ಸಾಂದರ್ಭಿಕ ಚಿತ್ರ 
ದೇಶ

ಅಪ್ರಾಪ್ತರ ಮೇಲಿನ ಅತ್ಯಾಚಾರಿಗಳಿಗೆ ಮರಣದಂಡನೆ, ಪೋಸ್ಕೋ ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರ ತೀರ್ಮಾನ

ಹನ್ನೆರಡು ವರ್ಷದವರೆಗಿನ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿವ ಅಪರಾಧಿಗಳನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಸ್ಕೋ) ಕಾಯ್ದೆಯಡಿ ಬಂಧಿಸಿ ಮರಣದಂಡನೆ....

ನವದೆಹಲಿ: 12 ವರ್ಷದವರೆಗಿನ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸುವ ಅಪರಾಧಿಗಳನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಸ್ಕೋ) ಕಾಯ್ದೆಯಡಿ ಬಂಧಿಸಿ ಮರಣದಂಡನೆ ಜಾರಿಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಈಗಾಗಲೇ ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿದ್ದು, ಏ.21 ರಂದು ಸುಗ್ರೀವಾಜ್ಞೆ ಹೊರಡಿಸುವುದರ ಬಗ್ಗೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಲಿದೆ. 
0 ರಿಂದ 12 ರ ನಡುವಿನ ವಯಸ್ಸಿನ ಮಕ್ಕಳ ಅತ್ಯಾಚಾರ ಮತ್ತು ದೌರ್ಜನ್ಯದಲ್ಲಿ ಭಾಗಿಯಾಗುವ ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸುವಂತೆ ಕೋರಿ  ನ್ಯಾಯಮೂರ್ತಿ ಅಲಕ್ ಅಲೋಕ್ ಶ್ರೀವಾಸ್ತವ್ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಗೆ ಕೇಂದ್ರ ಈ ಪ್ರತಿಕ್ರಿಯೆ ನೀಡಿದೆ. 
ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠದ ಮುಂದೆ ಈ ವಿಚಾರಣೆ ನಡೆದಿದ್ದು ಏಪ್ರಿಲ್ 27 ಕ್ಕೆ ಮತ್ತಷ್ಟು ವಿಚಾರಣೆ ನಡೆಸಲು ಪೀಠ ನಿರ್ಧಾರ ತೆಗೆದುಕೊಂಡಿದೆ. ಜಮ್ಮು ಕಾಶ್ಮೀರದ ಕಥುವಾದಲ್ಲಿ ನಡೆದ ಎಂಟು ವರ್ಷದ ಬಾಲಕಿಯ ಅತ್ಯಾಚಾರ ಹಾಗೂ ಕೊಲೆ ಹಿನ್ನೆಲೆಯಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಮೇನಕಾ ಗಾಂಧಿ ಪೋಸ್ಕೋ ಕಾಯ್ದೆಗೆ ತಿದ್ದುಪಡಿ ತರಲು ಉದ್ದೇಶಿಸಿದ್ದಾರೆ ಎನ್ನಲಾಗಿದೆ.  ಇಂತಹಪ್ರಕರಣದಲ್ಲಿ ಭಾಗಿಯಾದ ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸುವುದಕ್ಕೆ ಅವಕಾಶ ಕಲ್ಪಿಸುವ ಅಂಶ ಈ ತಿದ್ದುಪಡಿಯಲ್ಲಿ ಸೇರಿದೆ.
ಪೋಸ್ಕೋ ಕಾಯ್ದೆಯ ಪ್ರಕಾರ ಅತ್ಯಾಚಾರಿಗಳಿಗೆ ಗರಿಷ್ಠ ಶಿಕ್ಷೆ ಎಂದರೆ ಜೀವಾವಧಿ ಶಿಕ್ಷೆ ಕನಿಷ್ಠ ಎಂದರೆ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಆದರೆ ಈಗ ಮರಣ ದಂಡನೆ ಶಿಕ್ಷೆ ವಿಧಿಸುವ ಪ್ರಸ್ತಾವನೆ ಕೇಂದ್ರ ಸರ್ಕಾರದ ಮುಂದಿದೆ. ಕಾಯ್ದೆಗೆ ತಿದ್ದುಪಡಿ ಮಸೂದೆ ಕಾಯ್ದೆಯಾಗಲು ಜುಲೈ ನಲ್ಲಿ ನಡೆಯಲಿರುವ ಮುಂಗಾರು ಅಧಿವೇಶನದ ವರೆಗೂ ಕಾಯಬೇಕಾಗುತ್ತದೆ ಎಂದು ಕಾನೂನು ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT