ನೇಪಾಳ 
ದೇಶ

ನೇಪಾಳ: ಭಾರತ ಅಭಿವೃದ್ಧಿಪಡಿಸಿದ್ದ ಜಲವಿದ್ಯುತ್ ಯೋಜನೆಯ ಘಟಕದ ಬಳಿ ಸ್ಫೋಟ; ಮೋದಿ ಭೇಟಿಗೂ ಮುನ್ನ ನಡೆದ ಘಟನೆ

ನೇಪಾಳದಲ್ಲಿ ಭಾರತದ ಸಹಕಾರದಿಂದ ಅಭಿವೃದ್ಧಿಪಡಿಸಿರುವ ಜಲವಿದ್ಯುತ್ ಯೋಜನೆಯ ಘಟಕದ ಕಚೇರಿ ಬಳಿ ಬಾಂಬ್ ಸ್ಫೋಟಗೊಂಡಿದ್ದು, ಮೋದಿ ಭೇಟಿಗೂ ಮುನ್ನ ಈ ಘಟನೆ ನಡೆದಿದೆ.

ಕಠ್ಮಂಡು: ನೇಪಾಳದಲ್ಲಿ ಭಾರತದ ಸಹಕಾರದಿಂದ ಅಭಿವೃದ್ಧಿಪಡಿಸಿರುವ ಜಲವಿದ್ಯುತ್ ಯೋಜನೆಯ ಘಟಕದ ಕಚೇರಿ ಬಳಿ ಬಾಂಬ್ ಸ್ಫೋಟಗೊಂಡಿದ್ದು, ಮೋದಿ ಭೇಟಿಗೂ ಮುನ್ನ ಈ  ಘಟನೆ ನಡೆದಿದೆ. 
ಕೆಲವೇ ವಾರಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇಪಾಳಕ್ಕೆ ಭೇಟಿ ನೀಡಲಿದ್ದು, ಇದಕ್ಕೂ ಮುನ್ನ ಈ ಘಟನೆ ನಡೆದಿದೆ. ಕಠ್ಮಂಡುವಿನಿಂದ ಸುಮಾರು 500 ಕಿ.ಮೀ ದೂರದಲ್ಲಿರುವ ತುಮಲಿಂಗಾರ್ ಪ್ರದೇಶದಲ್ಲಿ ಭಾರತದ ಸಹಯೋಗದಲ್ಲಿ 900 ಮೆಗಾವ್ಯಾಟ್ ಅರುಣ್-III ಜಲವಿದ್ಯುತ್ ಯೋಜನೆಯ ಘಟಕದ ಕಚೇರಿಯ ಕಾಂಪೌಂಡ್ ಗೋಡೆಗೆ ಹಾನಿಗೊಳಗಾಗಿದೆ ಎಂದಿ ಅಲ್ಲಿನ ಅಧಿಕಾರಿ ಶಿವ ರಾಜ್ ಜೋಷಿ ತಿಳಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯೂ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
2020 ರ ವೇಳೆಗೆ  ಜಲವಿದ್ಯುತ್ ಯೋಜನೆಯ ಘಟಕ ಕಾರ್ಯಾರಂಭ ಮಾಡಲಿದೆ. ಮೇ.11 ರಂದು ಪ್ರಧಾನಿ ನರೇಂದ್ರ ಮೋದಿ ನೇಪಾಳಕ್ಕೆ ಭೇಟಿ ನೀಡಲಿದ್ದು, ಇದಕ್ಕೆ ಕೆಲವೇ ದಿನಗಳ ಮುನ್ನ ಈ ಘಟನೆ ನಡೆದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Video: 'ಕಾಂತಾರ' ಕೆಂಗಣ್ಣಿಗೆ ಗುರಿ, ಬಾಲಿವುಡ್​ನಿಂದ ಬ್ಯಾನ್; ಚಾಮುಂಡೇಶ್ವರಿಗೆ ತಲೆಬಾಗಿ ಕ್ಷಮೆಯಾಚಿಸಿದ ರಣವೀರ್ ಸಿಂಗ್!

IPL 2026: RCB vs GT ನಡುವಿನ ಕ್ವಾಲಿಫೈಯರ್ ಪಂದ್ಯಕ್ಕೆ ಮಳೆ ಆತಂಕ, ರಿಸರ್ವ್ ಡೇ ಕೂಡ ಇಲ್ಲ.. ಪಂದ್ಯ ರದ್ದಾದರೆ ಯಾರು ಫೈನಲ್ ಗೆ?

ಚೀನಾ ಏಕಪಕ್ಷೀಯ ನೀತಿಗೆ ಬ್ರೇಕ್‌: Quad ಸಭೆ ನಡುವೆ ಮಹತ್ವದ ಖನಿಜ ಒಪ್ಪಂದಕ್ಕೆ ಭಾರತ-ಅಮೆರಿಕಾ ಸಹಿ..!

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು Quad ಮಹತ್ವದ ತೀರ್ಮಾನ; ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

SCROLL FOR NEXT