ಸಾಂದರ್ಭಿಕ ಚಿತ್ರ 
ದೇಶ

ಕೈ ಪಕ್ಷದ ಚಿನ್ಹೆ ವಿವಾದ: ಏಪ್ರಿಲ್ 18 ಕ್ಕೆ ಚುನಾವಣಾ ಆಯೋಗದಿಂದ ವಿಚಾರಣೆ

ಕಾಂಗ್ರೆಸ್ ಪಕ್ಷದ ಚಿನ್ಹೆ - ಹಸ್ತದ ಗುರುತನ್ನು ರದ್ದುಪಡಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಯನ್ನು ಚುನಾವಣಾ ಆಯೋಗವು ಇದೇ ಏ.18ರಂದು ಕೈಗೆತ್ತಿಕೊಳ್ಳಲಿದೆ.

ನವದೆಹಲಿ: ಕಾಂಗ್ರೆಸ್ ಪಕ್ಷದ ಚಿನ್ಹೆ - ಹಸ್ತದ ಗುರುತನ್ನು ರದ್ದುಪಡಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಯನ್ನು ಚುನಾವಣಾ ಆಯೋಗವು ಇದೇ ಏ.18ರಂದು ಕೈಗೆತ್ತಿಕೊಳ್ಳಲಿದೆ.
ಭಾರತೀಯ ಜನತಾ ಪಕ್ಷ (ಬಿಜೆಪಿ) ವಕ್ತಾರ ಮತ್ತು ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಈ ಸಂಬಂಧ ಅರ್ಜಿ ಸಲ್ಲಿಸಿದ್ದಾರೆ.ಏಪ್ರಿಲ್ 18ರ ಮಧ್ಯಾಹ್ನ 3 ಗಂಟೆಗೆ ಉಪ ಚುನಾವಣಾ ಆಯುಕ್ತ ಚಂದ್ರ ಭೂಷಣ್  ಕುಮಾರ್ ಅವರ ಮುಂದೆ ಈ ಅರ್ಜಿ ವಿಚಾರಣೆಗೆ ಬರಲಿದೆ.
ಅಶ್ವಿನಿ ಕುಮಾರ್ ಅವರು ಈ ಜನವರಿಯಲ್ಲಿ ಆಯೋಗಕ್ಕೆ ಪತ್ರ ಬರೆದಿದ್ದು ಸಂವಿಧಾನದ 324ನೇ ವಿಧಿಯು ಮುಕ್ತ ಮತ್ತು ನ್ಯಾಯೋಚಿತ ಚುನಾವಣೆ ನಡೆಸಲು ಚುನಾವಣಾ ಆಯೋಗಕ್ಕೆ ಸ್ವಾತಂತ್ರ್ಯ ಹಾಗೂ ಅಧಿಕಾರ ನೀಡಿದೆ.ಎಂದಿದ್ದಾರೆ.
ಇದೇ ಪತ್ರದಲ್ಲಿ ಅಶ್ವಿನಿ ಕುಮಾರ್, ಕಾಂಗ್ರೆಸ್ ಪಕ್ಷಕ್ಕೆ ನೀಡಿರುವ ಹಸ್ತದ ಚಿನ್ಹೆಯು  ಮಾನವ ಶರೀರದ ಭಾಗ. ಸಂವಿಧಾನದ ನಿಯಮಾನುಸಾರ ಮಾನವ ದೇಹದ ಅಂಗವೊಂದನ್ನು ಪಕ್ಷದ ಚಿನ್ಹೆಯಾಗಿಸುವಂತಿಲ್ಲ. ಚುನಾವಣಾ ಸಂಕೇತವನ್ನು ಕಾಂಗ್ರೆಸ್ ಪಕ್ಷದವರು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಅವರ ಪತ್ರದಲ್ಲಿ ಅವರು ತಿಳಿಸಿದ್ದಾರೆ.
ಮತದಾನಕ್ಕೆ 48 ಗಂಟೆಗಳ.ಮುನ್ನ ಪ್ರಚಾರಕಾರ್ಯ ಅಮ್ತ್ಯವಾಗಲಿದೆ.1951 ರ ಜನಾಭಿಪ್ರಾಯ ಕಾಯ್ದೆ  1951ರ ಸೆ ಕ್ಷನ್ 130ರ ಅನುಸಾರ ಮತದಾನ ದಿನದಂದು ಮತಗಟ್ಟೆಯ 100 ಮೀಟರ್ ಆವರಣದೊಳಗೆ ಯಾವ ಚುನಾವಣಾ ಸಂಕೇತಗಳನ್ನೂ ಪ್ರದರ್ಶಿಸಬಾರದು. ಹೀಗಿದ್ದರೂ ಕಾಂಗ್ರೆಸ್ ಪಕ್ಷ ಮಾತ್ರ ಪ್ರಚಾರ ಅಂತ್ಯವಾದ ಬಳಿಕವೂ ಚಿನ್ಹೆಯನ್ನು ಬಳಸಿಕೊಳ್ಳುವ ಮೂಲಕ ಅದನ್ನು ದುರ್ಬಳಕೆ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಮತಗಟ್ಟೆಯ ಬಳಿ ಪಕ್ಷದ ಏಜೆಂಟರು ಹಾಜರಿದ್ದು ಮತದಾರರಿಗೆ ತಮ್ಮ ಹಸ್ತ ಪ್ರದರ್ಶಿಸುವ ಮೂಲಕ ಪಕ್ಷದ ಚಿನ್ಹೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಅವರು ಆ ಮೂಕ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಚಲಾಯಿಸುವಂತೆ ಪ್ರಚೋದಿಸುತ್ತಿದ್ದಾರೆ.ಈ ಮೂಲಕ .1951 ರ ಜನಾಭಿಪ್ರಾಯ ಕಾಯ್ದೆ 1951ರ ಸೆಕ್ಷನ್ 130ರ ಉಲ್ಲಂಘನೆಯಾಗುತ್ತಿದೆ ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ಪಕ್ಷದ ಚುನಾವಣಾ ಸಂಕೇತವನ್ನು ರದ್ದುಗೊಳಿಸಲು ಆಯೋಗ ಸರಿಯಾದ ಕ್ರಮಗಳನ್ನು ಕೈಗೊಳ್ಳಲು ಅಶ್ವಿನಿ ಕುಮಾರ್ ವಿನಂತಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT