ಸಾಂದರ್ಭಿಕ ಚಿತ್ರ 
ದೇಶ

ಅಸ್ಸಾಂ ಎನ್ಆರ್ ಸಿ ಬಗ್ಗೆ ಮಮತಾ ಬ್ಯಾನರ್ಜಿ ದ್ವಿಮುಖ ನೀತಿ: ಕಾಂಗ್ರೆಸ್

ಅಸ್ಸಾಂನ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ಆರ್ ಸಿ) ವಿಚಾರದಲ್ಲಿ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ದ್ವಿಮುಖ....

ನವದೆಹಲಿ: ಅಸ್ಸಾಂನ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ಆರ್ ಸಿ) ವಿಚಾರದಲ್ಲಿ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ದ್ವಿಮುಖ ನೀತಿ ಅನುಸರಿಸುತ್ತಿದ್ದಾರೆ ಎಂದು ಗುರುವಾರ ಕಾಂಗ್ರೆಸ್ ಆರೋಪಿಸಿದೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಕೇವಲ ಸ್ಥಳೀಯ ಸಮುದಾಯದಿಂದ ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಅಬ್ಬರದ ಕೂಗಾಟ ನಡೆಸುತ್ತಿದ್ದಾರೆ. ಆದರೆ ಅಸ್ಸಾಂ ಸರ್ಕಾರ ಪಶ್ಚಿಮ ಬಂಗಾಳಕ್ಕೆ ಸೇರಿದ ಸುಮಾರು 1.30 ಲಕ್ಷ ಅಭ್ಯರ್ಥಿಗಳಿಗೆ ಪರಂಪರೆ ಪ್ರಮಾಣಪತ್ರಗಳನ್ನು ನೀಡುವಂತೆ ಕೋರಿದಾಗ, ಪಶ್ಚಿಮ ಬಂಗಾಳ ಸರ್ಕಾರ ಕೇವಲ ಶೇ. 25ರಷ್ಟು ಪ್ರಕರಣಗಳಲ್ಲಿ ಮಾತ್ರ ಉತ್ತರಿಸಿದೆ ಎಂದು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ರಿಪುನ್ ಬೋರಾ ಅವರು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.
ಒಂದು ಕಡೆ ಮಮತಾ ಬ್ಯಾನರ್ಜ 40 ಲಕ್ಷ ಜನರನ್ನು ಎನ್ಆರ್ ಸಿ ಕರಡು ವರದಿಯಿಂದ ಹೊರಗಿಟ್ಟಿರುವುದನ್ನು ಸ್ವಾಗತಿಸುತ್ತಾರೆ. ಮತ್ತೊಂದು ಕಡೆ ಎರಡು ರಾಜ್ಯಗಳ ಗಡಿಯನ್ನು ಸೀಲ್ ಮಾಡುತ್ತಿದ್ದಾರೆ ಎಂದು ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಅಧಿರ್ ರಂಜನ್ ಚೌಧರಿ ಅವರು ಆರೋಪಿಸಿದ್ದಾರೆ.
ಎನ್ಆರ್ ಸಿ ಕರಡು ವರದಿಯನ್ನಿಟ್ಟುಕೊಂಡು ಬಿಜೆಪಿ ಮತಗಳ ದೃವೀಕರಣ ಮಾಡುತ್ತಿದ್ದರೆ, ಟಿಎಂಸಿ ಬೆಂಗಾಲಿಗಳ ಸ್ಥಳೀಯ ಭಾವನೆಗಳೊಂದಿಗೆ ಆಟವಾಡುತ್ತಿದೆ ಎಂದು ಇಬ್ಬರು ಕಾಂಗ್ರೆಸ್ ನಾಯಕರು ದೂರಿದ್ದಾರೆ.
ಅಸ್ಸಾಂನಲ್ಲಿ ಅಕ್ರಮ ವಲೆಸಿಗರ ತೆರವು ವಿಚಾರ ಒಂದು ಭಾವನಾತ್ಮಕ ವಿಚಾರವಾಗಿದ್ದು, ಕಾಂಗ್ರೆಸ್ ಅಸ್ಸಾಂನ್ನು ಅಕ್ರಮ ವಲೆಸಿಗರಿಂದ ಮುಕ್ತಗೊಳಿಸಲು ಬದ್ಧವಾಗಿದೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT