ಸಂಗ್ರಹ ಚಿತ್ರ 
ದೇಶ

ಕುಪ್ವಾರ ಎನ್ ಕೌಂಟರ್: ಭದ್ರತಾ ಪಡೆಗಳ ಗುಂಡಿಗೆ ಇಬ್ಬರು ಉಗ್ರರು ಹತ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಬಾಲ ಬಿಚ್ಚಿದ್ದು, ಚೆಕ್ ಪೋಸ್ಟ್ ಬಳಿ ಕಾರ್ಯ ನಿರ್ವಹಿಸುತ್ತಿದ್ದ ಸೇನಾಪಡೆಗಳ ಮೇಲೆ ದಿಢೀರ್ ಗುಂಡಿನ ದಾಳಿ ನಡೆಸಿ ಸೇನಾ ಪಡೆಗಳ ಗುಂಡೇಟಿಗೆ ಬಲಿಯಾಗಿದ್ದಾರೆ.

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಬಾಲ ಬಿಚ್ಚಿದ್ದು, ಚೆಕ್ ಪೋಸ್ಟ್ ಬಳಿ ಕಾರ್ಯ ನಿರ್ವಹಿಸುತ್ತಿದ್ದ ಸೇನಾಪಡೆಗಳ ಮೇಲೆ ದಿಢೀರ್ ಗುಂಡಿನ ದಾಳಿ ನಡೆಸಿ ಸೇನಾ ಪಡೆಗಳ ಗುಂಡೇಟಿಗೆ ಬಲಿಯಾಗಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಹೊರವಲಯದ ಲೋಲಬ್ ವ್ಯಾಲಿ ಚೆಕ್ ಪೋಸ್ಟ್ ಬಳಿ ಈ ಘಟನೆ ನಡೆದಿದ್ದು, ಚೆಕ್ ಪೋಸ್ಟ್ ಗೆ ಆಗಮಿಸುತ್ತಿದ್ದ ವಾಹನಗಳನ್ನು ಭದ್ರತಾ ಸಿಬ್ಬಂದಿ ಶೋಧ ನಡೆಸುತ್ತಿದ್ದರು. ಈ ವೇಳೆ ಅಲ್ಲಿಗೆ ಆಗಮಿಸಿದ ಉಗ್ರರು ದಿಢೀರ್ ಗುಂಡಿನ ದಾಳಿ ನಡೆಸಿದ್ದಾರೆ.
ಕೂಡಲೇ ಎಚ್ಚೆತ್ತ ಯೋದರು ಉಗ್ರರ ಮೇಲೆ ಪ್ರತಿ ದಾಳಿ ನಡೆಸಿದ್ದು, ಈ ವೇಳೆ ಇಬ್ಬರು ಉಗ್ರರು ಹತರಾಗಿದ್ದಾರೆ. ಪ್ರಸ್ತುತ ಘಟನಾ ಪ್ರದೇಶದಲ್ಲಿ ಸೇನಾಪಡೆಗಳು ಶೋಧ ಕಾರ್ಯ ನಡೆಸುತ್ತಿದ್ದು, ಹತರಾಗಿರುವ ಉಗ್ರರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. 
ಈ ಬಗ್ಗೆ ಮಾತನಾಡಿರುವ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾ ನಿರ್ದೇಶಕ ಎಸ್ ಪಿ ವೈದ್ ಅವರು, ಲೋಲಬ್ ವ್ಯಾಲಿ ಚೆಕ್ ಪೋಸ್ಟ್  ಬಳಿ ಸೇನಾಪಡೆಗಳ ಮೇಲೆ ದಾಳಿ ಮಾಡಿದ್ದ ಇಬ್ಬರು ಉಗ್ರರನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT