ಕಠ್ಮಂಡು: ನೇಪಾಳದಲ್ಲಿ ಭಾರತದ ಸಹಕಾರದಿಂದ ಅಭಿವೃದ್ಧಿಪಡಿಸಿರುವ ಜಲವಿದ್ಯುತ್ ಯೋಜನೆಯ ಘಟಕದ ಕಚೇರಿ ಬಳಿ ಬಾಂಬ್ ಸ್ಫೋಟಗೊಂಡಿದ್ದು, ಮೋದಿ ಭೇಟಿಗೂ ಮುನ್ನ ಈ ಘಟನೆ ನಡೆದಿದೆ.
ಕೆಲವೇ ವಾರಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇಪಾಳಕ್ಕೆ ಭೇಟಿ ನೀಡಲಿದ್ದು, ಇದಕ್ಕೂ ಮುನ್ನ ಈ ಘಟನೆ ನಡೆದಿದೆ. ಕಠ್ಮಂಡುವಿನಿಂದ ಸುಮಾರು 500 ಕಿ.ಮೀ ದೂರದಲ್ಲಿರುವ ತುಮಲಿಂಗಾರ್ ಪ್ರದೇಶದಲ್ಲಿ ಭಾರತದ ಸಹಯೋಗದಲ್ಲಿ 900 ಮೆಗಾವ್ಯಾಟ್ ಅರುಣ್-III ಜಲವಿದ್ಯುತ್ ಯೋಜನೆಯ ಘಟಕದ ಕಚೇರಿಯ ಕಾಂಪೌಂಡ್ ಗೋಡೆಗೆ ಹಾನಿಗೊಳಗಾಗಿದೆ ಎಂದಿ ಅಲ್ಲಿನ ಅಧಿಕಾರಿ ಶಿವ ರಾಜ್ ಜೋಷಿ ತಿಳಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯೂ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
2020 ರ ವೇಳೆಗೆ ಜಲವಿದ್ಯುತ್ ಯೋಜನೆಯ ಘಟಕ ಕಾರ್ಯಾರಂಭ ಮಾಡಲಿದೆ. ಮೇ.11 ರಂದು ಪ್ರಧಾನಿ ನರೇಂದ್ರ ಮೋದಿ ನೇಪಾಳಕ್ಕೆ ಭೇಟಿ ನೀಡಲಿದ್ದು, ಇದಕ್ಕೆ ಕೆಲವೇ ದಿನಗಳ ಮುನ್ನ ಈ ಘಟನೆ ನಡೆದಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos