ಕಾವೇರಿ ವಿವಾದ: ನಿರ್ವಹಣಾ ಮಂಡಳಿ ಕರಡು ಯೋಜನೆಗೆ 2 ವಾರಗಳ ಕಾಲಾವಕಾಶಕ್ಕೆ ಕೇಂದ್ರ ಮನವಿ 
ದೇಶ

ಕಾವೇರಿ ವಿವಾದ: ನಿರ್ವಹಣಾ ಮಂಡಳಿ ಕರಡು ಯೋಜನೆಗೆ 2 ವಾರಗಳ ಕಾಲಾವಕಾಶಕ್ಕೆ ಕೇಂದ್ರ ಮನವಿ

ಕಾವೇರಿ ವಿವಾದ ಸಂಬಂಧ ಕಾವೇರಿ ಕಾರ್ಯನಿರ್ವಹಣೆ ಮಂಡಳಿ ರಚನೆ ನಿಲನಕ್ಷೆ ತಯಾರಿಗೆ ತಮಗೆ ಹೆಚ್ಚುವರಿಯಾಗಿ ಎರಡು ವಾರಗಳ ಕಾಲಾವಕಾಶ ನೀಡಬೇಕೆಂದು....

ನವದೆಹಲಿ: ಕಾವೇರಿ ವಿವಾದ ಸಂಬಂಧ ಕಾವೇರಿ ಕಾರ್ಯನಿರ್ವಹಣೆ ಮಂಡಳಿ ರಚನೆ ನಿಲನಕ್ಷೆ ತಯಾರಿಗೆ ತಮಗೆ ಹೆಚ್ಚುವರಿಯಾಗಿ ಎರಡು ವಾರಗಳ ಕಾಲಾವಕಾಶ ನೀಡಬೇಕೆಂದು ಕೇಂದ್ರ ಸರ್ಕಾರ ಇಂದು ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದೆ.
ಆರು ವಾರಗಳ ಒಳಗೆ ಕಾವೇರಿ ನಿರ್ವಹಣೆ ಮಂಡಳಿ ರಚಿಸಬೇಕೆಂದು ನ್ಯಾಯಾಲಯ ನೀಡಿದ್ದ ಆದೇಶವನ್ನು ಸರ್ಕಾರ ಏಕೆ ಪಾಲಿಸಲಿಲ್ಲ? ಮಾರ್ಚ್ 31ಕ್ಕೆ ಮುನ್ನ ಈ ಸಂಬಂಧ ಕೋರ್ಟ್ ಗೆ ಏಕೆ ಮಾಹಿತಿ ನೀಡಲಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ಶುಕ್ರವಾರ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.
ಕಳೆದ ಏ. 9ರಂದು  ಸಹ ಸುಪ್ರೀಂ ಕೋರ್ಟ್ ಕೇಂದ್ರವನ್ನು ಟೀಕಿಸಿದ್ದು ಫೆಬ್ರವರಿ 16ರ ನ್ಯಾಯಾಲಯದ ತೀರ್ಪಿನ ಅನುಷ್ಥಾನಕ್ಕಾಗಿ  ಮೇ 3ರೊಳಗೆ ಕರಡು ಯೋಜನೆ ರೂಪಿಸುವಂತೆ  ಆದೇಶ ನಿಡಿತ್ತು.
ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ಶನಿವಾರ ಪ್ರಧಾನಿ ಮೋದಿ ಅವರಿಗೆ ಬರೆದ ಪತ್ರದಲ್ಲಿ ರಾಜ್ಯ ಸರ್ಕಾರ ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಒಪ್ಪುವುದಿಲ್ಲ. ಇದು 'ಅಸಂವಿಧಾನಿಕ' ನಿಲುವು ಎಂದು ತಿಳಿಸಿದ್ದರು. ಅಲ್ಲದೆ ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ನಿರ್ವಹಣಾ ಮಂಡಳಿ ರಚನೆ ಬಗ್ಗೆ ಯಾವ ಕಾರ್ಯವಿಧಾನವನ್ನು ನಿರ್ದೇಶಿಸಲಿಲ್ಲ  ಎಂದಿದ್ದರು.
ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ,  ಅಮಿತವಾ ರಾಯ್ ಹಾಗು ಎ.ಎಂ. ಖಾನ್ವಿಲ್ಕರ್ ಅವರನ್ನೊಳಗೊಂಡ ನ್ಯಾಯಪೀಠವು ಫೆಬ್ರವರಿ 16ರಂದು ಕರ್ನಾಟಕ,, ತಮಿಳುನಾಡು ಮತ್ತು ಕೇರಳ ಮತ್ತು ಪುದುಚೆರಿಯ ನಡುವೆ ವಿವಾದಕ್ಕೀಡಾಗಿದ್ದ ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಅಂತಿಮ ತೀರ್ಪನ್ನು ಪ್ರಕಟಿಸಿತ್ತು.
ತಮಿಳುನಾಡಿಗೆ 192 ಟಿಎಂಸಿಗೆ ಬದಲಾಗಿ 177.25 ಟಿಎಂಸಿ ನೀರನ್ನು ಬಿಡುಗಡೆ ಮಾಡಲು ನ್ಯಾಯಪೀಠವು ಕರ್ನಾಟಕಕ್ಕೆ ಸೂಚಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

SCROLL FOR NEXT