ವಿಷ್ಣು ಸದಾಶಿವ ಕೊಕ್ಜೆ 
ದೇಶ

ವಿಹೆಚ್‍ಪಿ ನೂತನ ಅಂತರಾಷ್ಟ್ರೀಯ ಅಧ್ಯಕ್ಷರಾಗಿ ವಿ.ಎಸ್ ಕೊಕ್ಜೆ ಆಯ್ಕೆ

ವಿಶ್ವ ಹಿಂದೂ ಪರಿಷತ್ ಇತಿಹಾಸದಲ್ಲಿ ಮೊದಲ ಬಾರಿಗೆ ನಡೆದ ಅಂತರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕಾಗಿ ಚುನಾವಣೆ ನಡೆದಿದ್ದು ಹಿಹಿಮಾಚಲ ಪ್ರದೇಶದ ಮಾಜಿ ರಾಜ್ಯಪಾಲ ವಿಷ್ಣು ಸದಾಶಿವ ಕೊಕ್ಜೆ......

ನವದೆಹಲಿ: ವಿಶ್ವ ಹಿಂದೂ ಪರಿಷತ್ ಇತಿಹಾಸದಲ್ಲಿ ಮೊದಲ ಬಾರಿಗೆ ಅಂತರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕಾಗಿ ಚುನಾವಣೆ ನಡೆದಿದ್ದು ಹಿಹಿಮಾಚಲ ಪ್ರದೇಶದ ಮಾಜಿ ರಾಜ್ಯಪಾಲ ವಿಷ್ಣು ಸದಾಶಿವ ಕೊಕ್ಜೆ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಒಟ್ಟು 273 ಮತದಾರರಲ್ಲಿ 192 ಮಂದಿ ಇಂದು ಮತದಾನದಲ್ಲಿ ಭಾಗವಹಿಸಿದ್ದು ಅದರಲ್ಲಿ ಕೊಕ್ಜೆ 131 ಮತಗಳನ್ನು ಗಳಿಸಿದ್ದಾರೆ. ಇವರ ಪ್ರತಿಸ್ಪರ್ಧಿಯಾಗಿದ್ದ ರಾಘವ್ ರೆಡ್ಡಿ 60 ಮತಗಳನ್ನು ಮಾತ್ರವೇ ಪಡೆದಿದ್ದಾರೆ.
ಹೊಸ ಅಂತಾರಾಷ್ಟ್ರೀಯ ಅಧ್ಯಕ್ಷರ ನೇಮಕಾತಿ ಸಂಬಂಧ ಸದಸ್ಯರಲ್ಲಿ ಒಮ್ಮತ ಏರ್ಪಡದ ಕಾರಣ ಚುನಾವಣೆ ಅನಿವಾರ್ಯವಾಯಿತು.ಎನ್ನಲಾಗಿದೆ. ಆದರೆ ಇದೇ ವೇಳೆಯಲ್ಲಿ ಪ್ರವೀಣ್ ತೊಗಡಿಯಾ ಮತ್ತು ಪ್ರಧಾನಿ ಮೋದಿ ಮಧ್ಯೆ ಭಿನ್ನಾಭಿಪ್ರಾಯಗಳಿದೆ. ಇದರ ಹಿನ್ನೆಲೆಯಲ್ಲಿ ವಿಹೆಚ್‍ಪಿ ಅಂತರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವ ಮೂಲಕ ತೊಗಡಿಯಾ ಪ್ರಭಾವವನ್ನು ಕುಗ್ಗಿಸಲು ತಂತ್ರ ನಡೆಸಲಾಗಿದೆ ಎಂಬ ಮಾತೂ ಕೇಳಿಬಂದಿದೆ.
ಯಾರು ಈ ವಿ.ಎಸ್. ಕೊಕ್ಜೆ?
1939, ಡಿಸೆಂಬರ್ 6 ರಂದು ಮಧ್ಯಪ್ರದೇಶದಲ್ಲಿ ವಿಷ್ಣು ಸದಾಶಿವ ಕೊಕ್ಜೆ ಜನಿಸಿದರು. ಇಂಧೋರ್ ನಲ್ಲಿ ಎಲ್.ಎಲ್.ಬಿ ಮುಗಿಸಿದ್ದ ಇವರು 1964 ರಲ್ಲಿ ವಕೀಲರಾಗಿ ವೃತ್ತಿಜೀವನ ಪ್ರಾರಂಭಿಸಿದ್ದರು. ಮಧ್ಯ ಪ್ರದೇಶ, ರಾಜಸ್ಥಾನ  ಹೈಕೋರ್ಟ್ ನ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದ ಇವರು ಭಾರತದ ಅಭಿವೃದ್ಧಿ ಕೌನ್ಸಿಲ್ ಅಧ್ಯಕ್ಷರಾಗಿದ್ದರು 
 2003 ರಿಂದ 2008 ರವರೆಗೆ ಹಿಮಾಚಲ ಪ್ರದೇಶದ ರಾಜ್ಯಪಾಲರಾಗಿ ಕಾರ್ಯ ನಿರ್ವಹಿಸಿದ್ದ ಕೊಕ್ಜೆ  ಅವರನ್ನು ಅಂದಿನ ವಾಜಪೇಯಿ ಸರ್ಕಾರ ರಾಜ್ಯಪಾಲನ್ನಾಗಿ ನೇಮಕ ಮಾಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT