ಸಂಗ್ರಹ ಚಿತ್ರ 
ದೇಶ

ಬಸ್‌ಗಾಗಿ ಕಾಯುತ್ತಿದ್ದವರಿಗೆ ಯಮ ಸ್ವರೂಪಿಯಾಗಿ ಬಂದು ಕಾರು ಡಿಕ್ಕಿ, 7 ಮಂದಿ ದುರ್ಮರಣ!

ಬಸ್‌ಗಾಗಿ ಕಾಯುತ್ತಿದ್ದವರಿಗೆ ಯಮ ಸ್ವರೂಪಿಯಾಗಿ ಬಂದ ಎಸ್ಯುವಿ ಕಾರು ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ದಾರುಣ ಸಾವನ್ನಪ್ಪಿರುವ ಘಟನೆ ಕೊಯಂಬತ್ತೂರಿನ ಸುಂದರಾಪುರಂನಲ್ಲಿ ಸಂಭವಿಸಿದೆ...

ಕೊಯಂಬತ್ತೂರ್: ಬಸ್‌ಗಾಗಿ ಕಾಯುತ್ತಿದ್ದವರಿಗೆ ಯಮ ಸ್ವರೂಪಿಯಾಗಿ ಬಂದ ಎಸ್ಯುವಿ ಕಾರು ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ದಾರುಣ ಸಾವನ್ನಪ್ಪಿರುವ ಘಟನೆ ಕೊಯಂಬತ್ತೂರಿನ ಸುಂದರಾಪುರಂನಲ್ಲಿ ಸಂಭವಿಸಿದೆ. 
ಜಗದೀಶ್ ಎಂಬಾತ ಎಸ್ಯುವಿ ಆಡಿ ಕಾರಿನಲ್ಲಿ ಪೊಲ್ಲಾಚಿಯಿಂದ ಕೊಯಂಬತ್ತೂರಿಗೆ ಬರುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಪೆರಿಯಾರ್ ಬಸ್ ನಿಲ್ದಾಣಕ್ಕೆ ನುಗ್ಗಿದೆ. ಈ ವೇಳೆ ಬಸ್ ಗಾಗಿ ಕಾಯುತ್ತಿದ್ದವರ ಮೇಲೆ ಕಾರು ಹರಿದಿದ್ದು ಸ್ಥಳದಲ್ಲೇ ಏಳು ಮಂದಿ ಸಾವನ್ನಪ್ಪಿದ್ದಾರೆ. 
ವೇಗವಾಗಿ ಬಂದ ಕಾರು ಬಸ್ ನಿಲ್ದಾಣದ ಬಳಿ ನಿಂತಿದ್ದ ಆಟೋಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಟೋ ಸಂಪೂರ್ಣ ನಜ್ಜು ಗುಜ್ಜಾಗಿದೆ. ನಂತರ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಹೂವಿನ ಅಂಗಡಿಗೆ ನುಗ್ಗಿದೆ. 
ಅಪಘಾತದಲ್ಲಿ ಮೃತಪಟ್ಟವರನ್ನು ಸೋಮು(55), ಸುರೇಶ್(43), ಹಂಸವೇಣಿ(30), ಸುಭಾಷಿಣಿ(20), ಶ್ರೀರಂಗದಾಸ್(75) ಮತ್ತು ಕುಪ್ಪಮಲ್(60) ಎಂದು ಗುರುತಿಸಲಾಗಿದೆ. ಇನ್ನು ಆಟೋದಲ್ಲಿ ಕುಳಿತ್ತಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT