ಸಂಗ್ರಹ ಚಿತ್ರ 
ದೇಶ

ನಗದು ಕೊರತೆ: 3 ಲಕ್ಷ ಕೋಟಿಗೂ ಅಧಿಕ ಹಣ ಚಲಾವಣೆಯಾಗದೇ ವಿಚಾರಣೆಯಲ್ಲಿ ಸ್ಥಗಿತ!

ನೋಟು ನಿಷೇಧ ಬಳಿಕ ದೇಶದಲ್ಲಿ ಎರಡನೇ ಬಾರಿಗೆ ನಗದು ಕೊರತೆ ಮುಂದುವರೆದಿರುವಂತೆಯೇ ಸುಮಾರು 3 ಲಕ್ಷ ಕೋಟಿಗೂ ಅಧಿಕ ಹಣ ಚಲಾವಣೆಯಾಗದೇ ಸ್ಥಗಿತವಾಗಿದೆ ಎಂಬ ಮಹತ್ತರ ಮಾಹಿತಿ ಇದೀಗ ಲಭ್ಯವಾಗಿದೆ.

ನವದೆಹಲಿ: ನೋಟು ನಿಷೇಧ ಬಳಿಕ ದೇಶದಲ್ಲಿ ಎರಡನೇ ಬಾರಿಗೆ ನಗದು ಕೊರತೆ ಮುಂದುವರೆದಿರುವಂತೆಯೇ ಸುಮಾರು 3 ಲಕ್ಷ ಕೋಟಿಗೂ ಅಧಿಕ ಹಣ ಚಲಾವಣೆಯಾಗದೇ ಸ್ಥಗಿತವಾಗಿದೆ ಎಂಬ ಮಹತ್ತರ ಮಾಹಿತಿ ಇದೀಗ ಲಭ್ಯವಾಗಿದೆ.
ಮೂಲಗಳ ಪ್ರಕಾರ ತೆರಿಗೆ ಸಂಬಂಧಿತ ವಿವಿಧ ಪ್ರಕರಣಗಳಲ್ಲಿ ದೊರೆತ ಸುಮಾರು 3.2ಲಕ್ಷ ಕೋಟಿ ಹಣ ಚಲಾವಣೆಯಾಗದೇ ಸ್ಥಗಿತವಾಗಿದೆ. ತೆರಿಗೆ ಸಂಬಂಧಿತ ಪ್ರಕರಣಗಳ ವಿಚಾರಣೆಗಳು ನ್ಯಾಯಾಲಯದಲ್ಲಿದ್ದು, ಈ ಪ್ರಕರಣಗಳು ಇತ್ಯರ್ಥವಾಗುವವರೆಗೂ ಈ ಅಪಾರ ಪ್ರಮಾಣದ ನಗದು ಬಳಕೆಗೆ ಕಾನೂನು ತೊಡಕು ಉಂಟಾಗುತ್ತಿದೆ. ಈ ಪೈಕಿ ಸುಮಾರು 2.40 ಲಕ್ಷ ಕೋಟಿ ನೇರ ತೆರಿಗೆಗೆ ಸಂಬಂಧಿಸಿದ್ದಾಗಿದ್ದು, ಉಳಿದ 1.18 ಲಕ್ಷ ಕೋಟಿ ಹಣ ಪರೋಕ್ಷ ತೆರಿಗೆ ವ್ಯಾಪ್ತಿಯ ಹಣವಾಗಿದೆ ಎಂದು ತಿಳಿದುಬಂದಿದೆ. 
ಅಂತೆಯೇ ಕಳೆದ 5 ರಿಂದ 10 ವರ್ಷಗಳಲ್ಲಿ ನೇರ ತೆರಿಗೆ ಸಂಬಂಧಿತ ಸುಮಾರು 33, 554 ಪ್ರಕರಣಗಳ ಬಾಕಿ ಉಳಿದಿದ್ದು, ಕಳೆದ 10 ವರ್ಷಗಳಲ್ಲಿ  4,230 ಹಳೆಯ ಪ್ರಕರಣಗಳು ಇನ್ನೂ ವಿಚಾರಣೆಯ ಹಂತದಲ್ಲಿವೆ. ಒಟ್ಟಾರೆ ತೆರಿಗೆ ಪಾವತಿ ಒಟ್ಟು ಪ್ರಕರಣಗಳ ಪೈಕಿ ಶೇ.85ಕ್ಕೂ ಅಧಿಕ ಪ್ರಮಾಣದ ಪ್ರಕರಣಗಳು ಇನ್ನೂ ವಿಚಾರಣೆ ಹಂತದಲ್ಲಿದೆ. 
ಈ ಬಗ್ಗೆ ಮಾಹಿತಿ ನೀಡಿರುವ ತೆರಿಗೆ ಅಧಿಕಾರಿಗಳು ತೆರಿಗೆ ಬಾಕಿ ಉಳಿಕೆ ಸಂಬಂಧ ಸಣ್ಣ ಪ್ರಮಾಣದ ಬಾಕಿಯನ್ನು ಮಾತ್ರ ಕಲೆ ಹಾಕಲು ಸಾಧ್ಯ. ಉಳಿಕೆಯ ದೊಡ್ಡ ಮೊತ್ತದ ತೆರಿಗೆ ಹಣವನ್ನು ಸಂಗ್ರಹ ಮಾಡಲು ಕಷ್ಟವಾಗುತ್ತಿದೆ. ತೆರಿಗೆ ಬಾಕಿ ಪಾವತಿಗೆ ಕೇಂದ್ರ ಸರ್ಕಾರ ಅಧಿಕಾರಿಗಳಿಗೆ ಗುರಿ ನಿಗದಿ ಪಡಿಸುತ್ತಿದ್ದು, ಆದರೆ ತೆರಿಗೆ ಬಾಕಿ ವಸೂಲಿ ವಿವಿಧ ಕಾರಣಗಳಿಂದಾಗಿ ಕಷ್ಟವಾಗುತ್ತಿದೆ. ಆದರೂ ಅಧಿಕಾರಿಗಳು ತೆರಿಗೆದಾರರ ಕುರಿತಂತೆ ಸೂಕ್ಷ್ಮವಾಗಿ ಗಮನ ಹರಿಸುತ್ತಿದೆ ಎಂದು ಹೇಳಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ತಮಿಳುನಾಡು ಜನತೆಗೆ CM ವಿಜಯ್ ಬಂಪರ್‌ ಗಿಫ್ಟ್;‌ ಸರ್ಕಾರಿ ನೌಕರರಿಗೆ 3ನೇ ಮಗುವಿಗೂ 1 ವರ್ಷ ಮಾತೃತ್ವ ರಜೆ; ಆರೋಗ್ಯ ವಿಮೆ 25 ಲಕ್ಷ ರೂ.ಗೆ ಹೆಚ್ಚಳ!