ಕಾಂಗ್ರೆಸ್ ಹಿರಿಯ ಮುಖಂಡ ಅಶ್ವಿನ್ ಕುಮಾರ್ 
ದೇಶ

ಸಂಸತ್ ಸದಸ್ಯನಾಗಿದಿದ್ದರೆ, ಸಿಜೆಐ ವಿರುದ್ದದ ಪದಚ್ಯುತಿ ನಿಲುವಳಿಗೆ ಸಹಿ ಹಾಕುತ್ತಿರಲಿಲ್ಲ: ಕಾಂಗ್ರೆಸ್ ಮುಖಂಡ ಅಶ್ವಿನ್ ಕುಮಾರ್

ನಾನೇನಾದರೂ ಸಂಸತ್ ಸದಸ್ಯನಾಗಿದಿದ್ದರೆ ಖಂಡಿತಾ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ವಿರುದ್ಧದ ಪದಚ್ಯುತಿ ನಿಲುವಳಿಗೆ ಸಹಿ ಹಾಕುತ್ತಿರಲಿಲ್ಲ ಎಂದು ಕಾಂಗ್ರೆಸ್ ಪಕ್ಷದ ಮಾಜಿ ಮುಖಂಡ ಅಶ್ವಿನ್ ಕುಮಾರ್ ಅವರು ಹೇಳಿದ್ದಾರೆ.

ನವದೆಹಲಿ: ನಾನೇನಾದರೂ ಸಂಸತ್ ಸದಸ್ಯನಾಗಿದಿದ್ದರೆ ಖಂಡಿತಾ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ವಿರುದ್ಧದ ಪದಚ್ಯುತಿ ನಿಲುವಳಿಗೆ ಸಹಿ ಹಾಕುತ್ತಿರಲಿಲ್ಲ ಎಂದು ಕಾಂಗ್ರೆಸ್ ಪಕ್ಷದ ಮಾಜಿ ಮುಖಂಡ ಅಶ್ವಿನ್ ಕುಮಾರ್ ಅವರು ಹೇಳಿದ್ದಾರೆ.
ಭಾರತದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ವಿರುದ್ಧ ಕಾಂಗ್ರೆಸ್ ಸೇರಿದಂತೆ ಒಟ್ಟು 7 ವಿಪಕ್ಷಗಳು ಮಂಡಿಸಲು ಮುಂದಾಗಿರುವ ಪದಚ್ಯುತಿ ನಿಲುವಳಿ ವಿಚಾರ ಇದೀಗ ದೇಶಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಪದಚ್ಯುತಿ ನಿಲುವಳಿ ವಿಚಾರ ಸಾರ್ವಜನಿಕವಾಗಿ ಚರ್ಚೆಯಾಗುತ್ತಿರುವುದು ದುಃಖಕರ ಸಂಗತಿ ಎಂದು ಸ್ವತಃ ಸುಪ್ರೀಂ ಕೋರ್ಟ್ ವಿಷಾಧ ವ್ಯಕ್ತಪಡಿಸಿದೆ. ಇದರ ನಡುವೆಯೇ ಕಾಂಗ್ರೆಸ್ ಪಕ್ಷ ಮಾಜಿ ರಾಜ್ಯಸಭಾ ಸದಸ್ಯ ಅಶ್ವಿನ್ ಕುಮಾರ್ ಅವರು ಈ ಬಗ್ಗೆ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ.
ದೆಹಲಿಯಲ್ಲಿ ಮಾತನಾಡಿದ ಅವರು, ನಾನು ಸಂಸತ್ ಸದಸ್ಯನಾಗಿದಿದ್ದರೆ, ಸಿಜೆಐ ಪದಚ್ಯುತಿಗೊಳಿಸುವ ನಿಲುವಳಿಗೆ ಸಹಿ ಹಾಕುವಂತೆ ಯಾರಾದರೂ ತಂದು ನನ್ನ ಮುಂದಿಟ್ಟರೆ ಖಂಡಿತಾ ನಾನು ಈ ನಿಲುವಳಿಗೆ ಸಹಿ ಹಾಕುತ್ತಿರಲಿಲ್ಲ. ಅನಗತ್ಯ ವಿವಾದದಲ್ಲಿ ಸಿಲುಕುವುದು ನನಗೆ ಇಷ್ಟವಿಲ್ಲ. ಕೆಲ ತತ್ವಾದರ್ಶಗಳನ್ನು ನಾನು ಪಾಲಿಸಿಕೊಂಡು ಬರುತ್ತಿದ್ದೇನೆ ಎಂದು ಹೇಳಿದ್ದಾರೆ. 
ನನ್ನ ಅಭಿಪ್ರಾಯದಂತೆ ಸಿಜೆಐ ವಿರುದ್ಧ ಪದಚ್ಯುತಿ ನಿಲುವಳಿ ನಿರ್ಣಯ ನಿಜಕ್ಕೂ ತೀವ್ರ ಪ್ರಮಾಣದ ನಡೆಯಾಗಿದ್ದು, ಇಂತಹ ಕಠಿಣ ಕ್ರಮವನ್ನು ತಡೆಯಬೇಕಿತ್ತು ಎಂದು ಅಶ್ವಿನ್ ಕುಮಾರ್ ಹೇಳಿದ್ದಾರೆ.
ಅಶ್ವಿನ್ ಕುಮಾರ್ ಅವರು ಕಾಂಗ್ರೆಸ್ ಪಕ್ಷ ಮಾಜಿ ರಾಜ್ಯಸಭಾ ಸದಸ್ಯರಾಗಿದ್ದು, 2002ರಲ್ಲಿ ಕಾಂಗ್ರೆಸ್ ಪಕ್ಷದಿಂದ ಪಂಜಾಬ್ ನಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಅಂತೆಯೇ ಕಾಂಗ್ರೆಸ್ ಪಕ್ಷದ ವಕ್ತಾರರಾಗಿಯೂ ಕೆಲಸ ಮಾಡಿದ್ದ ಅಶ್ವಿನ್ ಕುಮಾರ್ ಅವರು ಯುಪಿಎ ಸರ್ಕಾರದ ಅವಧಿಯಲ್ಲಿ ಅಟಾರ್ನಿ ಜನರಲ್ ಆಗಿಯೂ ಸೇವೆ ಸಲ್ಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT