ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 
ದೇಶ

ಸಿಲ್ಚಾರ್ ನಲ್ಲಿ ಟಿಎಂಸಿ ಸಂಸದರ ಬಂಧನ ಯತ್ನ, ಇದು ಅಂತ್ಯದ ಆರಂಭ: ಬಿಜೆಪಿ ವಿರುದ್ಧ ಮಮತಾ ವಾಗ್ದಾಳಿ

".ಅಸ್ಸಾಂ ನಲ್ಲಿ ನಡೆಯುತ್ತಿರುವ ದೌರ್ಜನ್ಯವು ಕೇವಲ ಖಂಡನಾರ್ಹವಷ್ಟೇ ಆಗಿಲ್ಲ. ಇದು ಅಂತ್ಯದ ಆರಂಭವಾಗಿದೆ ಎಂದು ನಾನು ಭಾವಿಸುತ್ತೇನೆ.

ಕೋಲ್ಕತ್ತಾ: ".ಅಸ್ಸಾಂ ನಲ್ಲಿ ನಡೆಯುತ್ತಿರುವ  ದೌರ್ಜನ್ಯವು ಕೇವಲ ಖಂಡನಾರ್ಹವಷ್ಟೇ ಆಗಿಲ್ಲ. ಇದು ಅಂತ್ಯದ ಆರಂಭವಾಗಿದೆ ಎಂದು ನಾನು ಭಾವಿಸುತ್ತೇನೆ. ಬಿಜೆಪಿಗರು ನಿರಾಶೆಗೊಂಡಿದ್ದಾರೆ. ಅವರು ರಾಜಕೀಯವಾಗಿ ಸೊತಿದ್ದಾರೆ ಹಾಗಾಗಿ ಈ ಪರಿದಾಷ್ಟೆ ಮೆರೆಯುತ್ತಿದ್ದಾರೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದರು. ಪಶ್ಚಿಮ ಬಂಗಾಳದ ಟಿಎಂಸಿ ಸಂಸದರನ್ನು ಸಿಲ್ಚಾರ್ ವಿಮಾನ ನಿಲ್ದಾಣದಲ್ಲಿ ಬಂಧಿಸುವ ಪ್ರಯತ್ನ ನಡೆದ ಕುರಿತು ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಎನ್ಆರ್‏ಸಿ ಕರಡು ಪ್ರಕಟಣೆಯ ಹಿನ್ನೆಲೆಯಲ್ಲಿ ಅಸ್ಸಾಂನಲ್ಲಿ ಪರಿಸ್ಥಿತಿಯನ್ನು ಅವಲೋಕಿಸಲು ಇಂದು ಸಿಲ್ಚಾರ್ ಗೆ ಆಗಮಿಸಿದ್ದ ತೃಣಮೂಲ ಕಾಂಗ್ರೆಸ್ ನಿಯೋಗವನ್ನು ಅಲ್ಲಿನ ವಿಮಾನ ನಿಲ್ದಾಣದಲ್ಲೇ ತಡೆದು ನಿಲ್ಲಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಪಿಟಿಐ ಜತೆ ಮಾತನಾಡಿದ ನಿಯೋಗದ ಸದಸ್ಯರಾಗಿದ್ದ ಟಿಎಂಸಿ ಸಂಸದ ಸುಖೇಂದ್ ಶೇಖರ್ ರಾಯ್ ನಮಗೆ ಅಸ್ಸಾಂ ಗೆ ತೆರಳಲು ತೊಂದರೆಯನ್ನುಂಟು ಮಾಡಲು ಪೋಲೀಸರು ಯೋಜಿಸಿದ್ದಾರೆ. ವಿಮಾನ ನಿಲ್ದಾಣದಲ್ಲಿ  1000 ಪೊಲೀಸರು ಇದ್ದರು ಎಂದಿದ್ದಾರೆ.
ಬರಾಕ್ ವ್ಯಾಲಿ ಪ್ರದೇಶದ ಕಚಾರ್ ಜಿಲ್ಲೆಯ ಕುಂಭಿಗ್ರಾಮ್ ವಿಮಾನ ನಿಲ್ದಾಣದ ವಿಐಪಿ ಕೋಣೆಯಲ್ಲಿ ಆರು ಸಂಸದರು ಸೇರಿದಂತೆ ಟಿಎಂಸಿ ನಿಯೋಗವನ್ನು ಇರಿಸಲಾಗಿದೆ ಎಂದು ಮೂಲಗಳು ಹೇಳಿದೆ. ಕಚಾರ್ ಜಿಲ್ಲಾಡಳಿತ ಎನ್ಆರ್‏ಸಿ ಪ್ರಕ್ರಿಯೆಯಲ್ಲಿ ಯಾವ ವ್ಯಕ್ತಿಗೂ ಪ್ರವೇಶವಿಲ್ಲ ಎಂದಿದ್ದು ಕಳೆದ ರಾತ್ರಿಯಿಂದಲೇ ಸೆಕ್ಷನ್ 144 ರ ಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದೆ.
ಬಿಜೆಪಿಯ ನೇತೃತ್ವದ ಕೇಂದ್ರ ಸರ್ಕಾರ ಎನ್ಆರ್‏ಸಿ ವಿಚಾರದಲ್ಲಿ  "ಮತ ಬ್ಯಾಂಕ್ ರಾಜಕೀಯ" ನಡೆಸುತ್ತಿದೆ  ದೇಶದಲ್ಲಿ "ಭಾರತೀಯ ನಾಗರಿಕರು ನಿರಾಶ್ರಿತರಾಗಿದ್ದಾರೆ" ಎಂದು ಟಿಎಂಸಿ ಅಧಿನಾಯಕಿ ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT