ಗುರುವಾಯೂರು ದೇವಸ್ಥಾನ 
ದೇಶ

ಗುರುವಾಯೂರು ಪ್ರಸಾದ ನಿಲಯಕ್ಕೆ ಹಿಂದೂಯೇತರರಿಗೆ ಪ್ರವೇಶ ತಡೆ ಹಿಡಿದ ದೇವಸ್ಥಾನ ಮಂಡಳಿ

ಇತ್ತೀಚಿಗೆ ಗುರುವಾಯೂರು ಶ್ರೀಕೃಷ್ಣ ದೇವಾಲಯದ ಪ್ರಸಾದ ನಿಲಯ ಪ್ರವೇಶಕ್ಕೆ ಹಿಂದೂಯೇತರರಿಗೂ ಅವಕಾಶ....

ತ್ರಿಶೂರ್(ಕೇರಳ): ಇತ್ತೀಚಿಗೆ ಗುರುವಾಯೂರು ಶ್ರೀಕೃಷ್ಣ  ದೇವಾಲಯದ ಪ್ರಸಾದ ನಿಲಯ ಪ್ರವೇಶಕ್ಕೆ ಹಿಂದೂಯೇತರರಿಗೂ ಅವಕಾಶ ನೀಡಿದ್ದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಮಂಗಳವಾರ ಅನುಮತಿ ನಿರ್ಧಾರವನ್ನು ತಡೆ ಹಿಡಿಯಲಾಗಿದೆ.
ಕೇರಳದ ಗುರುವಾಯೂರು ಕೃಷ್ಣ ದೇಗುಲದಲ್ಲಿ ಹಿಂದೂಯೇತರರಿಗೆ ಪ್ರಸಾದ ಭೋಜನಕ್ಕೆ ಅವಕಾಶವಿರಲಿಲ್ಲ. ಈ ಸಂಬಂಧ ಕಳೆದ ವಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದ ದೇಗುಲದ ಆಡಳಿತ ಮಂಡಳಿ, ಪ್ರಸಾದಕ್ಕೆ ಎಲ್ಲ ಧರ್ಮದವರಿಗೂ ಅವಕಾಶ ಕಲ್ಪಿಸಲಾಗುತ್ತದೆ ಎಂದು ಘೋಷಿಸಿತ್ತು. ಆದರೆ ಇದಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ದೇಗುಲದ ಆಡಳಿತ ಮಂಡಳಿ ಇಂದು ಸಭೆ ಸೇರಿ ಅನುಮತಿ ತಡೆಹಿಡಿಯುವ ನಿರ್ಧಾರ ಕೈಗೊಂಡಿದೆ.
ಪ್ರಧಾನ ಅರ್ಚಕರು ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪ್ರಸಾದ ನಿಲಯಕ್ಕೆ ಹಿಂದೂಯೇತರರಿಗೆ ಪ್ರವೇಶ ನೀಡುವ ನಿರ್ಧಾರ ತಡೆ ಹಿಡಿಯಲಾಗಿದೆ. ಈ ಸಂಬಂಧ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅಲ್ಲಿಯವರಿಗೆ ಹಿಂದೂಯೇತರರಿಗೆ ಅವಕಾಶವಿಲ್ಲ ಎಂದು ದೇವಸ್ಥಾನ ಮಂಡಳಿ ಅಧ್ಯಕ್ಷ ಕೆಬಿ ಮೋಹಂದಾಸ್ ಅವರು ಹೇಳಿದ್ದಾರೆ. ಅಲ್ಲದೆ ದೇಗುಲದ ಊಟದ ಕೋಣೆಗೆ ಆಗಮಿಸುವವರಿಗೆ ಇದ್ದ ವಸ್ತ್ರಸಂಹಿತೆಯನ್ನೂ ಮುಂದುವರೆಸಲಾಗಿದ್ದು, ಭಕ್ತಾದಿಗಳು ಅಂಗಿ, ಪ್ಯಾಂಟ್‌ ಹಾಗೂ ಚಪ್ಪಲಿಯನ್ನೂ ಧರಿಸಿ ಊಟದ ಕೋಣೆಗೆ ಬರವಂತಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT