ಬನ್ವರಿಲಾಲ್ ಪುರೋಹಿತ್ 
ದೇಶ

ಪತ್ರಕರ್ತೆ ಕೆನ್ನೆ ಸವರಿದ ಪ್ರಕರಣ: ಕ್ಷಮೆ ಕೋರಿದ ತಮಿಳುನಾಡು ರಾಜ್ಯಪಾಲ ಬನ್ವಾರಿಲಾಲ್

ಪತ್ರಕರ್ತೆಯೊಬ್ಬರ ಕೆನ್ನೆ ಸವರಿ ವಿವಾದಕ್ಕೆ ಗುರಿಯಾಗಿದ್ದ ತಮಿಳುನಾಡು ರಾಜ್ಯಪಾಲ ಬನ್ವಾರಿಲಾಲ್ ಪತ್ರಕರ್ತೆಯ ಕ್ಷಮೆಯಾಚಿಸಿದ್ದಾರೆ.

ಚೆನ್ನೈ: ಪತ್ರಕರ್ತೆಯೊಬ್ಬರ ಕೆನ್ನೆ ಸವರಿ ವಿವಾದಕ್ಕೆ ಗುರಿಯಾಗಿದ್ದ ತಮಿಳುನಾಡು ರಾಜ್ಯಪಾಲ ಬನ್ವಾರಿಲಾಲ್ ಪತ್ರಕರ್ತೆಯ ಕ್ಷಮೆಯಾಚಿಸಿದ್ದಾರೆ. 
ರಾಜ್ಯಪಾಲ ಬನ್ವಾರಿಲಾಲ್ ಕ್ಷಮೆಯಾಚಿಸಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪತ್ರಕರ್ತೆ ತಾವು ಇದರಿಂದ ಸಂತುಷ್ಟಗೊಂಡಿಲ್ಲ ಎಂದು ಹೇಳಿದ್ದಾರೆ. ಮಂಗಳವಾರ ರಾಜ್ಯಪಾಲ ಪುರೋಹಿತ್ ಅವರು ಕರೆದಿದ್ದ ಸುದ್ದಿಗೋಷ್ಠಿಗೆ ಆಗಮಿಸಿದ್ದ ಪತ್ರಕರ್ತೆ ಲಕ್ಷ್ಮೀ ಸುಬ್ರಮಣಿಯನ್ ಅವರು ಪ್ರಶ್ನೆಯೊಂದನ್ನು ಕೇಳಿದ್ದರು. ಇದಕ್ಕೆ ಉತ್ತರಿಸುವ ಬದಲು ಪುರೋಹಿತ್ ಅವರು ಪತ್ರಕರ್ತೆಯ ಕೆನ್ನೆ ಸವರಿ ಮುಂದಕ್ಕೆ ಹೋಗಿದ್ದಾರೆ. ಈ ಘಟನೆ ವಿವಾದಕ್ಕೀಡಾಗಿತ್ತು. 
ಕೆನ್ನೆ ಸವರಿದ್ದರ ಬಗ್ಗೆ ಸ್ಪಷ್ಟನೆ ನೀಡಿರುವ ರಾಜ್ಯಪಾಲರು, ಲಕ್ಷ್ಮಿ ಸುಬ್ರಮಣಿಯನ್ ಅವರು ಪತ್ರಕರ್ತೆಯಾಗಿ ಕಾರ್ಯನಿರ್ವಹಿಸುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ವಾತ್ಸಲ್ಯದಿಂದ ಕೆನ್ನೆ ಸವರಿದ್ದಾಗಿ ಹೇಳಿದ್ದರು. ಅಷ್ಟೇ ಅಲ್ಲದೇ ಲಕ್ಷ್ಮಿ ಸುಬ್ರಮಣಿಯನ್ ನನ್ನ ಮೊಮ್ಮಗಳಿದ್ದಂತೆ, ಮೊಮ್ಮಗಳನ್ನು ವಾತ್ಸಲ್ಯದಿಂದ ಕಾಣುವ ರೀತಿಯಲ್ಲಿ ಲಕ್ಷ್ಮಿ ಸುಬ್ರಮಣಿಯನ್ ಅವರನ್ನೂ ಕಂಡಿದ್ದೇನೆ ಎಂದು ಬನ್ವಾರಿಲಾಲ್ ಹೇಳಿದ್ದರು. 
ರಾಜ್ಯಪಾಲರ ಕ್ಷಮೆಯನ್ನು ಒಪ್ಪಿದರೂ, ಮನಸ್ಸಿಗೆ ನೋವುಂಟಾಗಿದೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೇ ರಾಜ್ಯಪಾಲರ ವರ್ತನೆ  ಸೂಕ್ತವಾಗಿರಲಿಲ್ಲ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಂಕಿತ ದಾಳಿಕೋರ 'ನರಕ ದೇಶ' ಆಫ್ಘಾನಿಸ್ತಾನದಿಂದ ಬಂದವನು, ಇದು ಭಯೋತ್ಪಾದಕ ಕೃತ್ಯ: ನ್ಯಾಷನಲ್ ಗಾರ್ಡ್ ಮೇಲೆ ದಾಳಿಗೆ Donald Trump ತೀವ್ರ ಖಂಡನೆ

ಇದು ಜೈಲಲ್ಲ, ಮದ್ಯದ ಫ್ಯಾಕ್ಟರಿ: ಕೈದಿಗಳಿಂದ ಮದ್ಯ ತಯಾರಿಕೆ? ಏನಾಗುತ್ತಿದೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ?

CM ಕುರ್ಚಿ ಕಸರತ್ತು: ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ, ರಾಹುಲ್-ಸೋನಿಯಾ ಜೊತೆ ಚರ್ಚಿಸಿ ಗೊಂದಲ ಬಗೆಹರಿಸುವೆ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ: ಸಿಎಂ ಆಪ್ತ ಗುಂಪಿನಿಂದ ಸ್ಪೋಟಕ ಸಂದೇಶ, ಡಾ. ಜಿ. ಪರಮೇಶ್ವರ್ ಹೇಳಿದ್ದೇನು?

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಸಿದ್ದುಗೆ ಪರೋಕ್ಷ ಟಾಂಗ್ ಕೊಟ್ಟರೇ ಡಿಕೆಶಿ..?

SCROLL FOR NEXT