ನವದೆಹಲಿ: ಇಂದು ಮಲ್ಹೋತ್ರ ಅವರನ್ನು ಸುಪ್ರೀಂ ಕೋರ್ಟ್ ನ ನ್ಯಾಯಾಧೀಶೆಯಾಗಿ ನೇಮಕ ಮಾಡಿರುವ ಆದೇಶವನ್ನು ತಡೆಹಿಡಿಯುವುದರ ಬಗ್ಗೆ ಯೋಚಿಸುವುದೂ ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರು ಹೇಳಿದ್ದಾರೆ.
ಇಂದು ಮಲ್ಹೋತ್ರ ಅವರ ನೇಮಕಾತಿ ಆದೇಶವನ್ನು ತಡೆಹಿಡಿಯುವುದು ನ್ಯಾಯವಲ್ಲ ಎಂದು ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಾದ ದೀಪಕ್ ಮಿಶ್ರಾ ಅಭಿಪ್ರಾಯಪಟ್ಟಿದ್ದಾರೆ. ಇಂದು ಮಲ್ಹೋತ್ರ ಅವರ ನೇಮಕಾತಿ ಬಗ್ಗೆ ಪ್ರತಿಕ್ರಿಯೆ ನೀಡಿದ ಇಂದಿರಾ ಜೈಸಿಂಗ್, ಇದರಿಂದಾಗಿ ನ್ಯಾಯಾಂಗದ ಸ್ವಾತಂತ್ರ್ಯದ ಬಗ್ಗೆ ತಾವು ಚಿಂತಿತರಾಗಿರುವುದಾಗಿ ಹೇಳಿದ್ದರು.
ಕೇಂದ್ರ ಸರ್ಕಾರ ಒಂದಷ್ಟು ಹೆಸರುಗಳನ್ನು ಆಯ್ಕೆ ಮಾಡಿ, ಬಾರ್ ಕೌನ್ಸಿಲ್ ನಿಂದ ಕಳಿಸಿಕೊಟ್ಟಿದೆ ಎಂದರೆ ಅದು ಅವರ ಕಾರ್ಯವ್ಯಾಪ್ತಿಯ ಒಳಗೆ ಇರುತ್ತದೆ ಎಂದು ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಾಧೀಶರಾದ ದೀಪಕ್ ಮಿಶ್ರಾ ಹೇಳಿದ್ದಾರೆ.