ಸಂಗ್ರಹ ಚಿತ್ರ 
ದೇಶ

ಸಿಎಂ ಯೋಗಿ ಆದಿತ್ಯಾನಾಥ್ ಉನ್ನಾವ್ ಅತ್ಯಾಚಾರ ಪ್ರಕರಣದ ನಿಜವಾದ ಅಪರಾಧಿ: ಕಾಂಗ್ರೆಸ್ ಗಂಭೀರ ಆರೋಪ

ಉತ್ತರ ಪ್ರದೇಶ ಉನ್ನಾವ್ ಅತ್ಯಾಚಾರ ಪ್ರಕರಣ ಸಂಬಂಧ ಸಿಎಂ ಯೋಗಿ ಆದಿತ್ಯಾನಾಥ್ ವಿರುದ್ದ ಟೀಕಾಪ್ರಹಾರ ನಡೆಸಿರುವ ಕಾಂಗ್ರೆಸ್, ಸಿಎಂ ಯೋಗಿ ಆದಿತ್ಯಾನಾಥ್ ಅವರೇ ಪ್ರಕರಣದ ನಿಜವಾದ ಅಪರಾಧಿ ಎಂದು ಗಂಭೀರ ಆರೋಪ ಮಾಡಿದೆ.

ನವದೆಹಲಿ: ಉತ್ತರ ಪ್ರದೇಶ ಉನ್ನಾವ್ ಅತ್ಯಾಚಾರ ಪ್ರಕರಣ ಸಂಬಂಧ ಸಿಎಂ ಯೋಗಿ ಆದಿತ್ಯಾನಾಥ್ ವಿರುದ್ದ ಟೀಕಾಪ್ರಹಾರ ನಡೆಸಿರುವ ಕಾಂಗ್ರೆಸ್, ಸಿಎಂ ಯೋಗಿ ಆದಿತ್ಯಾನಾಥ್ ಅವರೇ ಪ್ರಕರಣದ ನಿಜವಾದ ಅಪರಾಧಿ ಎಂದು ಗಂಭೀರ ಆರೋಪ ಮಾಡಿದೆ.
ಈ ಬಗ್ಗೆ ಸಿಎಂ ಯೋಗಿ ಹಾಗೂ ಬಿಜೆಪಿ ವಿರುದ್ಧ ಟೀಕಾ ಪ್ರಹಾರ ನಡೆಸಿರುವ ಕಾಂಗ್ರೆಸ್ ಮುಖಂಡ ರಣದೀಪ್ ಸುರ್ಜೇವಾಲಾ ಅವರು, ಯೋಗಿ ಆದಿತ್ಯಾನಾಥ್ ಉನ್ನಾವ್ ಪ್ರಕರಣ ನಿಜವಾದ ಅಪರಾಧಿಯಾಗಿದ್ದಾರೆ. ಕೂಡಲೇ ಅವರನ್ನು ಸಿಎಂ ಸ್ಥಾನದಿಂದ ಕಿತ್ತೊಗೆಯಬೇಕು ಎಂದು ಹೇಳಿದ್ದಾರೆ. 
ಉತ್ತರ ಪ್ರದೇಶ ಮಹಿಳೆಯರ ಪಾಲಿಗೆ ರಾವಣರಾಜ್ಯವಾಗಿ ಬದಲಾಗಿದ್ದು. ಇಲ್ಲಿ ಮಹಿಳೆಯರಿಗೆ ರಕ್ಷಣೆಯೇ ಇಲ್ಲದಂತಾಗಿದೆ. ದಲಿತರು, ರೈತರು ಬಿಜೆಪಿ ಆಡಳಿತದಲ್ಲಿ ನರಕ ಅನುಭವಿಸುತ್ತಿದ್ದು, ಬಿಜೆಪಿ ಸರ್ಕಾರ ಅತ್ಯಾಚಾರಿಗಳಿಗೆ ತನ್ನ ರಕ್ಷಣೆ ಮುಂದುವರೆಸಿದೆ. ಯೋಗಿ ಆದಿತ್ಯಾನಾತ್ ಸರ್ಕಾರಕ್ಕೆ ಅತ್ಯಾಚಾರಿಗಳನ್ನು ರಕ್ಷಿಸುವ ಮತ್ತು ಸಂತ್ರಸ್ಥರನ್ನು ಅವಮಾನಿಸುವ ಕಲೆ ತುಂಬಾ ಚೆನ್ನಾಗಿ ಕರಗತವಾಗಿದೆ. ಅತ್ಯಾಚಾರಿಗಳ ಬೆಂಬಲಿಸಿ ಪ್ರಕರಣದಲ್ಲಿ ಪಿತೂರಿ ನಡೆಸಲಾಗಿದೆ ಎಂಬ ಆರೋಪ ಮಾಡುತ್ತಿದೆ.  
ಅಲಹಾಬಾದ್ ನ್ಯಾಯಾಲಯ  ಅತ್ಯಾಚಾರ ಪ್ರಕರಣವನ್ನು ಸೂಕ್ಷ್ಮವಾಗಿ ಪರಿಗಣಿಸಬೇಕಿದ್ದು, ಹೇಗೆ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ಪ್ರಕರಣ ಸಂಬಂಧ ಮೂಕ, ಕಿವುಡರಾಗಿದ್ದಾರೆ ಎಂಬುದನ್ನು ಗಮನಿಸಬೇಕು. ಇಂತಹ ಹೀನ ಕೃತ್ಯಗಳು ಸಂಭವಿಸಿದ ಮೇಲೂ ಅತ್ಯಾಚಾರಿ ಶಾಸಕನ ರಕ್ಷಣೆಗೆ ಬಿಜೆಪಿ ಮುಂದಾಗಿದೆ ಎಂದು ಸುರ್ಜೇವಾಲಾ ಹೇಳಿದರು.
ಇನ್ನು ಉನ್ನಾವ್ ಅತ್ಯಾಚಾರ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಪ್ರಕರಣದ 2ನೇ ಆರೋಪಿಯನ್ನು ಶನಿವಾರ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ