ಹನುಮಂತ ದೇವಾಲಯ 
ದೇಶ

ಹನುಮಂತ ದೇವಾಲಯಕ್ಕೆ ಭೇಟಿ ನೀಡಿದ್ದ ಉತ್ತರ ಪ್ರದೇಶದ ಬಿಜೆಪಿ ಎಂಎಲ್‌ಸಿ ವಿರುದ್ಧ ಫತ್ವಾ!

ಹನುಮಂತ ದೇವಾಲಯಕ್ಕೆ ಭೇಟಿ ನೀಡಿದ್ದ ಉತ್ತರಪ್ರದೇಶದ ಬಿಜೆಪಿ ಎಂಎಲ್‌ಸಿ ವಿರುದ್ಧ ಇಸ್ಲಾಮಿಕ್ ಸಂಘಟನೆಯೊಂದು ಫತ್ವ ಹೊರಡಿಸಿದೆ...

ಲಖನೌ(ಉತ್ತರಪ್ರದೇಶ): ಹನುಮಂತ ದೇವಾಲಯಕ್ಕೆ ಭೇಟಿ ನೀಡಿದ್ದ ಉತ್ತರಪ್ರದೇಶದ ಬಿಜೆಪಿ ಎಂಎಲ್‌ಸಿ ವಿರುದ್ಧ ಇಸ್ಲಾಮಿಕ್ ಸಂಘಟನೆಯೊಂದು ಫತ್ವಾ ಹೊರಡಿಸಿದೆ.
ದರುಲ್ ಉಲೂಮ್ ಅಶಾರ್ಫಿಯಾ ಮದಸರದ ಮುಖ್ಯಸ್ಥ ಮೌಲಾನ ಸಲೀಂ ಅಶ್ರಫ್ ಖಾಸಿಂ ಲಖೌನ್ ನಲ್ಲಿರುವ ಹನುಮಂತ ದೇವಾಲಯಕ್ಕೆ ಭೇಟಿ ನೀಡಿದ್ದ ಬಿಜೆಪಿ ಎಂಎಲ್‌ಸಿ ಬುಕ್ಕಲ್ ನವಾಬ್ ವಿರುದ್ಧ ಫತ್ವಾ ಹೊರಡಿಸಿದ್ದಾರೆ. 
ಇಸ್ಲಾಂ ಮತ್ತು ಮುಸ್ಲಿಂ ಸಮುದಾಯದಲ್ಲಿ ಹಿಂದೂ ದೇವರನ್ನು ಆರಾಧಿಸುವುದಿಲ್ಲ. ಇಸ್ಲಾಂನಲ್ಲಿ ಯಾರೂ ವಿಗ್ರಹವನ್ನು ಪೂಜಿಸಲು ಅನುಮತಿಸುವುದಿಲ್ಲ.  ಹಿಂದೂ ದೇವರ ಆರಾಧನೆ ಇಸ್ಲಾಂಗೆ ವಿರುದ್ಧವಾದುದ್ದು ಅಥವಾ ಕ್ರಿಕೆಯನ್ನು ಅನುಸರಿಸುವವರು ಯಾರಾದರೂ ಆಗಲಿ ಅವರನ್ನು ಇಸ್ಲಾಂನಿಂದ ಹೊರಹಾಕಲಾಗುವುದು ಎಂದು ಹೇಳಿದ್ದಾರೆ.
ಅಲ್ಲಾನಲ್ಲಿ ಕ್ಷಮಾಪಣೆ ಕೇಳಿ ಮತ್ತು ಕಲ್ಮಾವನ್ನು ಮೂರು ಬಾರಿ ಓದುವ ಮೂಲಕ ಸ್ವತಃ ತಮ್ಮನ್ನು ಶುದ್ಧೀಕರಿಸಿಕೊಂಡರೆ ಮಾತ್ರ ನವಾಬನನ್ನು ಮತ್ತೆ ಸ್ವಾಗತಿಸಲಾಗುತ್ತದೆ ಎಂದು ಮೌಲಾನ ಸಲೀಂ ಅಶ್ರಫ್ ಖಾಸಿಂ ಹೇಳಿದ್ದಾರೆ. 
ಸಮಾಜವಾದಿ ಪಕ್ಷದವರಾಗಿದ್ದ ಬುಕ್ಕಲ್ ನವಾಬ್ ಅವರು ಬಿಜೆಪಿ ಪಕ್ಷವನ್ನು ಸೇರಿದ್ದರು. ಇತ್ತೀಚೆಗಷ್ಟೇ ನಡೆದ ಉತ್ತರಪ್ರದೇಶ ರಾಜ್ಯಸಭಾ ಚುನಾವಣೆಗೆ ನಾಮನಿರ್ದೇಶನ ಮಾಡಿತ್ತು. ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ ಮಾತನಾಡಿದ್ದ ಅವರು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಸಲಹೆ ನೀಡಿದ್ದರು. 
ಇನ್ನು ತಮ್ಮ ವಿರುದ್ಧ ಹೊರಡಿಸಲಾಗಿರುವ ಫತ್ವಾ ಕುರಿತಂತೆ ಪ್ರತಿಕ್ರಿಯಿಸಿರುವ ಬುಕ್ಕಲ್ ಅವರು ನನಗೂ ಹಾಗೂ ನನ್ನ ಕುಟುಂಬಕ್ಕೆ ಹನುಮಂತನ ಮೇಲೆ ಭಕ್ತಿಯಿದೆ. ಜತೆಗೆ ನಮ್ಮ ಸಂವಿಧಾನವು ಯಾವುದೇ ಧರ್ಮವನ್ನು ಆರಾಧಿಸುವ ಅವಕಾಶವನ್ನು ಮಾಡಿಕೊಟ್ಟಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT