ತ್ರಿಪುರಾ ಮುಖ್ಯಮಂತ್ರಿ 
ದೇಶ

ನಾಗರಿಕ ಸೇವೆಗಳಿಗೆ ಸಿವಿಲ್ ಇಂಜಿನಿಯರ್ ಗಳು ಬರಬೇಕು, ಮೆಕ್ಯಾನಿಕಲ್ ಇಂಜಿನಿಯರ್ ಗಳಲ್ಲ: ತ್ರಿಪುರಾ ಸಿಎಂ

ಮಹಾಭಾರತದ ಕಾಲಘಟದಲ್ಲೇ ಇಂಟರ್ ನೆಟ್ ಇತ್ತು ಎಂದು ಹೇಳಿದ್ದ ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ದೇವ್ ಈಗ ಅಂಥಹದ್ದೇ ಮತ್ತೊಂದು ಹೇಳಿಕೆ ನೀಡಿ ಯಡವಟ್ಟು ಮಾಡಿಕೊಂಡಿದ್ದಾರೆ.

ನವದೆಹಲಿ: ಮಹಾಭಾರತದ ಕಾಲಘಟದಲ್ಲೇ ಇಂಟರ್ ನೆಟ್ ಇತ್ತು ಎಂದು ಹೇಳಿದ್ದ ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ದೇವ್ ಈಗ ಅಂಥಹದ್ದೇ ಮತ್ತೊಂದು ಹೇಳಿಕೆ ನೀಡಿ ಯಡವಟ್ಟು ಮಾಡಿಕೊಂಡಿದ್ದಾರೆ. 
ನಾಗರಿಕ ಸೇವಾ ಪರೀಕ್ಷೆಗಳಲ್ಲಿ(ಸಿವಿಲ್ ಸರ್ವಿಸ್ ಪರೀಕ್ಷೆ) ಸಿವಿಲ್ ಇಂಜಿನಿಯರ್ ಗಳು ಹೋಗಬೇಕು, ಮೆಕ್ಯಾನಿಕಲ್ ಇಂಜಿನಿಯರ್ ಗಳಲ್ಲ, ಸಿವಿಲ್ ಇಂಜಿನಿಯರ್ ಗಳಿಗೆ ಆಡಳಿತ ನಡೆಸುವುದು ಸಮಾಜವನ್ನು ನಡೆಸುವುದು ತಿಳಿದಿರುತ್ತದೆ ಆದ್ದರಿಂದ ಮೆಕ್ಯಾನಿಲಕ್ ಇಂಜಿನಿಯರ್ ಗಳಿಗಿಂತ ಸಿವಿಲ್ ಇಂಜಿನಿಯರ್ ಗಳು ಸಿವಿಲ್ ಸರ್ವಿಸ್ ಪರೀಕ್ಷೆಗಳನ್ನು ತೆಗೆದುಕೊಳ್ಳಬೇಕೆಂದು ಹೇಳಿದ್ದಾರೆ. 
ಮೆಕ್ಯಾನಿಕಲ್ ಇಂಜಿನಿಯರಿಂಗ್ ವ್ಯಾಸಂಗ ಮಾಡಿದವರು ನಾಗರಿಕ ಸೇವಾ ಪರೀಕ್ಷೆಗಳನ್ನು ಎದುರಿಸಬಾರದು ಎಂದಿರುವ ಬಿಪ್ಲಬ್ ದೇವ್. ಹಿಂದೆಲ್ಲಾ ಬಿಎ ಪದವೀಧರರು ಐಎಎಸ್ ಪರೀಕ್ಷೆಗಳನ್ನು ಎದುರಿಸುತ್ತಿದ್ದರು.  ಈಗ ವೈದ್ಯಕೀಯ ಹಾಗೂ ಇಂಜಿನಿಯರ್ ಗಳೂ ಐಎಎಸ್ ಪರೀಕ್ಷೆಗಳನ್ನು ಎದುರಿಸುತ್ತಿದ್ದಾರೆ ಎಂದು ಹೇಳಿದ್ದಾರೆ. 
ಯುಪಿಎಸ್ ಸಿ ಪರೀಕ್ಷೆಯ ಆಕಾಂಕ್ಷಿಗಳು ಆಲ್ ರೌಂಡರ್ ಗಳಾಗಿರಬೇಕು ಎಂದಿರುವ ಬಿಪ್ಲವ್ ದೇವ್, ಕ್ರಿಕೆಟ್ ದಿಗ್ಗಜರಾದ ಸಚಿನ್ ಹಾಗೂ ಕಪಿಲ್ ದೇವ್ ಅವರ ಉದಾಹರಣೆ ನೀಡಿದ್ದು, ಕಪಿಲ್ ದೇವ್ ಅವರ ಬೌಲಿಂಗ್ ಚೆನ್ನಾಗಿತ್ತು. ಹಾಗೆಯೇ ಬ್ಯಾಟಿಂಗ್ ಸಹ ಉತ್ತಮವಾಗಿತ್ತು. ಈಗಿನ ಕಾಲ ವಿಶೇಷತೆಗೆ ಹೆಚ್ಚು ಬೆಲೆ ಕೊಡುತ್ತದೆ. ಆಲ್ ರೌಂಡರ್ ಗಳಿಗೆ ಯಾವತ್ತಿದ್ದರೂ ಹೆಚ್ಚಿನ ಆದ್ಯತೆ ಎಂದು ಬೇವ್ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ.. ಇಲ್ನೋಡಿ, ಪುಡಿ ರೌಡಿಗಳ ಹಾವಳಿ: ಪರಮೇಶ್ವರ್ ವಿರುದ್ಧ ಜೆಡಿಎಸ್ ಕಿಡಿ

SCROLL FOR NEXT