ಸಂಗ್ರಹ ಚಿತ್ರ 
ದೇಶ

ಸಂಭ್ರಮಾಚರಣೆ ವೇಳೆ ಗಾಳಿಯಲ್ಲಿ ಗುಂಡು; ಮದುವೆಯಾಗಬೇಕಿದ್ದ ವರ ಮಸಣ ಸೇರಿದ

ಮದುವೆಯಾಗಿ ದಾಂಪತ್ಯ ಜೀವನಕ್ಕೆ ಕಾಲಿಡಬೇಕಿದ್ದ ವರ ಮದುವೆ ಸಂಭ್ರಮಾಚರಣೆ ವೇಳೆ ಗಾಳಿಯಲ್ಲಿ ಹಾರಿಸಿದ ಗುಂಡು ತಗುಲಿ ಮಸಣ ಸೇರಿಸುವ ಹೃದಯ ವಿದ್ರಾವಕ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ...

ಶಹಜಾನಪುರ: ಮದುವೆಯಾಗಿ ದಾಂಪತ್ಯ ಜೀವನಕ್ಕೆ ಕಾಲಿಡಬೇಕಿದ್ದ ವರ ಮದುವೆ ಸಂಭ್ರಮಾಚರಣೆ ವೇಳೆ ಗಾಳಿಯಲ್ಲಿ ಹಾರಿಸಿದ ಗುಂಡು ತಗುಲಿ ಮಸಣ ಸೇರಿಸುವ ಹೃದಯ ವಿದ್ರಾವಕ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. 
ಲಕ್ಮೀಪುರ ಖೇರಿ ಜಿಲ್ಲೆಯ ರಾಮ್ಪುರ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಮದುವೆ ಸಂಬಂಧ ವರ ಪೂಜಾ ಕೈಂಕರ್ಯದಲ್ಲಿ ತೊಡಗಿದ್ದಾಗ ರಾಮಚಂದ್ರ ಎಂಬಾತ ಹಾರಿಸಿದ ಗುಂಡು ವರ ಸುನೀಲ್ ವರ್ಮಾನ ಎದೆಗೆ ತಗುಲಿದೆ. ಕೂಡಲೇ ಆತ ಅಲ್ಲೇ ಕುಸಿದುಬಿದ್ದು ಮೃತಪಟ್ಟಿದ್ದಾನೆ. 
ಈ ಸಂಬಂಧ ಪೊಲೀಸರು ರಾಮಚಂದ್ರ ವಿರುದ್ಧ ಸೆಕ್ಷನ್ 302(ಕೊಲೆ)ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ. ರಾಮಚಂದ್ರ ಸುನೀಲ್ ವರ್ಮಾನ ಆಪ್ತ ಸ್ನೇಹಿತನಾಗಿದ್ದು ಸದ್ಯ ಪ್ರಕರಣ ನಂತರ ಆತ ತಲೆ ಮರೆಸಿಕೊಂಡಿದ್ದಾನೆ. 
ರಾಮಚಂದ್ರ ಹಾರಿಸಿದ ಗುಂಡು ಸುನೀಲ್ ವರ್ಮಾನ ಎದೆಗೆ ಬಿದ್ದು ಆತ ಮೃತಪಟ್ಟಿರುವ ಸಂಪೂರ್ಣ ದೃಶ್ಯಗಳು ಸೆರೆಯಾಗಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT