶಗಳಿಗೆ ಹಾನಿ ಉಂಟಾಗುತ್ತಿದೆ. ಮತ್ತೊಂದೆಡೆ ಭಾರತ ಸರ್ಕಾರ ಅಂಬೇಡ್ಕರ್ ಅವರ ಜನ್ಮದಿನಾಚರಣೆಯನ್ನು ಆಚರಿಸುತ್ತಿದೆ ಇದು ಭಾರತ ಸರ್ಕಾರದ ಬೂಟಾಟಿಕೆಯನ್ನು ತೋರುತ್ತದೆ ಎಂದು ಪ್ರತಿಭಟನಾ ನಿರತರು ಹೇಳಿದ್ದಾರೆ. 
ಭಾರತದಲ್ಲಿ ಸ್ವರ್ಣ ಮಂದಿರದ ನಿಯಮಗಳನ್ನು ಉಲ್ಲಂಘಿಸಲಾಗಿತ್ತು. ಸಿಖ್ ಸಮುದಾಯದ ಸಾವಿರಾರು ಜನರನ್ನು ಹತ್ಯೆ ಮಾಡಲಾಗಿದೆ. ಆದರೂ ಸಹ ಅದಕ್ಕೆ ಕಾರಣವಾದವರ ವಿರುದ್ಧ ಈ ವರೆಗೂ ಕ್ರಮ ಕೈಗೊಂಡಿಲ್ಲ ಎಂದು ಸಿಖ್ ಸಮುದಾಯದವರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!