ಪಿಣರಾಯಿ ವಿಜಯನ್ 
ದೇಶ

ಕೇರಳ ಸಿಎಂ ಪಿಣರಾಯಿ ವಿಜಯನ್ ಗೆ ಮಾವೋವಾದಿಗಳಿಂದ ಕೊಲೆ ಬೆದರಿಕೆ: ಪ್ರಕರಣ ದಾಖಲು

ಕೇರಳ ಸಿಎಂ ಪಿಣರಾಯಿ ವಿಜಯನ್ ಗೆ ಮಾವೋವಾದಿಗಳಿಂದ ಕೊಲೆ ಬೆದರಿಕೆ ಬಂದಿದ್ದು, ಪಿಣರಾಯಿ ವಿಜಯ್ ಅವರನ್ನು ಹತ್ಯೆ ಮಾಡುವ ಬಗ್ಗೆ ಪೋಸ್ಟರ್ ಗಳು ಕಾಣಿಸಿಕೊಂಡಿವೆ.

ತ್ರಿಶೂರ್: ಕೇರಳ ಸಿಎಂ ಪಿಣರಾಯಿ ವಿಜಯನ್ ಗೆ ಮಾವೋವಾದಿಗಳಿಂದ ಕೊಲೆ ಬೆದರಿಕೆ ಬಂದಿದ್ದು, ಪಿಣರಾಯಿ ವಿಜಯ್ ಅವರನ್ನು ಹತ್ಯೆ ಮಾಡುವ ಬಗ್ಗೆ  ಪೋಸ್ಟರ್ ಗಳು ಕಾಣಿಸಿಕೊಂಡಿವೆ. 
ಪಾಲಕ್ಕಾಡ್ ನ ಪಝಾಯಣ್ಣೂರ್ ನ ಪೊಲೀಸ್ ಅಧಿಕಾರಿ ವರ್ಕ್ ಶಾಪ್ ಒಂದರಲ್ಲಿ ವಿಜಯನ್ ತಲೆ ಕಡಿಯುವ ಬಗ್ಗೆ ಮಾವೋವಾದಿಗಳು ಹಾಕಿದ್ದ ಪೋಸ್ಟರ್ ನ್ನು ಗಮನಿಸಿದ್ದಾರೆ.  ಪೊಲೀಸರು ಸ್ವಯಂ ಪ್ರೇರಿತರಾಗಿ ದೂರು ದಾಖಲಿಸಿಕೊಳ್ಳಲು ಅವಕಾಶ ಇಲ್ಲದೇ ಇರುವ ಹಿನ್ನೆಲೆಯಲ್ಲಿ ಘಟನೆಯನ್ನು ವಡಾಕಂಚೇರಿ ಮ್ಯಾಜಿಸ್ಟಿಯಲ್ ಕೋರ್ಟ್ ಗಮನಕ್ಕೆ ತರಲಾಗಿದೆ.  "ಕೇರಳದ ನಕ್ಸಲ್ಬರಿ"ಯಿಂದ  ಪೋಸ್ಟರ್ ನ್ನು ಅಂಟಿಸಲಾಗಿದ್ದು, 
ಕಸ್ಟಡಿಯಲ್ಲಿ ಆರೋಪಿಗಳಿಗೆ ನೀಡಲಾಗುವ ಕಿರುಕುಳ, ಸಾವುಹಾಗೂ ಆದಿವಾಸಿ ಯುವಕನನ್ನು ಗುಂಪೊಂದು ಹೊಡೆದು ಹತ್ಯೆ ಮಾಡಿರುವ ವಿಷಯಗಳನ್ನು ಪೋಸ್ಟರ್ ನಲ್ಲಿ ಪ್ರಸ್ತಾಪಿಸಲಾಗಿದ್ದು, ಪಿಣರಾಯಿ ವಿಜಯನ್ ಈ ಘಟನೆಗಳನ್ನು ನಿರ್ವಹಿಸಲು ವಿಫಲರಾಗಿದ್ದು, ಅವರ ತಲೆ ಕಡಿಯುವುದಾಗಿ ಮಾವೊವಾದಿಗಳು ಜೀವ ಬೆದರಿಕೆ ಹಾಕಿದ್ದಾರೆ. 
52 ವರ್ಷದ ಸಿಪಿಐಎಂ ನ ಬೆಂಬಲಿಗರೊಬ್ಬರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಎಸ್ ಆರ್ ಶ್ರೀಜಿತ್ ಎಂಬ 26 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದರು, ಈ ಯುವಕನಿಗೆ ಪೊಲೀಸರು ನಡೆಸಿದ್ದ ದೈಹಿಕ ಹಲ್ಲೆಯ ಪರಿಣಾಮ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ. ಇದಕ್ಕೂ ಮುನ್ನ ಫೆಬ್ರವರಿಯಲ್ಲಿ ಪಾಲಕ್ಕಾಡ್ ನಲ್ಲಿ ಬುದ್ಧಿಮಾಂದ್ಯ ಆದಿವಾಸಿ ಯುವಕನನ್ನು ಗುಂಪೊಂದು ದಾಳಿ ಮಾಡಿ ಹತ್ಯೆ ಮಾಡಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT