ಸುಪ್ರೀಂ ಕೋರ್ಟ್ 
ದೇಶ

ಕತುವಾ ಪ್ರಕರಣದಲ್ಲಿ ನ್ಯಾಯಸಮ್ಮತ ವಿಚಾರಣೆ ಖಚಿತಪಡಿಸುವುದು ನಮ್ಮ ಕಾಳಜಿ: ಸುಪ್ರೀಂ ಕೋರ್ಟ್

ಕತುವಾದಲ್ಲಿ ಎಂಟು ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ...

ನವದೆಹಲಿ: ಕತುವಾದಲ್ಲಿ ಎಂಟು ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯೋಚಿತ ತನಿಖೆ ನಡೆಯುವ ಬಗ್ಗೆ ನಿಜವಾದ ಕಳವಳವಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠ, ನ್ಯಾಯೋಚಿತ ವಿಚಾರಣೆಯಲ್ಲಿ ಸಣ್ಣದೊಂದು ಕೊರತೆ ಕಂಡುಬಂದರೂ ಕೂಡ ಕತುವಾದ ಹೊರಗೆ ಪ್ರಕರಣವನ್ನು ವರ್ಗಾಯಿಸಲಾಗುವುದು ಎಂದು ಹೇಳಿದೆ. ಕೇವಲ ಆರೋಪಿಗಳಿಗೆ ಮಾತ್ರವಲ್ಲದೆ ಬಾಲಕಿಯ ಕುಟುಂಬದವರಿಗೆ ಸಹ ಸೂಕ್ತ ನ್ಯಾಯ ಮತ್ತು ರಕ್ಷಣೆ ಒದಗಿಸಿಕೊಡಬೇಕಾಗಿದ್ದು ಅವರ ವಕೀಲರಿಗೆ ಸಹ ಸರಿಯಾದ ಭದ್ರತೆ ಒದಗಿಸಿಕೊಡಬೇಕೆಂದು ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್ ಮತ್ತು ಡಿ.ವೈ.ಚಂದ್ರಚೂಡ್ ಅವರನ್ನೊಳಗೊಂಡ ನ್ಯಾಯಪೀಠ ಹೇಳಿದೆ.

ಕತುವಾ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯವಾದಿಗಳು ತಪ್ಪಾಗಿ ನಡೆದುಕೊಂಡರೆ ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು. ನ್ಯಾಯೋಚಿತವಾಗಿ ಪ್ರಕರಣದ ವಿಚಾರಣೆ ನಡೆಸುವುದು ಮುಖ್ಯವಾಗಿದೆ. ಈ ಬಗ್ಗೆ ತಮಗೆ ಆತಂಕವಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಜಮ್ಮುವಿನ ಕತುವಾ ಎಂಬಲ್ಲಿ ಕೆಳಜಾತಿಯ ಬುಡಕಟ್ಟು ಜನಾಂಗದ 8 ವರ್ಷದ ಬಾಲಕಿಯೊಬ್ಬಳನ್ನು ಅಪಹರಿಸಿ ಕಳೆದ ಜನವರಿ 10ರಂದು ಅತ್ಯಾಚಾರವೆಸಗಲಾಗಿದ್ದು ಎಂಬ ಆರೋಪ ಕೇಳಿಬರುತ್ತಿದೆ. ಆಕೆಯ ಮೃತದೇಹ ಮನೆಯವರಿಗೆ ಒಂದು ವಾರ ಕಳೆದ ನಂತರ ಸಿಕ್ಕಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT