ಚಂದ್ರಬಾಬು ನಾಯ್ಡು 
ದೇಶ

ಬಿಜೆಪಿ- ವೈಎಸ್ ಆರ್ ಸಿ ಒಟ್ಟಾಗಿ ಚುನಾವಣೆಗಿಳಿದರೆ ಆಶ್ಚರ್ಯವೇನಿಲ್ಲ: ಚಂದ್ರಬಾಬು ನಾಯ್ಡು

ವೈಎಸ್ ಆರ್ ಸಿ ಮತ್ತು ಬಿಜೆಪಿ ವಿರುದ್ದ ವಾಗ್ದಾಳಿ ಮುಂದುವರಿಸಿರುವ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮುಂದಿನ ಲೋಕಸಭೆ ...

ವಿಜಯವಾಡ: ವೈಎಸ್ ಆರ್ ಸಿ ಮತ್ತು ಬಿಜೆಪಿ ವಿರುದ್ದ ವಾಗ್ದಾಳಿ ಮುಂದುವರಿಸಿರುವ ಆಂಧ್ರ ಪ್ರದೇಶ ಮುಖ್ಯಮಂತ್ರಿ  ಚಂದ್ರಬಾಬು ನಾಯ್ಡು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಈ ಎರಡು ಪಕ್ಷಗಳು ಒಟ್ಟಾಗಿ ಚುನಾವಣೆಗಿಳಿದರೇ ಯಾವುದೇ ಆಶ್ಚರ್ಯವಿಲ್ಲ ಎಂದು ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾಯ್ಡು, ಕೇಂದ್ರದ ಬಿಜೆಪಿ ನಾಯಕರುಗಳು ಅರ್ಥಹೀನ ಹೇಳಿಕೆ ನೀಡುತ್ತಿದ್ದಾರೆ ಎಂದು ಕಿಡಿ ಕಾರಿದರು. ಹಲವು ವಿಷಯಗಳ ಬಗ್ಗೆ ಮಾತನಾಡಿದ ನಾಯ್ಡು, ಕಳೆದ  ನಾಲ್ಕು ವರ್ಷಗಳಿಂದ ಯಾವುದೇ ಮಹತ್ತರವಾದ ಬದಲಾವಣೆಗಳಾಗಿಲ್ಲ, ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಪ್ರಚಾರಕ್ಕೆ ಬರುವುದನ್ನು ನಿರಾಕರಿಸಿದರು. 
ನಮ್ಮ ಹೋರಾಟ ನಮ್ಮ ರಾಜ್ಯಕ್ಕಾಗಿ ಯಾವುದೇ ಬೇರೆ ರಾಜ್ಯಕ್ಕೆ ತೆರಳಿ ಪ್ರಚಾರ ಮಾಡುವ ಪ್ರಶ್ನೆಯೇ ಇಲ್ಲ, ನಮಗೆ ದ್ರೋಹ ಮಾಡಿದವರಿಗೆ ತಕ್ಕ ಪಾಠ ಕಲಿಸುತ್ತೇವೆ, ಜನರು ಬುದ್ದಿವಂತರು, ಆವರೇ ನಿರ್ಧರಿಸುತ್ತಾರೆ. ಕಾಂಗ್ರೆಸ್ ಮತ್ತು ಬಿಜೆಪಿಗಳ ಅನ್ಯಾಯ ಮಿತಿಮೀರಿದೆ ಎಂದು ವಾಗ್ದಾಳಿ ನಡೆಸಿದ್ದಾರೆ,
ಬಾಹ್ಯ ಬೆಂಬಲದೊಂದಿಗೆ ನಾವು ಮೂರನೇ ರಂಗ ರಚಿಸುತ್ತೇವೆ, ಒಂದು ವೇಳೆ ನಮ್ಮ  25 ಸಂಸದರು ಗೆಲುವು ಸಾಧಿಸಿದರೇ ಪ್ರಧಾನಮಂತ್ರಿ ಯಾರಾಗಬೇಕು ಎಂಬುದನ್ನು ನಾವು ನಿರ್ಧರಿಸುತ್ತೇವೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT