ಸಂಗ್ರಹ ಚಿತ್ರ 
ದೇಶ

ಹೆದ್ದಾರಿಯಲ್ಲಿ ಟೋಲ್ ಕಟ್ಟಲು ಇನ್ನು ವಾಹನ ನಿಲ್ಲಿಸಬೇಕಿಲ್ಲ, ಶೀಘ್ರ ಬ್ಯಾಂಕ್ ಖಾತೆಯಿಂದಲೇ ಕಡಿತ!

ಇನ್ನು ಮುಂದೆ ಟೋಲ್ ಗಳಲ್ಲಿ ವಾಹನಗಳನ್ನು ನಿಲ್ಲಿಸಿ ಶುಲ್ಕ ಪಾವತಿಸಬೇಕಿಲ್ಲ. ನೇರವಾಗಿ ಬ್ಯಾಂಕ್ ಖಾತೆಯಿಂದ ಶುಲ್ಕ ಕಡಿತಗೊಳ್ಳುವ ವ್ಯವಸ್ಥೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ.

ನವದೆಹಲಿ: ಇನ್ನು ಮುಂದೆ ಟೋಲ್ ಗಳಲ್ಲಿ ವಾಹನಗಳನ್ನು ನಿಲ್ಲಿಸಿ ಶುಲ್ಕ ಪಾವತಿಸಬೇಕಿಲ್ಲ. ನೇರವಾಗಿ ಬ್ಯಾಂಕ್ ಖಾತೆಯಿಂದ ಶುಲ್ಕ ಕಡಿತಗೊಳ್ಳುವ ವ್ಯವಸ್ಥೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ.
ಈ ಬಗ್ಗೆ ಸ್ವತಃ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಮಾಹಿತಿ ನೀಡಿದ್ದು, ಸರ್ಕಾರ ಟೋಲ್ ಗಳಲ್ಲಿ ಸುಗಮ ಸಂಚಾರಕ್ಕೆ ಹೊಸ ವ್ಯವಸ್ಥೆಯನ್ನು ತರಲು ಮುಂದಾಗಿದೆ ಎಂದು ಮಾಹಿತಿ ನೀಡಿದ್ದಾರೆ. 
ಸರ್ಕಾರದ ಈ ಹೊಸ ವ್ಯವಸ್ಥೆಯಲ್ಲಿ ಚಾಲಕರು ವಾಹನಗಳನ್ನು ಟೋಲ್ ಗಳಲ್ಲಿ ಗಂಟೆಗಟ್ಟಲೆ ನಿಲ್ಲಿಸುವ ಅನಿವಾರ್ಯತೆ ಇಲ್ಲ. ಟೋಲ್ ಬೂತ್ ಗಳಲ್ಲಿ ಅಳವಡಿಸಲಾಗುವ ನೂತನ ವ್ಯವಸ್ಥೆಯಿಂದಾಗಿ ವಾಹನ ಮಾಲೀಕರ ಬ್ಯಾಕ್ ಖಾತೆಯಿಂದಲೇ ನೇರವಾಗಿ ಹಣ ಜಮೆಯಾಗಲಿದೆ. ಈಗಾಗಲೇ ಇಂತಹ ವ್ಯವಸ್ಥೆ ದಕ್ಷಿಣ ಕೊರಿಯಾದಲ್ಲಿ ಜಾರಿಯಲ್ಲಿದ್ದು, ಇದೇ ವ್ಯವಸ್ಥೆಯನ್ನು ಭಾರತದಲ್ಲೂ ಅಳವಡಿಸಲಾಗುತ್ತದೆ ಎಂದು ಕೇಂದ್ರ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. 
ಗುರು ಗ್ರಾಮದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ ನಿತಿನ್ ಗಡ್ಕರಿ, ಮುಂಬರುವ ಮೇ ತಿಂಗಳಿನಲ್ಲಿ ದಕ್ಷಿಣ ಕೊರಿಯಾದ ಅಧ್ಯಕ್ಷ ಭಾರತಕ್ಕೆ ಭೇಟಿ ನೀಡಲಿದ್ದು, ಅವರ ಭೇಟಿ ವೇಳೆ ಹೊಸ ವ್ಯವಸ್ಥೆ ತಿಳುವಳಿಕಾ ಪತ್ರಕ್ಕೆ(ಎಂಒಯು) ಭಾರತ ಮತ್ತು ದಕ್ಷಿಣ ಕೊರಿಯಾ ದೇಶಗಳ ಅಧಿಕಾರಿಗಳು ಸಹಿ ಹಾಕಲಿವೆ. ಹೊಸ ವ್ಯವಸ್ಥೆಯಿಂದಾಗಿ ಟೋಲ್ ಗಳಲ್ಲಿ ವಾಹನ ಸಂಚಾರ ಸುಗುಮವಾಗಲಿದೆ. ಮೆಟ್ರೊ ಸಿಟಿಗಳಲ್ಲಿರುವ ಟೋಲ್ ಗಳಲ್ಲಿ ಹೆಚ್ಚು ಸಂಚಾರ ದಟ್ಟಣೆ ಇರುತ್ತದೆ. ಹಾಗಾಗಿ ಆರಂಭದಲ್ಲಿ ಮೆಟ್ರೋ ನಗರದಲ್ಲಿ ಹೊಸ ವ್ಯವಸ್ಥೆಯನ್ನು ಜಾರಿಗೆ ತರುವ ನಿರ್ಧಾರ ಮಾಡಿದ್ದೇವೆ ಇದರಿಂದ ಟೋಲ್ ಗಳಲ್ಲಿ ಸಂಚಾರ ಸುಗುಮವಾಗಲಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇಂದ್ರದ ಆದೇಶವನ್ನೇ ಧಿಕ್ಕರಿಸಿದ ಕೇರಳ: IFFK ಯಲ್ಲಿ ನಿರ್ಬಂಧಿತ ಎಲ್ಲಾ ಚಲನಚಿತ್ರಗಳನ್ನು ಪ್ರದರ್ಶಿಸಲು ಆದೇಶ!

ಕಾಂಗ್ರೆಸ್ ಸಂಸದರಿಗೆ 'ವಿಪ್' ಜಾರಿ: ಮುಂದಿನ ಮೂರು ದಿನ ಲೋಕಸಭೆಯಲ್ಲಿ ಕಡ್ಡಾಯ ಹಾಜರಿಗೆ ಸೂಚನೆ

2047 ವೇಳೆಗೆ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರ; ತಂತ್ರಜ್ಞಾನ, ಮೌಲ್ಯಗಳನ್ನು ಬಲಪಡಿಸುವ ಅಗತ್ಯವಿದೆ: ರಾಷ್ಟ್ರಪತಿ ಮುರ್ಮು

Hijab ವಿವಾದ: 'ಅಪಾರ್ಥ ಬೇಡ.. ನಿತೀಶ್ ಕುಮಾರ್ ತಂದೆ ಸ್ವರೂಪ'; ಬಿಹಾರ ಮುಸ್ಲಿಂ ಸಚಿವ ಸ್ಪಷ್ಟನೆ

ಬೋಂಡಿ ಬೀಚ್‌ನಲ್ಲಿ ಗುಂಡಿನ ದಾಳಿ: ಓರ್ವ ಆರೋಪಿ ಹೈದರಾಬಾದ್ ನಿವಾಸಿ; ಸ್ಫೋಟಕ ಮಾಹಿತಿ ಹಂಚಿಕೊಂಡ ತೆಲಂಗಾಣ ಪೊಲೀಸರು!

SCROLL FOR NEXT