ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯ 
ದೇಶ

ಅಲಿಘಡ ವಿವಿನಲ್ಲಿ ಶಾಖೆ ತೆರೆಯಲು ಆರ್ ಎಸ್ ಎಸ್ ಮನವಿ, ಕಾರ್ಯಕರ್ತರಿಂದ ಉಪಕುಲಪತಿಗೆ ಪತ್ರ

ಅಲಿಘಡ ಮುಸ್ಲಿಂ ವಿಶ್ವವಿದ್ಯಾನಿಕಯದ ಕ್ಯಾಂಪಸ್ ಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ ಎಸ್ ಎಸ್) ಶಾಖೆಗಳನ್ನು ತೆರೆಯಲು ಅನುಮತಿ ನೀಡಬೇಕೆಂದು ಕೋರಿ ವಿಶ್ವವಿದ್ಯಾನಿಲಯ....

ನವದೆಹಲಿ: ಅಲಿಘಡ ಮುಸ್ಲಿಂ ವಿಶ್ವವಿದ್ಯಾನಿಕಯದ ಕ್ಯಾಂಪಸ್ ಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ ಎಸ್ ಎಸ್) ಶಾಖೆಗಳನ್ನು ತೆರೆಯಲು ಅನುಮತಿ ನೀಡಬೇಕೆಂದು ಕೋರಿ ವಿಶ್ವವಿದ್ಯಾನಿಲಯ ಉಪಕುಲಪತಿಗಳಿಗೆ ಆರ್ ಎಸ್ ಎಸ್ ಪತ್ರ ಬರೆದಿದೆ.
ಸಂಘದ ಕಾರ್ಯಕರ್ತರಾದ ಅಮೀರ್ ರಶೀದ್ ಉಪಕುಲಪತಿಗಳಿಗೆ ಪತ್ರ ಬರೆದಿದ್ದು  ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಲ್ಲಿ  ಆರ್ ಎಸ್ ಎಸ್ ಕುರಿತಾದ ತಪ್ಪು ಕಲ್ಪನೆ ಹೋಗಲಾಡಿಸಲು ವಿಶ್ವ ವಿದ್ಯಾನಿಕಯದ ಕ್ಯಾಂಪಸ್ ನಲ್ಲಿ ಶಾಖೆಗೆ ಅನುಮತಿ ನೀಡಬೇಕೆಂದು ಕೋರಿದ್ದಾರೆ.
ಸಂಘದ ಕೆಲಸ, ಆದ್ಯತೆಗಳ ಬಗ್ಗೆ ಎಎಂಯು ವಿದ್ಯಾರ್ಥಿಗಳು ತಿಳಿಸಬೇಕಿದೆ. ಆರ್ ಎಸ್ ಎಸ್ ಮುಸ್ಲೀಂ ವಿರೋಧಿ ಎಂದು ತಪ್ಪು ಕಲ್ಪನೆ ಇದೆ, ನಿಜವಾಗಿ ಇದೊಂದು  ರಾಷ್ಟ್ರೀಯತಾವಾದಿ ಸಂಘಟನೆಯಾಗಿದೆ. 'ಶಾಖೆ’ ಪ್ರಾರಂಭಿಸುವುದರಿಂದ ವಿದ್ಯಾರ್ಥಿಗಳಿಗೆ ಆರ್ ಎಸ್ ಎಸ್ ಎಂದರೇನೆಂದು ತಿಳಿಯುತ್ತದೆ" ಅವರು ಪತ್ರದಲ್ಲಿ ಹೇಳಿದ್ದಾರೆ.
ಇದಕ್ಕೆ ಪ್ರತಿಕ್ರಯಿಸಿರುವ  ಆಲಿಗಢ ಮುಸ್ಲಿಂ ವಿವಿ ವಿದ್ಯಾರ್ಥಿ ಸಂಘಟನೆ ಅಧ್ಯಕ್ಷ ಮಶ್ಕೂರ್ ಅಹ್ಮದ್‌ ಉಸ್ಮಾನಿ ಆರ್ ಎಸ್ ಎಸ್ ದೇಶವನ್ನು ವಿಭಜಿಸುತ್ತದೆ. ಇದು ಶೈಕ್ಷಣಿಕ  ಸಂಸ್ಥೆಯಾಗಿದೆ ಹೊರತೆ ರಾಜಕೀಯ ಸಂಸ್ಥೆಯಲ್ಲ. ನಾವು ಇದನ್ನು ವಿರೋಧಿಸುತ್ತೇವೆ ಎಂದಿದ್ದಾರೆ.
ವಿಶ್ವವಿದ್ಯಾನಿಕಯ ಸಾರ್ವಜನ್ಕ ಸಂಪರ್ಕಾಧಿಕಾರಿ ಸೈಫಿ ಕಿದ್ವಾಯಿ ಪತ್ರದ ಕುರಿತಂತೆ ನಮಗೆ ಯಾವ ನಿಖರ ಮಾಹಿತಿ ಬಂದಿಲ್ಲ. ಹಾಗೊಂದುವೇಳೆ ಅವರೇನಾದರೂ ಮನವಿ ಮಾಡಿದರೆ ಅದರ ಕುರಿತಂತೆ ಉಪಕುಲಪತಿಗಳೇ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

SCROLL FOR NEXT