ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 
ದೇಶ

ಸಿಲ್ಚಾರ್ ನಲ್ಲಿ ಟಿಎಂಸಿ ಸಂಸದರ ಬಂಧನ ಯತ್ನ, ಇದು ಅಂತ್ಯದ ಆರಂಭ: ಬಿಜೆಪಿ ವಿರುದ್ಧ ಮಮತಾ ವಾಗ್ದಾಳಿ

".ಅಸ್ಸಾಂ ನಲ್ಲಿ ನಡೆಯುತ್ತಿರುವ ದೌರ್ಜನ್ಯವು ಕೇವಲ ಖಂಡನಾರ್ಹವಷ್ಟೇ ಆಗಿಲ್ಲ. ಇದು ಅಂತ್ಯದ ಆರಂಭವಾಗಿದೆ ಎಂದು ನಾನು ಭಾವಿಸುತ್ತೇನೆ.

ಕೋಲ್ಕತ್ತಾ: ".ಅಸ್ಸಾಂ ನಲ್ಲಿ ನಡೆಯುತ್ತಿರುವ  ದೌರ್ಜನ್ಯವು ಕೇವಲ ಖಂಡನಾರ್ಹವಷ್ಟೇ ಆಗಿಲ್ಲ. ಇದು ಅಂತ್ಯದ ಆರಂಭವಾಗಿದೆ ಎಂದು ನಾನು ಭಾವಿಸುತ್ತೇನೆ. ಬಿಜೆಪಿಗರು ನಿರಾಶೆಗೊಂಡಿದ್ದಾರೆ. ಅವರು ರಾಜಕೀಯವಾಗಿ ಸೊತಿದ್ದಾರೆ ಹಾಗಾಗಿ ಈ ಪರಿದಾಷ್ಟೆ ಮೆರೆಯುತ್ತಿದ್ದಾರೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದರು. ಪಶ್ಚಿಮ ಬಂಗಾಳದ ಟಿಎಂಸಿ ಸಂಸದರನ್ನು ಸಿಲ್ಚಾರ್ ವಿಮಾನ ನಿಲ್ದಾಣದಲ್ಲಿ ಬಂಧಿಸುವ ಪ್ರಯತ್ನ ನಡೆದ ಕುರಿತು ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಎನ್ಆರ್‏ಸಿ ಕರಡು ಪ್ರಕಟಣೆಯ ಹಿನ್ನೆಲೆಯಲ್ಲಿ ಅಸ್ಸಾಂನಲ್ಲಿ ಪರಿಸ್ಥಿತಿಯನ್ನು ಅವಲೋಕಿಸಲು ಇಂದು ಸಿಲ್ಚಾರ್ ಗೆ ಆಗಮಿಸಿದ್ದ ತೃಣಮೂಲ ಕಾಂಗ್ರೆಸ್ ನಿಯೋಗವನ್ನು ಅಲ್ಲಿನ ವಿಮಾನ ನಿಲ್ದಾಣದಲ್ಲೇ ತಡೆದು ನಿಲ್ಲಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಪಿಟಿಐ ಜತೆ ಮಾತನಾಡಿದ ನಿಯೋಗದ ಸದಸ್ಯರಾಗಿದ್ದ ಟಿಎಂಸಿ ಸಂಸದ ಸುಖೇಂದ್ ಶೇಖರ್ ರಾಯ್ ನಮಗೆ ಅಸ್ಸಾಂ ಗೆ ತೆರಳಲು ತೊಂದರೆಯನ್ನುಂಟು ಮಾಡಲು ಪೋಲೀಸರು ಯೋಜಿಸಿದ್ದಾರೆ. ವಿಮಾನ ನಿಲ್ದಾಣದಲ್ಲಿ  1000 ಪೊಲೀಸರು ಇದ್ದರು ಎಂದಿದ್ದಾರೆ.
ಬರಾಕ್ ವ್ಯಾಲಿ ಪ್ರದೇಶದ ಕಚಾರ್ ಜಿಲ್ಲೆಯ ಕುಂಭಿಗ್ರಾಮ್ ವಿಮಾನ ನಿಲ್ದಾಣದ ವಿಐಪಿ ಕೋಣೆಯಲ್ಲಿ ಆರು ಸಂಸದರು ಸೇರಿದಂತೆ ಟಿಎಂಸಿ ನಿಯೋಗವನ್ನು ಇರಿಸಲಾಗಿದೆ ಎಂದು ಮೂಲಗಳು ಹೇಳಿದೆ. ಕಚಾರ್ ಜಿಲ್ಲಾಡಳಿತ ಎನ್ಆರ್‏ಸಿ ಪ್ರಕ್ರಿಯೆಯಲ್ಲಿ ಯಾವ ವ್ಯಕ್ತಿಗೂ ಪ್ರವೇಶವಿಲ್ಲ ಎಂದಿದ್ದು ಕಳೆದ ರಾತ್ರಿಯಿಂದಲೇ ಸೆಕ್ಷನ್ 144 ರ ಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದೆ.
ಬಿಜೆಪಿಯ ನೇತೃತ್ವದ ಕೇಂದ್ರ ಸರ್ಕಾರ ಎನ್ಆರ್‏ಸಿ ವಿಚಾರದಲ್ಲಿ  "ಮತ ಬ್ಯಾಂಕ್ ರಾಜಕೀಯ" ನಡೆಸುತ್ತಿದೆ  ದೇಶದಲ್ಲಿ "ಭಾರತೀಯ ನಾಗರಿಕರು ನಿರಾಶ್ರಿತರಾಗಿದ್ದಾರೆ" ಎಂದು ಟಿಎಂಸಿ ಅಧಿನಾಯಕಿ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT