ನವದೆಹಲಿ: ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ವಿರುದ್ಧದ ಮಹಾಭಿಯೋಗ ನಿಲುವಳಿ ಸೂಚನೆಯನ್ನು ತಿರಸ್ಕರಿಸಿರುವ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ನಿರ್ಧಾರ ಸರಿಯಾಗಿಯೇ ಇದೆ ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.
ಅತ್ತ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಸಿಜೆಐ ವಿರುದ್ಧದ ಮಹಾಭಿಯೋಗ ನಿಲುವಳಿ ಸೂಚನೆ ತಿರಸ್ಕರಿಸಿದ ಬೆನ್ನಲ್ಲೇ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸುಬ್ರಮಣಿಯನ್ ಸ್ವಾಮಿ ಅವರು, ನಾಯ್ಡು ಅವರ ನಿರ್ಧಾರ ಸರಿಯಾಗಿಯೇ ಇದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ನಿರ್ಧಾರ ಕೈಗೊಳ್ಳಲು ಎರಡು ದಿನಗಳ ಅವಶ್ಯಕತೆ ಇಲ್ಲ. ಆರಂಭದ ಹಂತದಲ್ಲೇ ಇದನ್ನು ತಿರಸ್ಕರಿಸಬೇಕಿತ್ತು. ಸಿಜೆಐ ಅವರ ವಿರುದ್ಧ ಮಹಾಭಿಯೋಗ ಮಂಡನೆ ನಿಲುವಳಿ ಸೂಚನೆ ಮೂಲಕ ಕಾಂಗ್ರೆಸ್ ಆತ್ಮಹತ್ಯೆಗೆ ಪ್ರಯತ್ನಿಸಿದೆ ಎಂದು ಸ್ವಾಮಿ ಕಿಡಿಕಾರಿದ್ದಾರೆ.
ಇನ್ನು ಇಂತಹುದೇ ಪ್ರತಿಕ್ರಿಯೆಯನ್ನು ಕೇಂದ್ರ ಸಚಿವ ಅನಂತ್ ಕುಮಾರ್ ಅವರು ಹೇಳಿದ್ದು, ಕಾಂಗ್ರೆಸಿಗರಿಗೆ ಸಂವಿಧಾನದ ಬಗ್ಗೆ ಜ್ಞಾನವೇ ಇಲ್ಲ, ಇಷ್ಟೆಲ್ಲಾ ಆದರು ಉಪರಾಷ್ಟ್ರಪತಿಗಳ ನಿರ್ಧಾರವನ್ನು ಪ್ರಶ್ನಿಸಲು ಮುಂದಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.
ಇನ್ನು ಇಂದು ಬೆಳಗ್ಗೆ ಕಾಂಗ್ರೆಸ್ ನೀಡಿದ್ದ ಸಿಜೆಐ ವಿರುದ್ಧದ ಮಹಾಭಿಯೋಗ ನಿಲುವಳಿ ಸೂಚನೆಯನ್ನು ಉಪರಾಷ್ಟ್ರಪತಿ ಹಾಗೂ ರಾಜ್ಯಸಭೆ ಸಭಾಪತಿ ವೆಂಕಯ್ಯ ನಾಯ್ಡು ತಿರಸ್ಕರಿಸಿದ್ದರು. ತಮ್ಮ ತಿರಸ್ಕಾರಕ್ಕೆ ತಾಂತ್ರಿಕ ಕಾರಣ ನೀಡಿರುವ ಅವರು, ಮಹಾಭಿಯೋಗ ನಿಲುವಳಿ ಸೂಚನೆಯ ಅಂಶಗಳು ಪೂರಕವಾಗಿಲ್ಲ, ಅಲ್ಲದೆ ಮಹಾಭಿಯೋಗ ನಿಲುವಳಿ ಸೂಚನೆಗೆ ಸಹಿಹಾಕಿರುವ ಆರು ಸಂಸದರು ಈಗ ಕಾರ್ಯನಿರ್ವಹಿಸುತ್ತಿಲ್ಲ. ಹೀಗಾಗಿ ತಾಂತ್ರಿಕವಾಗಿ ಈ ನಿಲುವಳಿ ಸೂಚನೆಗೆ ಅನುಮೋದನೆ ನೀಡಲು ಸಾಧ್ಯವಿಲ್ಲ ಎಂದು ಹೇಳಿ ನಾಯ್ಡು ನಿಲುವಳಿ ಸೂಚನೆಯನ್ನು ತಿರಸ್ಕರಿಸಿದ್ದಾರೆ ಎನ್ನಲಾಗಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos