ಮೆಕ್ಕಾ ಮಸೀದಿ 
ದೇಶ

ಹೈದರಾಬಾದ್ ಮೆಕ್ಕಾ ಮಸೀದಿ ಸ್ಫೋಟ ಪ್ರಕರಣ: ಎಲ್ಲಾ ಆರೋಪಿಗಳ ಖುಲಾಸೆ, ನಾಂಪಲ್ಲಿ ನ್ಯಾಯಾಲಯ ತೀರ್ಪು

ಹೈದರಾಬಾದ್'ನ 17ನೇ ಶತಮಾನದ ಹಳೆಯ ಮೆಕ್ಕಾ ಮಸೀದಿ ಸ್ಫೋಟಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ 5 ಆರೋಪಿಗಳನ್ನು ನಾಂಪಲ್ಲಿ ಎನ್ಐಎ ವಿಶೇಷ ನ್ಯಾಯಾಲಯ ಸೋಮವಾರ ಖುಲಾಸೆಗೊಳಿಸಿದೆ...

ಹೈದರಾಬಾದ್; ಹೈದರಾಬಾದ್'ನ 17ನೇ ಶತಮಾನದ ಹಳೆಯ ಮೆಕ್ಕಾ ಮಸೀದಿ ಸ್ಫೋಟಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ 5 ಆರೋಪಿಗಳನ್ನು ನಾಂಪಲ್ಲಿ  ವಿಶೇಷ ನ್ಯಾಯಾಲಯ ಸೋಮವಾರ ಖುಲಾಸೆಗೊಳಿಸಿದೆ.
2007ರ ಮೇ. 18 ರಂದು ಮೆಕ್ಕಾ ಮಸೀದಿಯಲ್ಲಿ ಪ್ರಬಲ ಬಾಂಬ್ ಸ್ಫೋಟಗೊಳಿಸಲಾಗಿತ್ತು. ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿ, 58ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. 
ಸ್ಫೋಟ ಸಂಭವಿಸುತ್ತಿದ್ದಂತೆಯೇ ವಿಶೇಷ ತನಿಖಾ ದಳವನ್ನು ರಚನೆ ಮಾಡಲಾಗಿತ್ತು. ಬಳಿಕ ಹೈದರಾಬಾದ್ ಪೊಲೀಸ್ ಆಯುಕ್ತ ಬಲ್ವೀಂದರ್ ಸಿಂಗ್ ಅವರು ಪ್ರಕರಣ ತನಿಖೆಯನ್ನು ಕೈಗೆತ್ತಿಕೊಂಡಿದ್ದರು. 
ಸ್ಫೋಟ ಪ್ರಕರಣ ಸಂಬಂಧ ಅಧಿಕಾರಿಗಳು ದೇಶದ ವಿವಿಧೆಡೆ 125 ಮುಸ್ಲಿಂ ಯುವಕರ್ನು ಬಂಧನಕ್ಕೊಳಪಡಿಸಿ, ವಿಚಾರಣೆ ನಡೆಸಿದ್ದರು. ಬಂಧಿತರಲ್ಲಿ ಬಹುತೇಕರನ್ನು ಅತಿಥಿಗಳ ಗೃಹಗಳಲ್ಲಿ ವಶಕ್ಕೆ ಪಡೆದುಕೊಳ್ಳಲಾಗಿತ್ತು. ಬಂಧನದ ಬಳಿಕ ಎಸ್ಐಟಿ ಅಧಿಕಾರಿಗಳ ವಿರುದ್ಧ ಆರೋಪ ಮಾಡಿದ್ದ ಆರೋಪಿಗಳು, ಎಸ್ಐಟಿ ಅಧಿಕಾರಿಗಳು ಹಿಂಸಿಸುತ್ತಿದ್ದಾರೆಂದು ಹೇಳಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಲಯ ಸಾಕ್ಷ್ಯಾಧಾರಗಳ ಕೊರತೆಯಿದ್ದ ಕಾರಣ ಎಲ್ಲರನ್ನೂ ಖುಲಾಸೆಗೊಳಿಸಿತ್ತು. 
2011ರಲ್ಲಿ ಈ ಪ್ರಕರಣವನ್ನು ಸಿಬಿಐನಿಂದ ಎನ್ಐಎಗೆ ಹಸ್ತಾಂತರ ಮಾಡಲಾಗಿತ್ತು ಪ್ರಕರಣದ 10 ಜನರನ್ನು ಆರೋಪಿಗಳನ್ನು ಮಾಡಲಾಗಿತ್ತು. ಅದರಲ್ಲಿ ಐವರಾದ ಅಸೀಮಾನಂದ, ದೇವೇಂದ್ರ ಗುಪ್ತಾ, ಲೋಕೇಶ್ ಶರ್ಮಾ, ಭರತ್ ಮೋಹನ್ ಲಾಲ್ ರತೇಶ್ವರ್, ಮೋಹನ್ ಲಾಲ್ ಚೌಧರಿಯನ್ನು ಬಂಧಿಸಲಾಗಿತ್ತು. ಇದೀಗ ವಿಶೇಷ ನ್ಯಾಯಾಲಯ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಎಲ್ಲರನ್ನೂ ಖುಲಾಸೆಗೊಳಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT