ನೇಪಾಳ 
ದೇಶ

ನೇಪಾಳ: ಭಾರತ ಅಭಿವೃದ್ಧಿಪಡಿಸಿದ್ದ ಜಲವಿದ್ಯುತ್ ಯೋಜನೆಯ ಘಟಕದ ಬಳಿ ಸ್ಫೋಟ; ಮೋದಿ ಭೇಟಿಗೂ ಮುನ್ನ ನಡೆದ ಘಟನೆ

ನೇಪಾಳದಲ್ಲಿ ಭಾರತದ ಸಹಕಾರದಿಂದ ಅಭಿವೃದ್ಧಿಪಡಿಸಿರುವ ಜಲವಿದ್ಯುತ್ ಯೋಜನೆಯ ಘಟಕದ ಕಚೇರಿ ಬಳಿ ಬಾಂಬ್ ಸ್ಫೋಟಗೊಂಡಿದ್ದು, ಮೋದಿ ಭೇಟಿಗೂ ಮುನ್ನ ಈ ಘಟನೆ ನಡೆದಿದೆ.

ಕಠ್ಮಂಡು: ನೇಪಾಳದಲ್ಲಿ ಭಾರತದ ಸಹಕಾರದಿಂದ ಅಭಿವೃದ್ಧಿಪಡಿಸಿರುವ ಜಲವಿದ್ಯುತ್ ಯೋಜನೆಯ ಘಟಕದ ಕಚೇರಿ ಬಳಿ ಬಾಂಬ್ ಸ್ಫೋಟಗೊಂಡಿದ್ದು, ಮೋದಿ ಭೇಟಿಗೂ ಮುನ್ನ ಈ  ಘಟನೆ ನಡೆದಿದೆ. 
ಕೆಲವೇ ವಾರಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇಪಾಳಕ್ಕೆ ಭೇಟಿ ನೀಡಲಿದ್ದು, ಇದಕ್ಕೂ ಮುನ್ನ ಈ ಘಟನೆ ನಡೆದಿದೆ. ಕಠ್ಮಂಡುವಿನಿಂದ ಸುಮಾರು 500 ಕಿ.ಮೀ ದೂರದಲ್ಲಿರುವ ತುಮಲಿಂಗಾರ್ ಪ್ರದೇಶದಲ್ಲಿ ಭಾರತದ ಸಹಯೋಗದಲ್ಲಿ 900 ಮೆಗಾವ್ಯಾಟ್ ಅರುಣ್-III ಜಲವಿದ್ಯುತ್ ಯೋಜನೆಯ ಘಟಕದ ಕಚೇರಿಯ ಕಾಂಪೌಂಡ್ ಗೋಡೆಗೆ ಹಾನಿಗೊಳಗಾಗಿದೆ ಎಂದಿ ಅಲ್ಲಿನ ಅಧಿಕಾರಿ ಶಿವ ರಾಜ್ ಜೋಷಿ ತಿಳಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯೂ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
2020 ರ ವೇಳೆಗೆ  ಜಲವಿದ್ಯುತ್ ಯೋಜನೆಯ ಘಟಕ ಕಾರ್ಯಾರಂಭ ಮಾಡಲಿದೆ. ಮೇ.11 ರಂದು ಪ್ರಧಾನಿ ನರೇಂದ್ರ ಮೋದಿ ನೇಪಾಳಕ್ಕೆ ಭೇಟಿ ನೀಡಲಿದ್ದು, ಇದಕ್ಕೆ ಕೆಲವೇ ದಿನಗಳ ಮುನ್ನ ಈ ಘಟನೆ ನಡೆದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕ್ಸಿ ಜಿನ್‌ಪಿಂಗ್ ಜತೆ ಮಾತುಕತೆ: ಗಡಿಯಾಚೆಗಿನ ಭಯೋತ್ಪಾದನೆ ಬಗ್ಗೆ ಪ್ರಧಾನಿ ಮೋದಿ ಪ್ರಸ್ತಾಪ

ಜನರನ್ನು ಮೂರ್ಖರನ್ನಾಗಿಸುವವನೇ ಶ್ರೇಷ್ಠ ನಾಯಕ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸುವ 'ಎಜುಕೇಟ್ ಗರ್ಲ್ಸ್' NGOಗೆ ಪ್ರತಿಷ್ಠಿತ ಮ್ಯಾಗ್ಸೆಸೆ ಪ್ರಶಸ್ತಿ

Rain Alert: ರಾಜ್ಯಾದ್ಯಂತ ಮುಂದಿನ 5 ದಿನ ಭಾರಿ ಮಳೆ; ಬೆಂಗಳೂರು, ಕರಾವಳಿ ಕರ್ನಾಟಕಕ್ಕೆ ಹವಾಮಾನ ಇಲಾಖೆ ಎಚ್ಚರಿಕೆ!

ಬೆಂಗಳೂರು: ಪಿಜಿಯಲ್ಲಿ ಮಲಗಿದ್ದ ಯುವತಿಗೆ ಲೈಂಗಿಕ ಕಿರುಕುಳ, ನಗದು ದೋಚಿ ಪರಾರಿ!

SCROLL FOR NEXT