ಸಂಗ್ರಹ ಚಿತ್ರ 
ದೇಶ

ಆಧಾರ್ ವಿಫಲಗೊಳಿಸಲು ಕೆಲವರಿಂದ 'ಊಹಾತ್ಮಕ ಆತಂಕ': ಯುಐಡಿಎಐ

ವಿಶಿಷ್ಟ ಗುರುತಿನ ಪತ್ರ ಆಧಾರ್ ವಿಫಲಗೊಳಿಸಲು ಕೆಲವರು ಊಹಾತ್ಮಕ ಆತಂಕ ವ್ಯಕ್ತಪಡಿಸುತ್ತಿದ್ದಾರೆ ಎಂದು ವಿಶಿಷ್ಟ ಗುರುತಿನ ಸಂಖ್ಯೆ ಪ್ರಾಧಿಕಾರ ಯುಐಡಿಎಐ ಹೇಳಿದೆ.

ನವದೆಹಲಿ: ವಿಶಿಷ್ಟ ಗುರುತಿನ ಪತ್ರ ಆಧಾರ್ ವಿಫಲಗೊಳಿಸಲು ಕೆಲವರು ಊಹಾತ್ಮಕ ಆತಂಕ ವ್ಯಕ್ತಪಡಿಸುತ್ತಿದ್ದಾರೆ ಎಂದು ವಿಶಿಷ್ಟ ಗುರುತಿನ ಸಂಖ್ಯೆ ಪ್ರಾಧಿಕಾರ ಯುಐಡಿಎಐ ಹೇಳಿದೆ.
ಮಾಧ್ಯಮ ವರದಿ ಕುರಿತಂತೆ ಹೇಳಿಕೆ ಬಿಡುಗಡೆ ಮಾಡಿರುವ  ಯುಐಡಿಎಐ, ಗೂಗಲ್ ಆಧಾರ್ ವಿಫಲಗೊಳಿಸಲು ಯತ್ನಿಸುತ್ತಿದೆ ಎಂಬ ಆರೋಪ ಸತ್ಯವಾದುದಲ್ಲ. ಆದರೆ ಕೆಲವರು ಆಧಾರ್ ವಿಫಲಗೊಳಿಸಲು ಊಹಾತ್ಮಕ ಆತಂಕ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಿದೆ.
ಇನ್ನು ನಿನ್ನೆ ಸುಪ್ರೀಂ ಕೋರ್ಟ್ ನಲ್ಲಿ ಆಧಾರ್ ಕುರಿತ ವಿಚಾರಣೆಯಲ್ಲಿ ಯುಐಡಿಎಐ ಪರ ವಕೀಲ ರಾಕೇಶ್ ದ್ವಿವೇದಿ ಅವರು ತಮ್ಮ ವಾದ ಮಂಡಿಸುತ್ತಾ, ಆಧಾರ್ ವಿಫಲಗೊಳಿಸಲು ಗೂಗಲ್ ಯತ್ನಿಸುತ್ತಿದೆ ಎಂಬ ಆರೋಪ ಸತ್ಯವಾದುದಲ್ಲ. ಗೂಗಲ್, ಫೇಸ್ ಬುಕ್ ಮತ್ತು ಟ್ವಿಟರ್ ಕಾಳಜಿಯುಕ್ತವಾಗಿದ್ದು, ಆಧಾರ್ ಸುರಕ್ಷತೆಯ ಮಾದರಿ ವಿಭಿನ್ನಲವಾಗಿದೆ. ಆಧಾರ್ ನಲ್ಲಿ ಅತ್ಯುನ್ನತ ತಾಂತ್ರಿಕ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲಾಗಿದೆ. 
ಕೆಲ ವಿದೇಶಿ ದತ್ತಾಂಶ ವಿಶ್ಲೇಷಣಾ ಸಂಸ್ಥೆಗಳು ದತ್ತಾಂಶ ವಿಶ್ಲೇಷಣೆಗೆ ಕೆಲ ತಾಂತ್ರಿಕ ಮಾರ್ಗಗಳನ್ನು ಅನುಸರಿಸುತ್ತಿದೆಯಾದರೂ, ಇಂತಹ ದತ್ತಾಂಶ ವಿಶ್ಲೇಷಣೆಗಳು ಆಧಾರ್ ನಲ್ಲಿ ಸಾಧ್ಯವಾಗುವುದಿಲ್ಲ. ಯಾವುದೇ ಮಾದರಿಯಿಂದಲೂ ಆಧಾರ್ ನಲ್ಲಿನ ಮಾಹಿತಿ ಸರ್ವೇಕ್ಷಣೆ ಅಸಾಧ್ಯ. ಮಾಹಿತಿ ಸಂಗ್ರಹ ಅಥವಾ ವಿಶ್ಲೇಷಣೆಗೆ ಆಧಾರ್ ಯಾವುದೇ ಕಾರಣಕ್ಕೂ ಅನುವು ಮಾಡಿಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT