ಹೈದರಾಬಾದ್ ನಲ್ಲಿ ಎಂಎಎ ಸದಸ್ಯರೊಂದಿಗೆ ಮಾತನಾಡುತ್ತಿರುವ ನಟ ಪವನ್ ಕಲ್ಯಾಣ್ 
ದೇಶ

ಮಾಧ್ಯಮಗಳ ವಿರುದ್ಧ ಹರಿಹಾಯ್ದ ನಟ ಪವನ್ ಕಲ್ಯಾಣ್ ಅಭಿಮಾನಿಗಳು: ಒಬಿ ವ್ಯಾನ್ ಮೇಲೆ ದಾಳಿ

ಜನ ಸೇನಾ ಮುಖ್ಯಸ್ಥ ಹಾಗೂ ನಟ ಪವನ್ ಕಲ್ಯಾಣ್ ಅಭಿಮಾನಿಗಳು ಮಾಧ್ಯಮಗಳ ಮೇಲೆ ದಾಂಧಲೆ ನಡೆಸಿದ್ದು, ಮಾಧ್ಯಮವೊಂದರಲ ಒಬಿ ವ್ಯಾನ್ ಮೇಲೆ ದಾಳಿ ನಡೆಸಿರುವ ಘಟನೆ ಹೈದರಾಬಾದ್ ನಲ್ಲಿ ಶುಕ್ರವಾರ ನಡೆದಿದೆ...

ಹೈದರಾಬಾದ್: ಜನ ಸೇನಾ ಮುಖ್ಯಸ್ಥ ಹಾಗೂ ನಟ ಪವನ್ ಕಲ್ಯಾಣ್ ಅಭಿಮಾನಿಗಳು ಮಾಧ್ಯಮಗಳ ಮೇಲೆ ದಾಂಧಲೆ ನಡೆಸಿದ್ದು, ಮಾಧ್ಯಮವೊಂದರಲ ಒಬಿ ವ್ಯಾನ್ ಮೇಲೆ ದಾಳಿ ನಡೆಸಿರುವ ಘಟನೆ ಹೈದರಾಬಾದ್ ನಲ್ಲಿ ಶುಕ್ರವಾರ ನಡೆದಿದೆ. 
ಮಾಧ್ಯಮಗಳ ತಮ್ಮ ತಾಯಿಯ ವರ್ಚಸ್ಸಿಗೆ ಧಕ್ಕೆಯುಂಟು ಮಾಡುತ್ತಿದೆ ಎಂದು ಈ ಹಿಂದೆ ಪವನ್ ಕಲ್ಯಾಣ್ ಅವರು ಆರೋಪ ಮಾಡಿದ್ದರು. 
ಶ್ರೀ ರೆಡ್ಡಿಯವರು 70 ವರ್ಷದ ನನ್ನ ತಾಯಿಯನ್ನು ನಿಂದಿಸಿದ್ದು, ಇದರ ವರದಿಗಳನ್ನು ಕೆಲ ಮಾಧ್ಯಮಗಳು ಸುದ್ದಿ ಮಾಡಿವೆ. ಇದರ ಹಿಂದೆ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಹಾಗೂ ಅವರ ಪುತ್ರ ಎನ್ ಲೋಕೇಶ್ ಅವರಿದ್ದಾರೆಂದು ಹೇಳಿದ್ದರು. 
ಈ ಹಿನ್ನಲೆಯಲ್ಲಿ ಪವನ್ ಕಲ್ಯಾಣ್ ಅವರ ಅಭಿಮಾನಿಗಳು ಮಾಧ್ಯಮಗಳ ವಿರುದ್ಧ ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆ ವೇಳೆ ಹಲವು ಮಾಧ್ಯಮಗಳ ವಿರುದ್ಧ ಘೋಷಣಾ ವಾಕ್ಯಗಳನ್ನು ಕೂಗಿದ್ದಾರೆ. ಅಲ್ಲದೆ, ಮಾಧ್ಯಮವೊಂದರ ಒಬಿ ವ್ಯಾನ್ ಮೇಲೆ ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ. 
ಪವನ್ ಕಲ್ಯಾಣ್ ಅವರು ಹೇಳಿಕೆ ನೀಡುತ್ತಿದ್ದಂತೆಯೇ ಕೆಲ ಮಾಧ್ಯಮಗಳ ಕಚೇರಿ ಬಳಿ ತೆರಳಿರುವ ಪವನ್ ಕಲ್ಯಾಣ್ ಅಭಿಮಾನಿಗಳು ಏಕಾಏಕಿ ಕಲ್ಲು ತೂರಟ ನಡೆಸಿವೆ. ಅಲ್ಲದೆ, ಕಚೇರಿ ಮುಂದೆ ನಿಂತಿದ್ದ ಒಬಿ ವ್ಯಾನ್ ಗಳ ಮೇಲೂ ಕಲ್ಲೂ ತೂರಾಟ ನಡೆಸಿದ್ದಾರೆ. 
ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಪವನ್ ಕಲ್ಯಾಣ್ ಅವರು, ಸುದ್ದಿ ಪ್ರಕಟಿಸಿದ್ದ ಮಾಧ್ಯಮಗಳ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಲಾಗುತ್ತದೆ ಎಂದು ಹೇಳಿದ್ದಾರೆ. ಅಲ್ಲದೆ, ಹಿಂಸಾಚಾರಗಳಲ್ಲಿ ತೊಡಗಿಕೊಳ್ಳದಂತೆ ತಮ್ಮ ಅಭಿಮಾನಿಗಳ ಬಳಿ ಮನವಿ ಮಾಡಿಕೊಂಡಿದ್ದಾರೆ. 
ಇದೇ ವೇಳೆ ಹೇಳಿಕೆ ನೀಡಿರುವ ಸಚಿವ ತಲಸನಿ ಶ್ರೀನಿವಾಸ್ ಅವರು, ಶೀಘ್ರದಲ್ಲಿಯೇ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ತೆಲುಗು ಚಿತ್ರರಂಗ ಕುರಿತ ಹಲವು ವಿಚಾರಗಳ ಸಂಬಂಧ ಚರ್ಚೆ ನಡೆಸುತ್ತೇನೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

SCROLL FOR NEXT