ಸಂಗ್ರಹ ಚಿತ್ರ 
ದೇಶ

ಜನ್ ಧನ್ ಯೋಜನೆ ಹೊರತಾಗಿಯೂ 19 ಕೋಟಿ ಭಾರತೀಯ ಯುವಕರಿಗೆ ಬ್ಯಾಂಕ್ ಖಾತೆ ಇಲ್ಲ!

ದೇಶದ ಪ್ರತೀಯೊಬ್ಬ ನಾಗರೀಕನೂ ಬ್ಯಾಂಕ್ ಖಾತೆ ಹೊಂದಬೇಕು ಎಂಬ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜನ್ ಧನ್ ಯೋಜನೆ ಜಾರಿಗೆ ತಂದಿದ್ದರೂ, ದೇಶದಲ್ಲಿ ಪ್ರಸ್ತುತ ಸುಮಾರು 19 ಕೋಟಿ ಯುವಕರು ಬ್ಯಾಂಕ್ ಖಾತೆಯನ್ನೇ ಹೊಂದಿಲ್ಲ ಎಂದು ತಿಳಿದುಬಂದಿದೆ.

ನವದೆಹಲಿ: ದೇಶದ ಪ್ರತೀಯೊಬ್ಬ ನಾಗರೀಕನೂ ಬ್ಯಾಂಕ್ ಖಾತೆ ಹೊಂದಬೇಕು ಎಂಬ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜನ್ ಧನ್ ಯೋಜನೆ ಜಾರಿಗೆ ತಂದಿದ್ದರೂ, ದೇಶದಲ್ಲಿ ಪ್ರಸ್ತುತ ಸುಮಾರು 19 ಕೋಟಿ ಯುವಕರು ಬ್ಯಾಂಕ್ ಖಾತೆಯನ್ನೇ ಹೊಂದಿಲ್ಲ ಎಂದು ತಿಳಿದುಬಂದಿದೆ.
ಈ ಬಗ್ಗೆ ಸ್ವತಃ ವಿಶ್ವ ಬ್ಯಾಂಕ್ ವರದಿ ನೀಡಿದ್ದು, ವಿಶ್ವಬ್ಯಾಂಕ್ ಗುರುವಾರ ಬಿಡುಗಡೆ ಮಾಡಿರುವ ಗ್ಲೋಬಲ್ ಫೈಂಡೆಕ್ಸ್ ಡೇಟಾಬೇಸ್ ನಲ್ಲಿ ಭಾರತದಲ್ಲಿ ಸುಮಾರು 19 ಕೋಟಿ ಯುವಕರು ಬ್ಯಾಂಕ್ ಖಾತೆಯನ್ನೇ ಹೊಂದಿಲ್ಲ ಎಂದು ತಿಳಿದುಬಂದಿದೆ. ವಿಶ್ವದಲ್ಲೇ ಅತೀ ಹೆಚ್ಚು ಪ್ರಮಾಣದಲ್ಲಿ ಬ್ಯಾಂಕ್ ಖಾತೆಯನ್ನು ಹೊಂದಿಲ್ಲದವರ ದೇಶದ ಪಟ್ಟಿಯಲ್ಲಿ ಚೀನಾ ಮೊದಲ ಸ್ಥಾನದಲ್ಲಿದ್ದು, ಬಳಿಕದ ಸ್ಥಾನದಲ್ಲಿ ಭಾರತವಿದೆ.  ಇನ್ನು ಹಾಲಿ ಇರುವ ಬ್ಯಾಂಕ್ ಖಾತೆಗಳ ಪೈಕಿ ಶೇ.50ರಷ್ಟು ಖಾತೆಗಳು ನಿಷ್ಕ್ರಿಯವಾಗಿದೆ. ಅಂದರೆ ದೇಶದಲ್ಲಿ ಸುಮಾರು ಶೇ.11ರಷ್ಟು ಮಂದಿಗೆ ಬ್ಯಾಂಕ್ ಖಾತೆಯೇ ಇಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ. 
2014ರಲ್ಲಿ ಅಧಿಕಾರಕ್ಕೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ ದೇಶದ ಪ್ರತೀಯೊಬ್ಬ ನಾಗರೀಕನೂ ಬ್ಯಾಂಕ್ ಖಾತೆ ಹೊಂದಬೇಕು ಎಂಬ ಉದ್ದೇಶದಿಂದ ಜನ್ ಧನ್ ಯೋಜನೆ ಜಾರಿಗೆ ತಂದಿದ್ದರು. ಒಂದು ವರದಿಯ ಅನ್ವಯ ಜನ್ ಧನ್ ಯೋಜನೆ ಮೂಲಕ ದೇಶದಲ್ಲಿ ಸುಮಾರು 31 ಕೋಟಿ ಭಾರತೀಯರು ಬ್ಯಾಂಕ್ ತೆರೆದಿದ್ದರು. 2011ರ ಪ್ರಮಾಣಕ್ಕೆ ಹೊಲಿಕೆ ಮಾಡಿದರೆ ದೇಶದಲ್ಲಿ ಬ್ಯಾಂಕ್ ಖಾತೆ ತೆರೆದವರ ಪ್ರಮಾಣ ದುಪ್ಪಟ್ಟಾಗಿತ್ತು. 2011ರಲ್ಲಿ ಶೇ.51ರಷ್ಟಿದ್ದ ಬ್ಯಾಂಕ್ ಖಾತೆ ಹೊಂದಿರುವವರ ಪ್ರಮಾಣ 2014ರಲ್ಲಿ ಶೇ.62ಕ್ಕೆ ಏರಿಕೆಯಾಗಿತ್ತು. 
2014ರಿಂದ 2017 ಕಾಲಾವಧಿಯಲ್ಲಿ ದೇಶದಲ್ಲಿ 515 ಮಿಲಿಯನ್ ಯುವಕರು ಬ್ಯಾಂಕ್ ಖಾತೆ ತೆರೆದಿದ್ದಾರೆ ಎಂದು ಗ್ಲೋಬಲ್ ಫೈಂಡೆಕ್ಸ್ ಡೇಟಾಬೇಸ್ ವರದಿಯಿಂದ ತಿಳಿದುಬಂದಿದೆ. 
ಇನ್ನು ವಿಶ್ವದ ಒಟ್ಟಾರೆ ಜನಸಂಖ್ಯೆ ಪೈಕಿ ಶೇ.69ರಷ್ಟು ಮಂದಿ ಬ್ಯಾಂಕ್ ಖಾತೆ ಹೊಂದಿದ್ದು, 3.8 ಬಿಲಿಯನ್ ಮಂದಿ ಬ್ಯಾಂಕ್ ಖಾತೆ, ಮೊಬೈಲ್ ಬ್ಯಾಂಕಿಂಗ್ ಸೇವೆಯನ್ನು ಹೊಂದಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT