ಕೇಸರಿ ಭಯೋತ್ಪಾದನೆ 
ದೇಶ

ಕೇಸರಿ ಭಯೋತ್ಪಾದನೆ ಪದವನ್ನು ನಾವೆಂದೂ ಎಲ್ಲಿಯೂ ಬಳಸಿಲ್ಲ: ಕಾಂಗ್ರೆಸ್

ಕೇಸರಿ ಭಯೋತ್ಪಾದನೆ ಪದವನ್ನು ತಮ್ಮ ಮುಖಂಡರು ಎಲ್ಲಿಯೂ ಬಳಸಿಲ್ಲ. ಭಯೋತ್ಪಾದನೆಯನ್ನು ಯಾವುದೇ ಧರ್ಮಕ್ಕೆ ತಳುಕು ಹಾಕುವಂತಿಲ್ಲ ಎಂದು ಕಾಂಗ್ರೆಸ್ ಹೇಳಿದೆ...

ನವದೆಹಲಿ: ಕೇಸರಿ ಭಯೋತ್ಪಾದನೆ ಪದವನ್ನು ತಮ್ಮ ಮುಖಂಡರು ಎಲ್ಲಿಯೂ ಬಳಸಿಲ್ಲ. ಭಯೋತ್ಪಾದನೆಯನ್ನು ಯಾವುದೇ ಧರ್ಮಕ್ಕೆ ತಳುಕು ಹಾಕುವಂತಿಲ್ಲ ಎಂದು ಕಾಂಗ್ರೆಸ್ ಹೇಳಿದೆ. 
ಬಹುಸಂಖ್ಯಾತ ಸಮುದಾಯಕ್ಕೆ ಮಸಿ ಬಳಿಯಲು ಕಾಂಗ್ರೆಸ್ ಕೇಸರಿ ಭಯೋತ್ಪಾದನೆ ಎಂಬ ಪದವನ್ನು ಸೃಷ್ಟಿಸಿದೆ ಎಂದು ಬಿಜೆಪಿ ಆರೋಪಿಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಈ ಸ್ಫಷ್ಟನೆ ನೀಡಿದೆ. 
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅಥವಾ ಬೇರೆ ಯಾವ ಕಾಂಗ್ರೆಸ್ ನಾಯಕನು ಕೇಸರಿ ಭಯೋತ್ಪಾದನೆ ಎಂಬ ಪದ ಬಳಸಿದ ವಿಡಿಯೋ ಅಥವಾ ಧ್ವನಿ ಸುರುಳಿ ಇದ್ದರೆ ತೋರಿಸಿ. ಕೇಸರಿ ಭಯೋತ್ಪಾದನೆ ಎಂಬುದು ಇಲ್ಲವೇ ಇಲ್ಲ ಎಂದು ಎಐಸಿಸಿ ವಕ್ತಾರ ಪಿಎಲ್ ಪುನಿಯಾ ಪ್ರತಿಕ್ರಿಯಿಸಿದ್ದಾರೆ. 
ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ರಾಜ್ಯಸಭೆಯಲ್ಲಿ ಎನ್ಐಎ ಕಾರ್ಯವೈಖರಿಯನ್ನು ಪ್ರಶ್ನಿಸಿದರು. ನಾಲ್ಕು ವರ್ಷಗಳ ಹಿಂದೆ ಹೊಸ ಸರ್ಕಾರ ರಚನೆಯಾದ ಬಳಿಕ ಸಾಲು ಸಾಲಾಗಿ ಎಲ್ಲ ಪ್ರಕರಣಗಳಲ್ಲೂ ಆರೋಪಿಗಳ ಖುಲಾಸೆ ಆಗುತ್ತಿದೆ. ಹೀಗಾದರೆ ಇಂತಹ ತನಿಖಾ ಸಂಸ್ಥೆಗಳ ಬಗ್ಗೆ ಜನತೆ ವಿಶ್ವಾಸ ಕಳೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT