ಸುಪ್ರೀಂ ಕೋರ್ಟ್ 
ದೇಶ

ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇಮಕಾತಿಯಲ್ಲಿ ಕೇಂದ್ರದ ಪಾತ್ರ, ಪ್ರಕ್ರಿಯೆ ಏನು? ಇಲ್ಲಿವೆ ತಿಳಿದುಕೊಳ್ಳಬೇಕಾದ ಅಂಶಗಳು

ಹಿರಿಯ ಅಡ್ವೊಕೇಟ್ ಇಂದು ಮಲ್ಹೋತ್ರ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಹುದ್ದೆಗೆ ನೇಮಕಾತಿ ಮಾಡುವ ಆದೇಶವನ್ನು ಕೇಂದ್ರ ಸರ್ಕಾರ ಅಂತಿಮಗೊಳಿಸಿದೆ. ಆದರೆ ಉತ್ತರಾಖಂಡ್ ಹೈ ಕೋರ್ಟ್

ನವದೆಹಲಿ: ಹಿರಿಯ ಅಡ್ವೊಕೇಟ್ ಇಂದು ಮಲ್ಹೋತ್ರ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಹುದ್ದೆಗೆ ನೇಮಕಾತಿ ಮಾಡುವ ಆದೇಶವನ್ನು ಕೇಂದ್ರ ಸರ್ಕಾರ ಅಂತಿಮಗೊಳಿಸಿದೆ. ಆದರೆ ಉತ್ತರಾಖಂಡ್ ಹೈ ಕೋರ್ಟ್ ನ್ಯಾಯಾಧೀಶರಾದ ಕೆಎಂ ಜೋಸೆಫ್ ಅವರ ನೇಮಕಾತಿಯ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ. 
ಹೈಕೋರ್ಟ್ ನ್ಯಾಯಾಧೀಶರಿಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಬಡ್ತಿ ನೀಡುವುದಕ್ಕೆ ಸಂಬಂಧಿಸಿದಂತೆ ಪರ ವಿರೋಧ ಚರ್ಚೆಗಳು ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇಮಕಾತಿಯಲ್ಲಿ ಕೇಂದ್ರ ಸರ್ಕಾರದ ಪಾತ್ರವೇನು, ಪ್ರಕ್ರಿಯೆ ಹೇಗೆ ನಡೆಯುತ್ತದೆ  ಎಂಬ ಬಗ್ಗೆ ಇಲ್ಲಿ ಸಂಪೂರ್ಣ ಮಾಹಿತಿ ಇದೆ. 
ನ್ಯಾ.ಜೋಸೆಫ್ ಹಾಗೂ ಇಂದು ಮಲ್ಹೋತ್ರ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶರನ್ನಾಗಿ ನೇಮಕ ಮಾಡಲು ಶಿಫಾರಸ್ಸು ಮಾಡಿದ್ದ ಸುಪ್ರೀಂ ಕೋರ್ಟ್ ನ ಕೊಲಿಜಿಯಂ ನ ಕಡತ ಜ.22 ರಂದು ಕಾನೂನು ಇಲಾಖೆಗೆ ತಲುಪಿತ್ತು. ಫೆಬ್ರವರಿ ಮೊದಲನೇ ವಾರದಲ್ಲಿ ಪ್ರಕ್ರಿಯೆ ಪೂರ್ಣಗೊಂಡಿತ್ತಾದರೂ ಮಲ್ಹೋತ್ರ ಅವರನ್ನು ಮಾತ್ರ ಸುಪ್ರೀಂ ಕೋರ್ಟ್ ನ್ಯಾಯಾಧೀಶರನ್ನಾಗಿ ಮಾಡುವ ಉದ್ದೇಶ ಕೇಂದ್ರಕ್ಕೆ ಇದ್ದಿದ್ದರಿಂದ ಶಿಫಾರಸ್ಸನ್ನು ತಡೆ ಹಿಡಿಯಲಾಗಿತ್ತು. 
ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇಮಕಾತಿ ಪ್ರಕ್ರಿಯೆಯಲ್ಲಿ ಕೇಂದ್ರ ಸರ್ಕಾರಕ್ಕೆ ಯಾವುದೇ ಸ್ಪಷ್ಟ ಪಾತ್ರವಿಲ್ಲ. ಆದರೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇಮಕಾತಿಗೆ ಬಂದಿರುವ ಶಿಫಾರಸ್ಸುಗಳನ್ನು ತಡೆಹಿಡಿಯುವ ಅಧಿಕಾರ ಹೊಂದಿದೆ. ನಿಯಮಗಳ ಪ್ರಕಾರ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರು ಟಾಪ್-4 ನ್ಯಾಯಾಧೀಶರೊಂದಿಗೆ ಸಮಾಲೋಚನೆ ನಡೆಸಿ ಹೈಕೋರ್ಟ್ ನಿಂದ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಸ್ಥಾನಕ್ಕೆ ಬಡ್ತಿ ನೀಡಬೇಕಿರುವ ನ್ಯಾಯಾಧೀಶರ ಪಟ್ಟಿಯನ್ನು ತಯಾರಿಸಿ ಕೇಂದ್ರ ಸರ್ಕಾರಕ್ಕೆ ಕಳಿಸುತ್ತಾರೆ. ಸಿಜೆಐ, ಕೇಂದ್ರ ಕಾನೂನು ಸಚಿವರು ಅಂತಿಮಗೊಳಿಸಿದ ಶಿಫಾರಸ್ಸನ್ನು ಪ್ರಧಾನಿಗಳಿಗೆ ಕಳಿಸಲಾಗುತ್ತದೆ. ನಂತರ ಪ್ರಧಾನಿ ಅದನ್ನು ಪರಿಶೀಲಿಸಿ ರಾಷ್ಟ್ರಪತಿಗಳಿಗೆ ಕಳಿಸುತ್ತಾರೆ. 
ಒಮ್ಮೆ ರಾಷ್ಟ್ರಪತಿಗಳು ಸಹಿ ಹಾಕಿದರೆ ಅದನ್ನು ಕೇಂದ್ರ ಸರ್ಕಾರದ ನ್ಯಾಯಾಂಗ ವಿಭಾಗದ ಕಾರ್ಯದರ್ಶಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಲಿರುವವರ ಹೆಸರನ್ನು ಗೆಜೆಟ್ ನೋಟಿಫಿಕೇಶನ್ ಮೂಲಕ ಪ್ರಕಟಿಸುತ್ತಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಇಲ್ಲ ಪರಿಣಾಮ ಎದುರಿಸಬೇಕಾಗುತ್ತದೆ: ಕಾಂಗ್ರೆಸ್ ಗೆ 'ಅಹಿಂದ' ಎಚ್ಚರಿಕೆ

ಮಮತಾಗೆ ಬಿಗ್ ಶಾಕ್; TMC ವಿಭಜನೆ? ತೃಣಮೂಲ ಕಾಂಗ್ರೆಸ್ ನ 50 ಶಾಸಕರು, 20 ಸಂಸದರು ಬಿಜೆಪಿ ಸೇರ್ಪಡೆ?

KPCCಗೆ ಮೇಜರ್ ಸರ್ಜರಿ: ನಟಿ ಭಾವನಾ, ನಿಕೇತ್ ರಾಜ್ ಮೌರ್ಯ ಸೇರಿ 31 ಪದಾಧಿಕಾರಿಗಳಿಗೆ ಗೇಟ್‌ಪಾಸ್‌!

ನಾವು ಕಳವಳ ವ್ಯಕ್ತಪಡಿಸಿದೆವು, ಆದ್ರೆ ಸಿದ್ದರಾಮಯ್ಯ ಸೈಲೆಂಟ್ ಆಗಿದ್ದರು: ಸಚಿವ ಎಚ್.ಕೆ.ಪಾಟೀಲ್

SCROLL FOR NEXT