ಪಿಣರಾಯಿ ವಿಜಯನ್ 
ದೇಶ

ಕೇರಳ ಸಿಎಂ ಪಿಣರಾಯಿ ವಿಜಯನ್ ಗೆ ಮಾವೋವಾದಿಗಳಿಂದ ಕೊಲೆ ಬೆದರಿಕೆ: ಪ್ರಕರಣ ದಾಖಲು

ಕೇರಳ ಸಿಎಂ ಪಿಣರಾಯಿ ವಿಜಯನ್ ಗೆ ಮಾವೋವಾದಿಗಳಿಂದ ಕೊಲೆ ಬೆದರಿಕೆ ಬಂದಿದ್ದು, ಪಿಣರಾಯಿ ವಿಜಯ್ ಅವರನ್ನು ಹತ್ಯೆ ಮಾಡುವ ಬಗ್ಗೆ ಪೋಸ್ಟರ್ ಗಳು ಕಾಣಿಸಿಕೊಂಡಿವೆ.

ತ್ರಿಶೂರ್: ಕೇರಳ ಸಿಎಂ ಪಿಣರಾಯಿ ವಿಜಯನ್ ಗೆ ಮಾವೋವಾದಿಗಳಿಂದ ಕೊಲೆ ಬೆದರಿಕೆ ಬಂದಿದ್ದು, ಪಿಣರಾಯಿ ವಿಜಯ್ ಅವರನ್ನು ಹತ್ಯೆ ಮಾಡುವ ಬಗ್ಗೆ  ಪೋಸ್ಟರ್ ಗಳು ಕಾಣಿಸಿಕೊಂಡಿವೆ. 
ಪಾಲಕ್ಕಾಡ್ ನ ಪಝಾಯಣ್ಣೂರ್ ನ ಪೊಲೀಸ್ ಅಧಿಕಾರಿ ವರ್ಕ್ ಶಾಪ್ ಒಂದರಲ್ಲಿ ವಿಜಯನ್ ತಲೆ ಕಡಿಯುವ ಬಗ್ಗೆ ಮಾವೋವಾದಿಗಳು ಹಾಕಿದ್ದ ಪೋಸ್ಟರ್ ನ್ನು ಗಮನಿಸಿದ್ದಾರೆ.  ಪೊಲೀಸರು ಸ್ವಯಂ ಪ್ರೇರಿತರಾಗಿ ದೂರು ದಾಖಲಿಸಿಕೊಳ್ಳಲು ಅವಕಾಶ ಇಲ್ಲದೇ ಇರುವ ಹಿನ್ನೆಲೆಯಲ್ಲಿ ಘಟನೆಯನ್ನು ವಡಾಕಂಚೇರಿ ಮ್ಯಾಜಿಸ್ಟಿಯಲ್ ಕೋರ್ಟ್ ಗಮನಕ್ಕೆ ತರಲಾಗಿದೆ.  "ಕೇರಳದ ನಕ್ಸಲ್ಬರಿ"ಯಿಂದ  ಪೋಸ್ಟರ್ ನ್ನು ಅಂಟಿಸಲಾಗಿದ್ದು, 
ಕಸ್ಟಡಿಯಲ್ಲಿ ಆರೋಪಿಗಳಿಗೆ ನೀಡಲಾಗುವ ಕಿರುಕುಳ, ಸಾವುಹಾಗೂ ಆದಿವಾಸಿ ಯುವಕನನ್ನು ಗುಂಪೊಂದು ಹೊಡೆದು ಹತ್ಯೆ ಮಾಡಿರುವ ವಿಷಯಗಳನ್ನು ಪೋಸ್ಟರ್ ನಲ್ಲಿ ಪ್ರಸ್ತಾಪಿಸಲಾಗಿದ್ದು, ಪಿಣರಾಯಿ ವಿಜಯನ್ ಈ ಘಟನೆಗಳನ್ನು ನಿರ್ವಹಿಸಲು ವಿಫಲರಾಗಿದ್ದು, ಅವರ ತಲೆ ಕಡಿಯುವುದಾಗಿ ಮಾವೊವಾದಿಗಳು ಜೀವ ಬೆದರಿಕೆ ಹಾಕಿದ್ದಾರೆ. 
52 ವರ್ಷದ ಸಿಪಿಐಎಂ ನ ಬೆಂಬಲಿಗರೊಬ್ಬರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಎಸ್ ಆರ್ ಶ್ರೀಜಿತ್ ಎಂಬ 26 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದರು, ಈ ಯುವಕನಿಗೆ ಪೊಲೀಸರು ನಡೆಸಿದ್ದ ದೈಹಿಕ ಹಲ್ಲೆಯ ಪರಿಣಾಮ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ. ಇದಕ್ಕೂ ಮುನ್ನ ಫೆಬ್ರವರಿಯಲ್ಲಿ ಪಾಲಕ್ಕಾಡ್ ನಲ್ಲಿ ಬುದ್ಧಿಮಾಂದ್ಯ ಆದಿವಾಸಿ ಯುವಕನನ್ನು ಗುಂಪೊಂದು ದಾಳಿ ಮಾಡಿ ಹತ್ಯೆ ಮಾಡಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT