ಪ್ರಧಾನ ಮಂತ್ರಿ ನರೇಂದ್ರ ಮೋದಿ 
ದೇಶ

ವಾರಣಾಸಿಯಲ್ಲಿ ಮುಂದಿನ ಪ್ರವಾಸಿ ದಿವಸ ಕಾರ್ಯಕ್ರಮ ಆಯೋಜನೆ

ಮುಂದಿನ ಪ್ರವಾಸಿ ಭಾರತೀಯ ದಿನವನ್ನು ಧಾರ್ಮಿಕ ನಗರಿ ವಾರಣಾಸಿಯಲ್ಲಿ ಮುಂದಿನ ಜನವರಿಯಲ್ಲಿ ...

ನವದೆಹಲಿ: ಮುಂದಿನ ಪ್ರವಾಸಿ ಭಾರತೀಯ ದಿನವನ್ನು ಧಾರ್ಮಿಕ ನಗರಿ ವಾರಣಾಸಿಯಲ್ಲಿ ಮುಂದಿನ ಜನವರಿಯಲ್ಲಿ ಆಯೋಜಿಸಲಾಗುವುದು, ಇಲ್ಲಿ ಭಾರತೀಯ ವಲಸಿಗರಿಗೆ ಕುಂಭ ಸ್ನಾನದಲ್ಲಿ ಭಾಗವಹಿಸುವ ಅವಕಾಶ ನೀಡಿ ನಂತರ ದೆಹಲಿಯಲ್ಲಿ ಗಣರಾಜ್ಯೋತ್ಸವದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.

ವಾಷಿಂಗ್ಟನ್ ಡಿಸಿ, ಮೇರಿಲ್ಯಾಂಡ್ ಮತ್ತು ವರ್ಜಿನಿಯಾ ಸುತ್ತಮುತ್ತ ಭಾರತೀಯ ಅಮೆರಿಕಾ ಸಮುದಾಯದ ನಾಯಕರನ್ನುದ್ದೇಶಿಸಿ ಮಾತನಾಡಿದ ಭಾರತೀಯ ರಾಯಭಾರಿಗಳ ಸಮುದಾಯ ವ್ಯವಹಾರಗಳ ಸಚಿವ ಅನುರಾಗ್  ಕುಮಾರ್ ಭಾರತೀಯ ವಲಸಿಗರು ಈ ಕಾರ್ಯಕ್ರಮದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕಾರ್ಯಕ್ರಮದ ರೂಪುರೇಷೆಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಿದರು.

ಮುಂದಿನ ಪ್ರವಾಸಿ ಭಾರತೀಯ ದಿವಸವನ್ನು ವಾರಣಾಸಿಯಲ್ಲಿ ಜನವರಿ 21ರಿಂದ 23ರವರಂಗೆಆಯೋಜಿಸಲಾಗುವುದು. ಇಲ್ಲಿಗೆ ಬಂದವರಿಗೆ ಅಲಹಾಬಾದಿನ ಕುಂಭಮೇಳದಲ್ಲಿ ಪಾಲ್ಗೊಳ್ಳಲು ಮತ್ತು ಅಲ್ಲಿಂದ ದೆಹಲಿಗೆ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಡಲಾಗುವುದು ಎಂದು ಕುಮಾರ್ ತಿಳಿಸಿದರು.

ಈ ವರ್ಷದ ಪ್ರವಾಸಿ ಭಾರತೀಯ ದಿವಸವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನೌಥ್ ಉದ್ಘಾಟಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT