ವೆಂಕಯ್ಯನಾಯ್ಡು 
ದೇಶ

ರಾಜಕೀಯ ಅಧಿಕಾರಕ್ಕಾಗಿ ಕೋಮುಶಕ್ತಿಗಳಿಂದ ದೇಶ ವಿಭಜನೆಯ ಯತ್ನ : ವೆಂಕಯ್ಯನಾಯ್ಡು

ಕಥುವಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ನಂತರ ದೇಶದ ಭವಿಷ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು, ರಾಜಕೀಯ ಉದ್ದೇಶಕ್ಕಾಗಿ ಕೋಮುಶಕ್ತಿಗಳು ಸಮಾಜದಲ್ಲಿನ ಸೌಹಾರ್ದತೆ ಹಾಳು ಮಾಡುತ್ತಿವೆ ಎಂದು ಆರೋಪಿಸಿದ್ದಾರೆ.

ನವದೆಹಲಿ : ಕಥುವಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ನಂತರ ದೇಶದ ಭವಿಷ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು, ರಾಜಕೀಯ ಉದ್ದೇಶಕ್ಕಾಗಿ ಕೋಮುಶಕ್ತಿಗಳು  ಸಮಾಜದಲ್ಲಿನ ಸೌಹಾರ್ದತೆ ಹಾಳು ಮಾಡುತ್ತಿವೆ  ಎಂದು ಆರೋಪಿಸಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ವ್ಯಕ್ತಿ ನಹೀನ್ ಸಂಕಲ್ಪ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು, ಕೋಮುಶಕ್ತಿಗಳು ದೇಶವನ್ನು ವಿಭಜಿಸುವ ಕೆಲಸದಲ್ಲಿ ನಿರತವಾಗಿರುವುದು ದುರದೃಷ್ಟಕರ ಸಂಗತಿ ಎಂದರು.

 ದೇಶದಲ್ಲಿನ ಎಲ್ಲಾ ಪ್ರಜೆಗಳು ಸಮಾನವಾಗಿ ಬದುಕಬೇಕೆಂಬುದು ಆರ್ ಎಸ್ ಎಸ್ ನ ಮೂಲತತ್ವವಾಗಿದೆ. ಒಬ್ಬ ಮನುಷ್ಯ ಮತ್ತೊಬ್ಬ ಮನುಷ್ಯನಿಗೆ ಗೌರವ ನೀಡದಿದ್ದರೆ ಅದನ್ನು ರಾಷ್ಟ್ರೀಯಕತೆ ಎಂದು ಕರೆಯಲಾಗದು ಎಂದು ವೆಂಕಯ್ಯನಾಯ್ಡು ಹೇಳಿದರು.
 
ಜಮ್ಮು -ಕಾಶ್ಮೀರದಲ್ಲಿ ಎಂಟು ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣವನ್ನು ವೆಂಕಯ್ಯನಾಯ್ಡು ಖಂಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT