ಅಗರ್ತಾಲ: ಮಾಜಿ ವಿಶ್ವ ಸುಂದರಿ ಡಯಾನ ಹೇಡನ್ ಅವರು ಸೌಂದರ್ಯದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಅವರಿಗೆ ಶುಕ್ರವಾರ ಕ್ಷಮೆಯಾಚಿಸಿದ್ದಾರೆ.
ನಾನು ನಿನ್ನೆ ನಾನು ಕೈಮಗ್ಗ ವಲಯದಲ್ಲಿ ಕೆಲಸ ಮಾಡುವ ಜನರನ್ನು ಕುರಿತು ಮಾತನಾಡುತ್ತಿದ್ದೆ, ಅವರು ಸಹ ಮಾರುಕಟ್ಟೆ ಮಾಡಬೇಕಲ್ಲವೇ? ಎಂದು ಪ್ರಶ್ನಿಸಿದ ದೇಬ್, ನಾನು ಯಾರನ್ನೂ ನೋಯಿಸುವು ಉದ್ದೇಶದಿಂದ ಹೇಳಿಲ್ಲ ಮತ್ತು ಈ ಸಂಬಂಧ ನಾನು ಕ್ಷಮೆಯಾಚಿಸುತ್ತೇನೆ ಎಂದು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಅಗರ್ತಾಲದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ದೇಬ್, ಡಯಾನಾ ಹೇಡನ್ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಗೆದ್ದಿದ್ದಾರೆ. ಈ ವಿಷಯವನ್ನು ಕೇಳಿದ ಪ್ರತಿಯೊಬ್ಬರೂ ನಗುತ್ತಾರೆ. ನೀವೇ ಹೇಳಿ, ಡಯಾನಾ ಗೆಲ್ಲಲು ಸಾಧ್ಯವೇ? ಎಂದು ಪ್ರಶ್ನಿಸಿದ್ದರು. ಭಾರತೀಯ ಸೌಂದರ್ಯ ಎಂದರೆ ದೇವತೆಗಳಾದ ಲಕ್ಷ್ಮಿ, ಸರಸ್ವತಿಯರದು. ಡಯಾನ ಹೇಡನ್ ಈ ದರ್ಜೆಯ ಸೌಂದರ್ಯಕ್ಕೆ ಸೂಕ್ತವಲ್ಲ ಎಂದು ಅವರು ವಿವಾದದ ಕಿಡಿ ಹಚ್ಚಿದ್ದರು.
ಐಶ್ವರ್ಯ ರೈ ಅವರ ಗೆಲುವು ನ್ಯಾಯಸಮ್ಮತ. ಅವರದ್ದು ಭಾರತೀಯ ಸೌಂದರ್ಯ ಎಂದಿದ್ದ ದೇಬ್, ಡಯಾನ ಹೇಡನ್ ಅವರ ಆಯ್ಕೆಯ ಹಿಂದೆ ವ್ಯಾವಹಾರಿಕ ಕಾರಣಗಳಿವೆ ಎಂದು ಕೂಡ ಆರೋಪಿಸಿದ್ದರು.