ಸಾಂದರ್ಭಿಕ ಚಿತ್ರ 
ದೇಶ

ಮೇಘಾಲಯದಲ್ಲಿ ಎಎಫ್ಎಸ್ ಪಿಎ ಸಂಪೂರ್ಣ ರದ್ದು, ಅರುಣಾಚಲದಲ್ಲಿ ಭಾಗಶಃ ರದ್ದು

ಮೇಘಾಲದಲ್ಲಿ ಮಾರ್ಚ್ 31ರಿಂದಲೇ ಜಾರಿಗೆ ಬರುವಂತೆ ಪ್ರಕ್ಷುಬ್ಧ ಪ್ರದೇಶಗಳಲ್ಲಿ ಸೇನಾ ಪಡೆಗೆ ವಿಶೇಷ ಅಧಿಕಾರಿ...

ನವದೆಹಲಿ: ಮೇಘಾಲದಲ್ಲಿ ಮಾರ್ಚ್ 31ರಿಂದಲೇ ಜಾರಿಗೆ ಬರುವಂತೆ ಪ್ರಕ್ಷುಬ್ಧ ಪ್ರದೇಶಗಳಲ್ಲಿ ಸೇನಾ ಪಡೆಗೆ ವಿಶೇಷ ಅಧಿಕಾರಿ ಕಾಯ್ದೆ(ಎಎಫ್ ಎಸ್ ಪಿಎ)ಯನ್ನು ಸಂಪೂರ್ಣ ರದ್ದುಗೊಳಿಸಲಾಗಿದೆ ಮತ್ತು ಅರುಣಾಚಲ ಪ್ರದೇಶದಲ್ಲಿ ಕೇವಲ ಎಂಟು ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ಮಾತ್ರವೇ ಅದನ್ನು ಸೀಮಿತಗೊಳಿಸಲಾಗಿದೆ.
ಮೇಘಾಲಯದಲ್ಲಿ ಪರಿಸ್ಥಿತಿ ಸುಧಾರಿಸಿದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು 
ಕೇಂದ್ರ ಗೃಹ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಸರ್ಕಾರ ಎಎಫ್ ಎಸ್ ಸಿಎ ಕಾಯಿದೆಯನ್ನು ಮೇಘಾಲಯದಿಂದ ಸಂಪೂರ್ಣವಾಗಿ ತೆಗೆದು ಹಾಕಿದೆ ಮತ್ತು ಅರುಣಾಚಲ ಪ್ರದೇಶದಲ್ಲಿ  ಹದಿನಾರು ಪೊಲೀಸ್‌ ಠಾಣೆಗಳಿಗೆ ಬದಲು ಕೇವಲ ಎಂಟು ಪೊಲೀಸ್‌ ಠಾಣೆಗಳಿಗೆ ಮಾತ್ರವೇ ಅದನ್ನು ಸೀಮಿತಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಮೇಘಾಲಯ ಮತ್ತು ಅರುಣಾಚಲ ಪ್ರದೇಶ ರಾಜ್ಯಗಳಲ್ಲಿನ ಕಾನೂನು ಸುವ್ಯವಸ್ಥೆಯು ಗಮನಾರ್ಹವಾಗಿ ಸುಧಾರಿಸಿರುವುದನ್ನು ಪರಿಗಣಿಸಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.
ಸಶಸ್ತ್ರ ಪಡೆಗಳ ಈ ವಿಶೇಷ ಅಧಿಕಾರ ಕಾಯ್ದೆ ಅಡಿ, ಯಾವುದೇ ಸೂಚನೆ ನೀಡಿದ ಕಾರ್ಯಚರಣೆ ನಡೆಸುವ ಮತ್ತು ಬಂಧಿಸಬಹುದಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT