ಸಾಂದರ್ಭಿಕ ಚಿತ್ರ 
ದೇಶ

ನಗದು ಬಿಕ್ಕಟ್ಟು: ಬ್ಯಾಂಕ್ ನೌಕರರ ಸಂಘದಿಂದ ಮುಷ್ಕರದ ಎಚ್ಚರಿಕೆ

ನಗದು ಬಿಕ್ಕಟ್ಟು ಪರಿಹರಿಸದಿದ್ದರೆ ದೇಶಾದ್ಯಂತ ಮುಷ್ಕರ ನಡೆಸುವುದಾಗಿ ಅಖಿಲ ಭಾರತ ಬ್ಯಾಂಕ್ ನೌಕರರ...

ವಡೊದರ: ನಗದು ಬಿಕ್ಕಟ್ಟು ಪರಿಹರಿಸದಿದ್ದರೆ ದೇಶಾದ್ಯಂತ ಮುಷ್ಕರ ನಡೆಸುವುದಾಗಿ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ(ಎಐಬಿಇಎ) ಗುರುವಾರ ಎಚ್ಚರಿಕೆ ನೀಡಿದೆ.
ನಗದು ಕೊರತೆ ನೀಗಿಸಲು ಕೇವಲ ಹೇಳಿಕೆ ನೀಡದರೆ ಸಾಕಾಗುವುದಿಲ್ಲ. ನೋಟು ವಿತರಣೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಎಐಬಿಇಎ ಪ್ರಧಾನ ಕಾರ್ಯದರ್ಶಿ ಸಿಎಚ್ ವೆಂಕಟಾಚಲಂ ಅವರು ಹೇಳಿದ್ದಾರೆ.
ಕಳೆದ ಕೆಲವು ವಾರಗಳಿಂದ ಉತ್ತರ ಪ್ರದೇಶ, ಮಧ್ಯ ಪ್ರದೇಶ, ರಾಜಸ್ಥಾನ, ಆಂಧ್ರ ಪ್ರದೇಶ, ತೆಲಂಗಾಣ ಮತ್ತು ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳ ಎಟಿಎಂಗಳು ನಗದು ಕೊರತೆ ಎದುರಿಸುತ್ತಿವೆ. 
ಹಣ ಸಿಗದೆ ಪರದಾಡುತ್ತಿರುವ ಜನ ಬ್ಯಾಂಕ್ ನೌಕರರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ವೆಂಕಟಾಚಲಂ ಅವರು ತಿಳಿಸಿದ್ದಾರೆ.
ಬ್ಯಾಂಕ್ ನೌಕರರು ಯಾವುದೇ ತಪ್ಪು ಮಾಡದಿದ್ದರೂ ಗ್ರಾಹಕರಿಂದ ನಿಂದಿಸಿಕೊಳ್ಳುವ ಪರಿಸ್ಥಿತಿ ಬಂದಿದ್ದು, ಕೇಂದ್ರ ಸರ್ಕಾರ ಮತ್ತು ಆರ್ ಬಿಐ ಈ ಕೂಡಲೇ ನಗದು ಕೊರತೆ ನೀಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT