ನಿರ್ಭಯಾ ತಾಯಿ 
ದೇಶ

ಪ್ರತಿಯೊಬ್ಬ ಅತ್ಯಾಚಾರಿಗಳನ್ನೂ ನೇಣಿಗೇರಿಸಬೇಕು - ನಿರ್ಭಯಾ ತಾಯಿ ಹೇಳಿಕೆ

ಪ್ರತಿಯೊಬ್ಬ ಅತ್ಯಾಚಾರಿಗಳನ್ನೂ ನೇಣಿಗೇರಿಸಬೇಕೆಂದು ನಿರ್ಭಯಾ ಅವರ ತಾಯಿ ಆಶಾ ದೇವಿ ಆಗ್ರಹಿಸಿದ್ದಾರೆ.

ನವದೆಹಲಿ :  ಮಕ್ಕಳ ಮೇಲಿನ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಸುಗ್ರೀವಾಜ್ಞೆಯನ್ನು ಕೇಂದ್ರಸರ್ಕಾರ ಜಾರಿಗೊಳಿಸುತ್ತಿರುವುದಕ್ಕೆ 2012ರಲ್ಲಿ ದೆಹಲಿಯಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ನಿರ್ಭಯಾ ಅವರ ತಾಯಿ ಆಶಾ ದೇವಿ ಪ್ರಶಂಸೆ ವ್ಯಕ್ತಪಡಿಸಿದ್ದು, ಪ್ರತಿಯೊಬ್ಬ ಅತ್ಯಾಚಾರಿಗಳನ್ನೂ ನೇಣಿಗೇರಿಸಬೇಕೆಂದು ಆಗ್ರಹಿಸಿದ್ದಾರೆ.

12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಅಪ್ರಾಪ್ತ ವಯಸ್ಸಿನ ಮಕ್ಕಳ ಮೇಲಿನ ಅತ್ಯಾಚಾರಿಗಳ ವಿರುದ್ಧ ಒಳ್ಳೆಯ ಕ್ರಮ. ಅತ್ಯಾಚಾರಕ್ಕಿಂತ ಮತ್ತೊಂದು  ಅಮಾನುಷ ಅಪರಾಧ ಇಲ್ಲ ಎಂದಿದ್ದಾರೆ.

ದೇಶದಲ್ಲಿ ಹೆಚ್ಚುತ್ತಿರುವ ಅಪ್ರಾಪ್ತ ವಯಸ್ಸಿನ ಮಕ್ಕಳ ಮೇಲಿನ ಅತ್ಯಾಚಾರ ತಡೆಗಟ್ಟಲು ಪೋಕ್ಸೋ ಕಾಯ್ದೆ ತಿದ್ದುಪಡಿಗೆ ಕೇಂದ್ರ ಸಚಿವ ಸಂಪುಟ ನಿನ್ನೆ ಒಪ್ಪಿಗೆ ನೀಡಿತ್ತು. 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಅತ್ಯಾಚಾರ ನಡೆಸಿದವರಿಗೆ ಗಲ್ಲು ಶಿಕ್ಷೆ ವಿಧಿಸಲು ಈ ಕಾಯ್ದೆಯಲ್ಲಿ ಅವಕಾಶವಿದೆ.

ಇದನ್ನು ಸುಗ್ರೀವಾಜ್ಞೆ ಮೂಲಕ ಹೊರಡಿಸಿ, ಅದನ್ನು ರಾಷ್ಟ್ರಪತಿಗಳ ಅಂಕಿತಕ್ಕೆ ಕಳುಹಿಸಿತ್ತು.
ಕೇಂದ್ರ ಸರ್ಕಾರದ ಈ ನಿರ್ಧಾರಕ್ಕೆ ಇದೀಗ ರಾಷ್ಟ್ರಪತಿ ಕೋವಿಂದ್ ಅವರು ಅಂಕಿತ ಹಾಕಿದ್ದು, ಶೀಘ್ರದಲ್ಲಿಯೇ ಕಾರ್ಯರೂಪಕ್ಕೆ ಬರಲಿದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

INDIA bloc march to Gandhi Smriti: 'ನಮ್ಮನ್ನು ತಡೆಯಲು ಸಾಧ್ಯವೇ ಇಲ್ಲ.. ಧರ್ಮೇಂದ್ರ ಪ್ರಧಾನ್ ರಾಜಿನಾಮೆ ನೀಡಲೇಬೇಕು': ರಾಹುಲ್ ಗಾಂಧಿ

CJP Protest: 'ಕಠಿಣ ಪರಿಶ್ರಮಕ್ಕೆ ಪ್ರತಿಫಲ ಸಿಗುವ ಸಂಸ್ಕೃತಿ ಸೃಷ್ಟಿಸಬೇಕು': ಕೊನೆಗೂ ಮೌನ ಮುರಿದ Sachin Tendulkar

ಇಂಟರ್ನೆಟ್ ಸೇವೆ ಸ್ಥಗಿತ; ಇಂದು ರಾತ್ರಿ ಪ್ರತಿಭಟನೆ ದಮನ ಮಾಡುವ ಯಾವುದೇ ಯೋಜನೆ ಇಲ್ಲ: ದೆಹಲಿ ಪೊಲೀಸರು

'ಧರ್ಮೇಂದ್ರ ಪ್ರಧಾನ್ ರನ್ನು ವಜಾ ಮಾಡಿ; ಇಲ್ಲದಿದ್ದರೆ ನಿಮ್ಮ ರಾಜೀನಾಮೆಯನ್ನೂ ಕೇಳುತ್ತೇವೆ': ಪ್ರಧಾನಿ ಮೋದಿಗೆ CJP ಮುಖ್ಯಸ್ಥ Abhijeet Dipke ಒತ್ತಾಯ

ಸೋನಮ್, ಸಹೋದರ ಸಾಕು ನಿಲ್ಲಿಸು; ಪ್ರತಿಭಟನೆ ನಿಲ್ಲಿಸಿ ವಿದ್ಯಾರ್ಥಿಗಳೇ ಮನೆಗೆ ಹೋಗಿ: ಪ್ರಧಾನಿ ನೋಡ್ಕೋತಾರೆ; ಸಲ್ಮಾನ್ ಖಾನ್!