ಸಂಗ್ರಹ ಚಿತ್ರ 
ದೇಶ

ಜನ್ ಧನ್ ಯೋಜನೆ ಹೊರತಾಗಿಯೂ 19 ಕೋಟಿ ಭಾರತೀಯ ಯುವಕರಿಗೆ ಬ್ಯಾಂಕ್ ಖಾತೆ ಇಲ್ಲ!

ದೇಶದ ಪ್ರತೀಯೊಬ್ಬ ನಾಗರೀಕನೂ ಬ್ಯಾಂಕ್ ಖಾತೆ ಹೊಂದಬೇಕು ಎಂಬ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜನ್ ಧನ್ ಯೋಜನೆ ಜಾರಿಗೆ ತಂದಿದ್ದರೂ, ದೇಶದಲ್ಲಿ ಪ್ರಸ್ತುತ ಸುಮಾರು 19 ಕೋಟಿ ಯುವಕರು ಬ್ಯಾಂಕ್ ಖಾತೆಯನ್ನೇ ಹೊಂದಿಲ್ಲ ಎಂದು ತಿಳಿದುಬಂದಿದೆ.

ನವದೆಹಲಿ: ದೇಶದ ಪ್ರತೀಯೊಬ್ಬ ನಾಗರೀಕನೂ ಬ್ಯಾಂಕ್ ಖಾತೆ ಹೊಂದಬೇಕು ಎಂಬ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜನ್ ಧನ್ ಯೋಜನೆ ಜಾರಿಗೆ ತಂದಿದ್ದರೂ, ದೇಶದಲ್ಲಿ ಪ್ರಸ್ತುತ ಸುಮಾರು 19 ಕೋಟಿ ಯುವಕರು ಬ್ಯಾಂಕ್ ಖಾತೆಯನ್ನೇ ಹೊಂದಿಲ್ಲ ಎಂದು ತಿಳಿದುಬಂದಿದೆ.
ಈ ಬಗ್ಗೆ ಸ್ವತಃ ವಿಶ್ವ ಬ್ಯಾಂಕ್ ವರದಿ ನೀಡಿದ್ದು, ವಿಶ್ವಬ್ಯಾಂಕ್ ಗುರುವಾರ ಬಿಡುಗಡೆ ಮಾಡಿರುವ ಗ್ಲೋಬಲ್ ಫೈಂಡೆಕ್ಸ್ ಡೇಟಾಬೇಸ್ ನಲ್ಲಿ ಭಾರತದಲ್ಲಿ ಸುಮಾರು 19 ಕೋಟಿ ಯುವಕರು ಬ್ಯಾಂಕ್ ಖಾತೆಯನ್ನೇ ಹೊಂದಿಲ್ಲ ಎಂದು ತಿಳಿದುಬಂದಿದೆ. ವಿಶ್ವದಲ್ಲೇ ಅತೀ ಹೆಚ್ಚು ಪ್ರಮಾಣದಲ್ಲಿ ಬ್ಯಾಂಕ್ ಖಾತೆಯನ್ನು ಹೊಂದಿಲ್ಲದವರ ದೇಶದ ಪಟ್ಟಿಯಲ್ಲಿ ಚೀನಾ ಮೊದಲ ಸ್ಥಾನದಲ್ಲಿದ್ದು, ಬಳಿಕದ ಸ್ಥಾನದಲ್ಲಿ ಭಾರತವಿದೆ.  ಇನ್ನು ಹಾಲಿ ಇರುವ ಬ್ಯಾಂಕ್ ಖಾತೆಗಳ ಪೈಕಿ ಶೇ.50ರಷ್ಟು ಖಾತೆಗಳು ನಿಷ್ಕ್ರಿಯವಾಗಿದೆ. ಅಂದರೆ ದೇಶದಲ್ಲಿ ಸುಮಾರು ಶೇ.11ರಷ್ಟು ಮಂದಿಗೆ ಬ್ಯಾಂಕ್ ಖಾತೆಯೇ ಇಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ. 
2014ರಲ್ಲಿ ಅಧಿಕಾರಕ್ಕೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ ದೇಶದ ಪ್ರತೀಯೊಬ್ಬ ನಾಗರೀಕನೂ ಬ್ಯಾಂಕ್ ಖಾತೆ ಹೊಂದಬೇಕು ಎಂಬ ಉದ್ದೇಶದಿಂದ ಜನ್ ಧನ್ ಯೋಜನೆ ಜಾರಿಗೆ ತಂದಿದ್ದರು. ಒಂದು ವರದಿಯ ಅನ್ವಯ ಜನ್ ಧನ್ ಯೋಜನೆ ಮೂಲಕ ದೇಶದಲ್ಲಿ ಸುಮಾರು 31 ಕೋಟಿ ಭಾರತೀಯರು ಬ್ಯಾಂಕ್ ತೆರೆದಿದ್ದರು. 2011ರ ಪ್ರಮಾಣಕ್ಕೆ ಹೊಲಿಕೆ ಮಾಡಿದರೆ ದೇಶದಲ್ಲಿ ಬ್ಯಾಂಕ್ ಖಾತೆ ತೆರೆದವರ ಪ್ರಮಾಣ ದುಪ್ಪಟ್ಟಾಗಿತ್ತು. 2011ರಲ್ಲಿ ಶೇ.51ರಷ್ಟಿದ್ದ ಬ್ಯಾಂಕ್ ಖಾತೆ ಹೊಂದಿರುವವರ ಪ್ರಮಾಣ 2014ರಲ್ಲಿ ಶೇ.62ಕ್ಕೆ ಏರಿಕೆಯಾಗಿತ್ತು. 
2014ರಿಂದ 2017 ಕಾಲಾವಧಿಯಲ್ಲಿ ದೇಶದಲ್ಲಿ 515 ಮಿಲಿಯನ್ ಯುವಕರು ಬ್ಯಾಂಕ್ ಖಾತೆ ತೆರೆದಿದ್ದಾರೆ ಎಂದು ಗ್ಲೋಬಲ್ ಫೈಂಡೆಕ್ಸ್ ಡೇಟಾಬೇಸ್ ವರದಿಯಿಂದ ತಿಳಿದುಬಂದಿದೆ. 
ಇನ್ನು ವಿಶ್ವದ ಒಟ್ಟಾರೆ ಜನಸಂಖ್ಯೆ ಪೈಕಿ ಶೇ.69ರಷ್ಟು ಮಂದಿ ಬ್ಯಾಂಕ್ ಖಾತೆ ಹೊಂದಿದ್ದು, 3.8 ಬಿಲಿಯನ್ ಮಂದಿ ಬ್ಯಾಂಕ್ ಖಾತೆ, ಮೊಬೈಲ್ ಬ್ಯಾಂಕಿಂಗ್ ಸೇವೆಯನ್ನು ಹೊಂದಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT