ಸಂಗ್ರಹ ಚಿತ್ರ 
ದೇಶ

ತನಿಖಾ ಪ್ರಗತಿಯೇ ಇಲ್ಲ; ದಾಬೋಲ್ಕರ್, ಪನ್ಸಾರೆ ಕೊಲೆ ಪ್ರಕರಣ ಸಂಬಂಧ ಸಿಬಿಐ, ಎಸ್ ಐಟಿಗೆ 'ಹೈ' ತರಾಟೆ

ಖ್ಯಾತ ವಿಚಾರವಾದಿಗಳಾದ ನರೇಂದ್ರ ದಾಬೋಲ್ಕರ್ ಮತ್ತು ಗೋವಿಂದ್ ಪನ್ಸಾರೆ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೇ ಹೈಕೋರ್ಟ್ ಸಿಬಿಐ ಮತ್ತು ಎಸ್ ಐಟಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.

ಮುಂಬೈ: ಖ್ಯಾತ ವಿಚಾರವಾದಿಗಳಾದ ನರೇಂದ್ರ ದಾಬೋಲ್ಕರ್ ಮತ್ತು ಗೋವಿಂದ್ ಪನ್ಸಾರೆ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೇ ಹೈಕೋರ್ಟ್ ಸಿಬಿಐ ಮತ್ತು ಎಸ್ ಐಟಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.
ಪ್ರಕರಣ ಸಂಬಂಧ ಉಭಯ ತನಿಖಾ ಸಂಸ್ಥೆಗಳು ಸಲ್ಲಿಕೆ ಮಾಡಿದ್ದ ತನಿಖಾ ಪ್ರಗತಿ ವರದಿಯನ್ನು ಪರಿಶೀಲಿಸಿದ ಹೈಕೋರ್ಟ್ ತನಿಖಾ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿತು. ಈ ಹಿಂದಿನ ತನಿಖಾ ವರದಿಗೂ ಈಗ ಸಲ್ಲಿಕೆ ಮಾಡಿರುವ ತನಿಖಾ ಪ್ರಗತಿ ವರದಿಗೂ ಅಂತಹ ವ್ಯತ್ಯಾಸಗಳೇನೂ ಇಲ್ಲ. ತನಿಖೆ ನಿಧಾನಗತಿಯಲ್ಲಿ ಸಾಗಿದೆ ಎಂದು ಹೈಕೋರ್ಟ್ ಕಿಡಿಕಾರಿದೆ.
ಇನ್ನು ಸಿಬಿಐ ಮತ್ತು ಎಸ್ ಐಟಿ ಸಲ್ಲಿಕೆ ಮಾಡಿರುವ ತನಿಖಾ ಪ್ರಗತಿ ವರದಿಯಲ್ಲಿ ದಾಬೋಲ್ಕರ್, ಪನ್ಸಾರೆ ಮತ್ತು ಕರ್ನಾಟಕದ ವಿಚಾರವಾದಿ ಎಂಎಂ ಕಲ್ಬುರ್ಗಿ ಹತ್ಯೆ ಬಳಸಲಾಗಿರುವ ಗನ್ ಒಂದೇ ಎಂದು ಶಂಕಿಸಲಾಗಿದೆ. ಇದೇ ವಿಚಾರವನ್ನು ಉಭಯ ತನಿಕಾ ತಂಡಗಳು ಕೋರ್ಟ್ ಗೆ ಹೇಳಿದ್ದು, ಇದರಿಂದ ಸಂತುಷ್ಟಗೊಳ್ಳದ ಕೋರ್ಟ್ ತನಿಖೆಯನ್ನು ತೀವ್ರಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದೆ.
2013ರ ಆಗಸ್ಟ್ 20ರಂದು ನರೇಂದ್ರ ದಾಬೋಲ್ಕರ್ ಅವರನ್ನು ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದು ಹಾಕಿದ್ದರು. ಅಂತೆಯೇ ಕರ್ನಾಟಕದ ವಿಚಾರವಾದಿ ಎಂಎಂ ಕಲ್ಬುರ್ಗಿ ಅವರನ್ನೂ ಅವರ ಮನೆಯಲ್ಲೇ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

Encounter: ಮಹಾರಾಷ್ಟ್ರ-ಛತ್ತೀಸ್‌ಗಢ ಗಡಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರ ಹತ್ಯೆ!

SCROLL FOR NEXT