ನೇಪಾಳ 
ದೇಶ

ನೇಪಾಳ: ಭಾರತ ಅಭಿವೃದ್ಧಿಪಡಿಸಿದ್ದ ಜಲವಿದ್ಯುತ್ ಯೋಜನೆಯ ಘಟಕದ ಬಳಿ ಸ್ಫೋಟ; ಮೋದಿ ಭೇಟಿಗೂ ಮುನ್ನ ನಡೆದ ಘಟನೆ

ನೇಪಾಳದಲ್ಲಿ ಭಾರತದ ಸಹಕಾರದಿಂದ ಅಭಿವೃದ್ಧಿಪಡಿಸಿರುವ ಜಲವಿದ್ಯುತ್ ಯೋಜನೆಯ ಘಟಕದ ಕಚೇರಿ ಬಳಿ ಬಾಂಬ್ ಸ್ಫೋಟಗೊಂಡಿದ್ದು, ಮೋದಿ ಭೇಟಿಗೂ ಮುನ್ನ ಈ ಘಟನೆ ನಡೆದಿದೆ.

ಕಠ್ಮಂಡು: ನೇಪಾಳದಲ್ಲಿ ಭಾರತದ ಸಹಕಾರದಿಂದ ಅಭಿವೃದ್ಧಿಪಡಿಸಿರುವ ಜಲವಿದ್ಯುತ್ ಯೋಜನೆಯ ಘಟಕದ ಕಚೇರಿ ಬಳಿ ಬಾಂಬ್ ಸ್ಫೋಟಗೊಂಡಿದ್ದು, ಮೋದಿ ಭೇಟಿಗೂ ಮುನ್ನ ಈ  ಘಟನೆ ನಡೆದಿದೆ. 
ಕೆಲವೇ ವಾರಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇಪಾಳಕ್ಕೆ ಭೇಟಿ ನೀಡಲಿದ್ದು, ಇದಕ್ಕೂ ಮುನ್ನ ಈ ಘಟನೆ ನಡೆದಿದೆ. ಕಠ್ಮಂಡುವಿನಿಂದ ಸುಮಾರು 500 ಕಿ.ಮೀ ದೂರದಲ್ಲಿರುವ ತುಮಲಿಂಗಾರ್ ಪ್ರದೇಶದಲ್ಲಿ ಭಾರತದ ಸಹಯೋಗದಲ್ಲಿ 900 ಮೆಗಾವ್ಯಾಟ್ ಅರುಣ್-III ಜಲವಿದ್ಯುತ್ ಯೋಜನೆಯ ಘಟಕದ ಕಚೇರಿಯ ಕಾಂಪೌಂಡ್ ಗೋಡೆಗೆ ಹಾನಿಗೊಳಗಾಗಿದೆ ಎಂದಿ ಅಲ್ಲಿನ ಅಧಿಕಾರಿ ಶಿವ ರಾಜ್ ಜೋಷಿ ತಿಳಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯೂ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
2020 ರ ವೇಳೆಗೆ  ಜಲವಿದ್ಯುತ್ ಯೋಜನೆಯ ಘಟಕ ಕಾರ್ಯಾರಂಭ ಮಾಡಲಿದೆ. ಮೇ.11 ರಂದು ಪ್ರಧಾನಿ ನರೇಂದ್ರ ಮೋದಿ ನೇಪಾಳಕ್ಕೆ ಭೇಟಿ ನೀಡಲಿದ್ದು, ಇದಕ್ಕೆ ಕೆಲವೇ ದಿನಗಳ ಮುನ್ನ ಈ ಘಟನೆ ನಡೆದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

T20 World Cup 2026: ಇಶಾನ್ ಕಿಶಾನ್ ಅಬ್ಬರ, 'ಸ್ಪಿನ್ ಮೋಡಿಗೆ ಪಾಕ್ ತತ್ತರ, 61 ರನ್ ಅಂತರದಿಂದ ಗೆದ್ದು ಬೀಗಿದ ಭಾರತ!

T20 World Cup 2026: ಸೂಪರ್ 8 ಹಂತಕ್ಕೆ ಭಾರತ ಲಗ್ಗೆ, ದೇಶಾದ್ಯಂತ ಸಂಭ್ರಮ, ಗಣ್ಯರ ಶುಭಾಶಯ!

T20 World Cup 2026: 27 ಬಾಲ್ ಗಳಲ್ಲಿ ಅರ್ಧಶತಕ ಹೊಡೆದು, ಭಾರತದ ಸ್ಕೋರ್ ಹೆಚ್ಚಿಸಿದ ಇಶಾನ್ ಕಿಶಾನ್!

RSS ದೆವ್ವವಿದ್ದಂತೆ, ಬಿಜೆಪಿ ದೆವ್ವದ ನೆರಳು: ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಚಿಕ್ಕಮಗಳೂರು: ತಾಯಿ ಬೈದಿದ್ದಕ್ಕೆ 7ನೇ ತರಗತಿ ಬಾಲಕಿ ಆತ್ಮಹತ್ಯೆ!

SCROLL FOR NEXT