ತ್ರಿಪುರ ರಾಜ್ಯ ಮುಖ್ಯಮಂತ್ರಿ ಬಿಪ್ಲಾಬ್ ಕುಮಾರ್ ಡೆಬ್ 
ದೇಶ

ಮಹಾಭಾರತ ಯುಗದಲ್ಲೂ ಇಂಟರ್ನೆಟ್, ಸ್ಯಾಟೆಲೈಟ್ ಅಸ್ತಿತ್ವದಲ್ಲಿತ್ತು; ತ್ರಿಪುರ ಸಿಎಂ ಬಿಪ್ಲಾಬ್ ಕುಮಾರ್ ಡೆಬ್

ಮಹಾಭಾರತದ ಯುಗದಲ್ಲಿಯೂ ಇಂಟರ್ನೆಟ್, ಸ್ಯಾಟೆಲೈಟ್ ಅಸ್ತಿತ್ವದಲ್ಲಿತ್ತು ಎಂದು ತ್ರಿಪುರ ರಾಜ್ಯ ಮುಖ್ಯಮಂತ್ರಿ ಬಿಪ್ಲಾಬ್ ಕುಮಾರ್ ಡೆಬ್ ಅವರು ಮಂಗಳವಾರ ಹೇಳಿದ್ದಾರೆ...

ಅಗರ್ತಲಾ; ಮಹಾಭಾರತದ ಯುಗದಲ್ಲಿಯೂ ಇಂಟರ್ನೆಟ್, ಸ್ಯಾಟೆಲೈಟ್ ಅಸ್ತಿತ್ವದಲ್ಲಿತ್ತು ಎಂದು ತ್ರಿಪುರ ರಾಜ್ಯ ಮುಖ್ಯಮಂತ್ರಿ ಬಿಪ್ಲಾಬ್ ಕುಮಾರ್ ಡೆಬ್ ಅವರು ಮಂಗಳವಾರ ಹೇಳಿದ್ದಾರೆ. 
ಪಬ್ಲಿಕ್ ಡಿಸ್ಟ್ರಿಬ್ಯೂಷನ್ ಸಿಸ್ಟಮ್ (ಪಿಡಿಎಸ್) ಕಂಪ್ಯೂಟರೀಕರಣದ 2 ದಿನಗಳ ಕಾರ್ಯಾಗಾರದಲ್ಲಿ ಮಾತನಾಡಿರುವ ಅವರು, ಮಹಾಭಾರತದ ದಿನಗಳಲ್ಲಿಯೂ ಇಂಟರ್ನೆಟ್ ಹಾಗೂ ಸ್ಯಾಟೆಲೈಟ್ ಗಳು ಅಸ್ತಿತ್ವದಲ್ಲಿದ್ದವು. ಕುರುಕ್ಷೇತ್ರದಲ್ಲಿ ಯುದ್ಧ ನಡೆಯುತ್ತಿದ್ದ ಸಂದರ್ಭದಲ್ಲಿ ಧೃತರಾಷ್ಟ್ರನ ಸಾರಥಿಯಾಗಿದ್ದ ಸಂಜಯ ತಂತ್ರಜ್ಞಾನವನ್ನು ಬಳಸಿಕೊಂಡು ಧೃತರಾಷ್ಟ್ರನಿಗೆ ಯುದ್ಧ ಕುರಿತು ವಿವರಣೆಗಳನ್ನು ನೀಡುತ್ತಿದ್ದ ಎಂದು ಹೇಳಿದ್ದಾರೆ. 
ಯುರೋಪಿಯನ್ನರು ಹಾಗೂ ಅಮೆರಿಕನ್ನರು ಇಂಟರ್ನೆಟ್ ಹಾಗೂ ಸ್ಯಾಟೆಲೈಟ್ ಗಳನ್ನು ತಾವೇ ಪರಿಚಯಿಸಿದ್ದು ಎಂದು ಹೇಳುತ್ತಾರೆ. ಆದರೆ, ನಿಜ ಹೇಳಬೇಕೆಂದರೆ, ಲಕ್ಷಾಂತರ ವರ್ಷಗಳ ಹಿಂದೆಯೇ ಇಂಟರ್ನೆಟ್ ಹಾಗೂ ಸ್ಯಾಟೆಲೈಟ್ ಗಳಿದ್ದವು. ಇಲ್ಲದೇ ಹೋಗಿದ್ದರೆ, ಸಂಜಯನ ದೃಷ್ಟಿಯಿಂದ ಧೃತರಾಷ್ಟ್ರ ಕುರುಕ್ಷೇತ್ರ ಯುದ್ಧವನ್ನು ನೋಡಲು ಹೇಗೆ ಸಾಧ್ಯ? ಆ ಸಂದರ್ಭದಲ್ಲಿಯೂ ತಂತ್ರಜ್ಞಾನಗಳಿದ್ದವು. ಇಂಟರ್ನೆಟ್, ಸ್ಯಾಟೆಲೈಟ್ ಗಳಿದ್ದವು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ